ನವದೆಹಲಿ: ವಾಯವ್ಯ ಚೀನಾದ ಗನ್ನು- ಕ್ವಿಂಫೈ ಗಡಿಯಲ್ಲಿ ಸೋಮವಾರ ಮಧ್ಯರಾತ್ರಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಭಾರಿ ಪ್ರಮಾಣದ ಸಾವು ನೋವುಗಳುಂಟಾಗಿರುವ ಬಗ್ಗೆ ವರದಿಯಾಗಿದೆ. ಅಪಾರ ಪ್ರಮಾಣದ ಆಸ್ತಿಗಳಿಗೂ ವ್ಯಾಪಕ ಹಾನಿಯಾಗಿದ್ದು, ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.1ರಷ್ಟಿತ್ತು ಎಂದು ಮೂಲಗಳು ಹೇಳಿವೆ.
ಗನ್ನು- ಕ್ವಿಂಫೈ ಗಡಿಯಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮಡಿದವರ ಸಂಖ್ಯೆ 100ನ್ನು ದಾಟಿದೆ ಎಂದು ಅಧಿಕೃತ ಸುದ್ದಿಸಂಸ್ಥೆ ಕ್ಸಿಗ್ಗುವಾ ವರದಿ ಮಾಡಿದೆ.
ಗನ್ನು ಮತ್ತು ಪಕ್ಕದ ಕ್ವಿಂಫೈ ಪ್ರಾಂತ್ಯದಲ್ಲಿ ಹಲವು ಬಾರಿ ಲಘು ಕಂಪನಗಳೂ ಸಂಭವಿಸಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಮುಂದುವರಿದಿವೆ ಎಂದು ವರದಿ ಹೇಳಿದೆ. ಸ್ಥಳೀಯ ಕಾಲಮಾನದ ಪ್ರಕಾರ ಸೋಮವಾರ ರಾತ್ರಿ 11.59ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆ 6.1ರಷ್ಟಿತ್ತು ಎಂದು ಯೂರೋಪಿಯನ್ ಮೆಡಿಟರೇನಿಯನ್ ಭೂಕಂಪ ಮಾಪನ ಕೇಂದ್ರ ಸ್ಪಷ್ಟಪಡಿಸಿದೆ
ಚೀನಾದ ಲಕ್ಷ್ಮೀಹು ಪಟ್ಟಣದಿಂದ ವಾಯವ್ಯಕ್ಕೆ 102 ಕಿಲೋಮೀಟರ್ ದೂರದಲ್ಲಿ: ಕಿಲೋಮೀಟರ್ ಆಳದಲ್ಲಿ ಈ ಕಂಪನ ಸಂಭವಿಸಿದೆ ಎಂದು ಇಎಂಎಸ್ ಸಿ ವಿವರಿಸಿದೆ. ಚೀನಾದ ವಿಕೋಪ ತಡೆ ಮತ್ತು ಪರಿಹಾರಗಳ ರಾಷ್ಟ್ರೀಯ ಆಯೋಗ, ತುರ್ತು ನಿರ್ವಹಣೆ ಸಚಿವಾಲಯ 4ನೇ ಹಂತದ ತುರ್ತು ವಿಕೋಪ ಪರಿಹಾರ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ಕ್ಸಿನ್ನುವಾ ಹೇಳಿದೆ.
ಈಗಾಗಲೇ ನಿಯೋಜಿತವಾಗಿರುವ ಕಾರ್ಯಪಡೆ ಭೂಕಂಪ ಪೀಡಿತ ಪ್ರದೇಶಗಳಲ್ಲಿ ಈ ವಿಕೋಪದ ಪರಿಣಾಮವನ್ನು ಅಂದಾಜಿಸುತ್ತಿದ್ದು, ಸ್ಥಳೀಯ ಪರಿಹಾರ ಕಾರ್ಯಾಚರಣೆಗಳಿಗೆ ಮಾರ್ಗದರ್ಶನ ನೀಡುತ್ತಿದೆ.
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…