The Governor of Nagaland, Shri R.N. Ravi calling on the Prime Minister, Shri Narendra Modi, in New Delhi on August 08, 2019.
ನವದೆಹಲಿ : ಭಾರತ ಮತ್ತು ಶ್ರೀಲಂಕಾ ರಾಜತಾಂತ್ರಿಕ ಮತ್ತು ಆರ್ಥಿಕ ಸಂಬಂಧಗಳಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯ ವೃದ್ಧಿಗೆ ಎರಡು ರಾಷ್ಟ್ರಗಳ ನಡುವೆ ದೋಣಿ ಸೇವೆಯ ಪ್ರಾರಂಭ ಪ್ರಮುಖ ಮೈಲಿಗಲ್ಲು ಎಂದು ಮೋದಿ ಶ್ಲಾಸಿದ್ದಾರೆ.
ಭಾರತದ ನಾಗಪಟ್ಟಣಂ ಮತ್ತು ಶ್ರೀಲಂಕಾದ ಕಂಕಸಂತುರೈ ನಡುವೆ ದೋಣಿ ಸೇವೆಗಳನ್ನು ಪ್ರಾರಂಭಿಸುವ ಕಾರ್ಯಕ್ರಮವನ್ನು ವೀಡಿಯೊ ಸಂದೇಶದ ಮೂಲಕ ಉದ್ದೇಶಿಸಿ ಮೋದಿ ಮಾತನಾಡಿದರು. ಈ ದೋಣಿ ಸಂಪರ್ಕವು ಎರಡು ನಗರಗಳನ್ನು ಹತ್ತಿರ ತರುವುದು ಮಾತ್ರವಲ್ಲ. ಇದು ನಮ್ಮ ದೇಶಗಳನ್ನು ಹತ್ತಿರಕ್ಕೆ ತರುತ್ತದೆ, ನಮ್ಮ ಜನರನ್ನು ಹತ್ತಿರಗೊಳಿಸುತ್ತದೆ ಮತ್ತು ನಮ್ಮ ಹೃದಯಗಳನ್ನು ಹತ್ತಿರ ತರುತ್ತದೆ ಎಂದು ಅವರು ಹೇಳಿದರು.
ಭಾರತ ಮತ್ತು ಶ್ರೀಲಂಕಾ ರಾಜತಾಂತ್ರಿಕ ಮತ್ತು ಆರ್ಥಿಕ ಸಂಬಂಧಗಳಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿವೆ ಮತ್ತು ನಾಗಪಟ್ಟಣಂ ಮತ್ತು ಕಂಕಸಂತುರೈ ನಡುವೆ ದೋಣಿ ಸೇವೆಯನ್ನು ಪ್ರಾರಂಭಿಸುವುದು ಸಂಬಂಧಗಳನ್ನು ಬಲಪಡಿಸುವಲ್ಲಿ ಪ್ರಮುಖ ಮೈಲಿಗಲ್ಲು ಎಂದು ಪ್ರಧಾನಿ ಹೇಳಿದರು.
ಭಾರತ ಮತ್ತು ಶ್ರೀಲಂಕಾ ನಡುವಿನ ಸಂಸ್ಕøತಿ, ವಾಣಿಜ್ಯ ಮತ್ತು ನಾಗರಿಕತೆಯ ಹಂಚಿಕೆಯ ಇತಿಹಾಸವನ್ನು ಒತ್ತಿಹೇಳುತ್ತಾ, ನಾಗಪಟ್ಟಣಂ ಮತ್ತು ಹತ್ತಿರದ ಪಟ್ಟಣಗಳು ಶ್ರೀಲಂಕಾ ಸೇರಿದಂತೆ ಅನೇಕ ದೇಶಗಳೊಂದಿಗೆ ಸಮುದ್ರ ವ್ಯಾಪಾರಕ್ಕೆ ಹೆಸರುವಾಸಿಯಾಗಿದೆ ಮತ್ತು ಐತಿಹಾಸಿಕ ಬಂದರು ಪೂಂಪುಹಾರ್ ಅನ್ನು ಉಲ್ಲೇಖಿಸುತ್ತದೆ ಎಂದು ತಿಳಿಸಿದರು.
ಅವರು ಎರಡು ದೇಶಗಳ ನಡುವಿನ ದೋಣಿಗಳು ಮತ್ತು ಹಡಗುಗಳ ಚಲನೆಯನ್ನು ವಿವರಿಸುವ ಸಂಗಮ್ ಯುಗದ ಸಾಹಿತ್ಯಗಳಾದ ಪಟ್ಟಿನಪ್ಪಲೈ ಮತ್ತು ಮಣಿಮೇಕಲೈ ಬಗ್ಗೆ ಮಾತನಾಡಿದರು.
ಭಾರತ ಮತ್ತು ಶ್ರೀಲಂಕಾವನ್ನು ಸಂಪರ್ಕಿಸುವ ಸೇತುವೆಯನ್ನು ಉಲ್ಲೇಖಿಸುವ ಮಹಾನ್ ಕವಿ ಸುಬ್ರಮಣ್ಯ ಭಾರತಿ ಅವರ ಸಿಂಧು ನದಿಯಿಂ ಮಿಸೈ ಗೀತೆಯನ್ನು ಮೋದಿ ಸ್ಪರ್ಶಿಸಿದರು. ದೋಣಿ ಸೇವೆಯು ಎಲ್ಲಾ ಐತಿಹಾಸಿಕ ಮತ್ತು ಸಾಂಸ್ಕøತಿಕ ಸಂಪರ್ಕಗಳನ್ನು ಜೀವಂತಗೊಳಿಸುತ್ತದೆ ಎಂದು ಅವರು ಹೇಳಿದರು.
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…