ಅಂತಾರಾಷ್ಟ್ರೀಯ

ಚೀನಾದಲ್ಲಿ 6.1ರ ತೀವ್ರತೆಯ ಭೂಕಂಪ: ಅಪಾರ ಸಾವು ನೋವು

ನವದೆಹಲಿ: ವಾಯವ್ಯ ಚೀನಾದ ಗನ್ನು- ಕ್ವಿಂಫೈ ಗಡಿಯಲ್ಲಿ ಸೋಮವಾರ ಮಧ್ಯರಾತ್ರಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಭಾರಿ ಪ್ರಮಾಣದ ಸಾವು ನೋವುಗಳುಂಟಾಗಿರುವ ಬಗ್ಗೆ ವರದಿಯಾಗಿದೆ. ಅಪಾರ ಪ್ರಮಾಣದ ಆಸ್ತಿಗಳಿಗೂ ವ್ಯಾಪಕ ಹಾನಿಯಾಗಿದ್ದು, ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.1ರಷ್ಟಿತ್ತು ಎಂದು ಮೂಲಗಳು ಹೇಳಿವೆ.

ಗನ್ನು- ಕ್ವಿಂಫೈ ಗಡಿಯಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮಡಿದವರ ಸಂಖ್ಯೆ 100ನ್ನು ದಾಟಿದೆ ಎಂದು ಅಧಿಕೃತ ಸುದ್ದಿಸಂಸ್ಥೆ ಕ್ಸಿಗ್ಗುವಾ ವರದಿ ಮಾಡಿದೆ.

ಗನ್ನು ಮತ್ತು ಪಕ್ಕದ ಕ್ವಿಂಫೈ ಪ್ರಾಂತ್ಯದಲ್ಲಿ ಹಲವು ಬಾರಿ ಲಘು ಕಂಪನಗಳೂ ಸಂಭವಿಸಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಮುಂದುವರಿದಿವೆ ಎಂದು ವರದಿ ಹೇಳಿದೆ. ಸ್ಥಳೀಯ ಕಾಲಮಾನದ ಪ್ರಕಾರ ಸೋಮವಾರ ರಾತ್ರಿ 11.59ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆ 6.1ರಷ್ಟಿತ್ತು ಎಂದು ಯೂರೋಪಿಯನ್ ಮೆಡಿಟರೇನಿಯನ್ ಭೂಕಂಪ ಮಾಪನ ಕೇಂದ್ರ ಸ್ಪಷ್ಟಪಡಿಸಿದೆ

ಚೀನಾದ ಲಕ್ಷ್ಮೀಹು ಪಟ್ಟಣದಿಂದ ವಾಯವ್ಯಕ್ಕೆ 102 ಕಿಲೋಮೀಟರ್ ದೂರದಲ್ಲಿ: ಕಿಲೋಮೀಟರ್ ಆಳದಲ್ಲಿ ಈ ಕಂಪನ ಸಂಭವಿಸಿದೆ ಎಂದು ಇಎಂಎಸ್ ಸಿ ವಿವರಿಸಿದೆ. ಚೀನಾದ ವಿಕೋಪ ತಡೆ ಮತ್ತು ಪರಿಹಾರಗಳ ರಾಷ್ಟ್ರೀಯ ಆಯೋಗ, ತುರ್ತು ನಿರ್ವಹಣೆ ಸಚಿವಾಲಯ 4ನೇ ಹಂತದ ತುರ್ತು ವಿಕೋಪ ಪರಿಹಾರ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ಕ್ಸಿನ್ನುವಾ ಹೇಳಿದೆ.

ಈಗಾಗಲೇ ನಿಯೋಜಿತವಾಗಿರುವ ಕಾರ್ಯಪಡೆ ಭೂಕಂಪ ಪೀಡಿತ ಪ್ರದೇಶಗಳಲ್ಲಿ ಈ ವಿಕೋಪದ ಪರಿಣಾಮವನ್ನು ಅಂದಾಜಿಸುತ್ತಿದ್ದು, ಸ್ಥಳೀಯ ಪರಿಹಾರ ಕಾರ್ಯಾಚರಣೆಗಳಿಗೆ ಮಾರ್ಗದರ್ಶನ ನೀಡುತ್ತಿದೆ.

andolanait

Share
Published by
andolanait

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

7 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

9 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

11 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

11 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

12 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

12 hours ago