ಅಂತಾರಾಷ್ಟ್ರೀಯ

ಚೀನಾದಲ್ಲಿ 6.1ರ ತೀವ್ರತೆಯ ಭೂಕಂಪ: ಅಪಾರ ಸಾವು ನೋವು

ನವದೆಹಲಿ: ವಾಯವ್ಯ ಚೀನಾದ ಗನ್ನು- ಕ್ವಿಂಫೈ ಗಡಿಯಲ್ಲಿ ಸೋಮವಾರ ಮಧ್ಯರಾತ್ರಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಭಾರಿ ಪ್ರಮಾಣದ ಸಾವು ನೋವುಗಳುಂಟಾಗಿರುವ ಬಗ್ಗೆ ವರದಿಯಾಗಿದೆ. ಅಪಾರ ಪ್ರಮಾಣದ ಆಸ್ತಿಗಳಿಗೂ ವ್ಯಾಪಕ ಹಾನಿಯಾಗಿದ್ದು, ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.1ರಷ್ಟಿತ್ತು ಎಂದು ಮೂಲಗಳು ಹೇಳಿವೆ.

ಗನ್ನು- ಕ್ವಿಂಫೈ ಗಡಿಯಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮಡಿದವರ ಸಂಖ್ಯೆ 100ನ್ನು ದಾಟಿದೆ ಎಂದು ಅಧಿಕೃತ ಸುದ್ದಿಸಂಸ್ಥೆ ಕ್ಸಿಗ್ಗುವಾ ವರದಿ ಮಾಡಿದೆ.

ಗನ್ನು ಮತ್ತು ಪಕ್ಕದ ಕ್ವಿಂಫೈ ಪ್ರಾಂತ್ಯದಲ್ಲಿ ಹಲವು ಬಾರಿ ಲಘು ಕಂಪನಗಳೂ ಸಂಭವಿಸಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಮುಂದುವರಿದಿವೆ ಎಂದು ವರದಿ ಹೇಳಿದೆ. ಸ್ಥಳೀಯ ಕಾಲಮಾನದ ಪ್ರಕಾರ ಸೋಮವಾರ ರಾತ್ರಿ 11.59ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆ 6.1ರಷ್ಟಿತ್ತು ಎಂದು ಯೂರೋಪಿಯನ್ ಮೆಡಿಟರೇನಿಯನ್ ಭೂಕಂಪ ಮಾಪನ ಕೇಂದ್ರ ಸ್ಪಷ್ಟಪಡಿಸಿದೆ

ಚೀನಾದ ಲಕ್ಷ್ಮೀಹು ಪಟ್ಟಣದಿಂದ ವಾಯವ್ಯಕ್ಕೆ 102 ಕಿಲೋಮೀಟರ್ ದೂರದಲ್ಲಿ: ಕಿಲೋಮೀಟರ್ ಆಳದಲ್ಲಿ ಈ ಕಂಪನ ಸಂಭವಿಸಿದೆ ಎಂದು ಇಎಂಎಸ್ ಸಿ ವಿವರಿಸಿದೆ. ಚೀನಾದ ವಿಕೋಪ ತಡೆ ಮತ್ತು ಪರಿಹಾರಗಳ ರಾಷ್ಟ್ರೀಯ ಆಯೋಗ, ತುರ್ತು ನಿರ್ವಹಣೆ ಸಚಿವಾಲಯ 4ನೇ ಹಂತದ ತುರ್ತು ವಿಕೋಪ ಪರಿಹಾರ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ಕ್ಸಿನ್ನುವಾ ಹೇಳಿದೆ.

ಈಗಾಗಲೇ ನಿಯೋಜಿತವಾಗಿರುವ ಕಾರ್ಯಪಡೆ ಭೂಕಂಪ ಪೀಡಿತ ಪ್ರದೇಶಗಳಲ್ಲಿ ಈ ವಿಕೋಪದ ಪರಿಣಾಮವನ್ನು ಅಂದಾಜಿಸುತ್ತಿದ್ದು, ಸ್ಥಳೀಯ ಪರಿಹಾರ ಕಾರ್ಯಾಚರಣೆಗಳಿಗೆ ಮಾರ್ಗದರ್ಶನ ನೀಡುತ್ತಿದೆ.

andolanait

Share
Published by
andolanait

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

33 mins ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

36 mins ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

42 mins ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

1 hour ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

1 hour ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

1 hour ago