ಅಂತಾರಾಷ್ಟ್ರೀಯ

ವಿಮಾನ ದುರಂತ: ಕಝಾಕಿಸ್ತಾನದಲ್ಲಿ ಪ್ರಯಾಣಿಕರಿದ್ದ ವಿಮಾನ ಪತನ

ಮಾಸ್ಕೋ:ಅಜರ್‌ಬೈಜಾನ್‌ನಿಂದ ರಷ್ಯಾಕ್ಕೆ ತೆರಳುತ್ತಿದ್ದ ಎಂಬ್ರೆಯರ್‌ ಪ್ರಯಾಣಿಕ ವಿಮಾನವೊಂದು ಕಝಾಕಿಸ್ತಾನದ ಅಕ್ಟೌ ನಗರದ ಸಮೀಪದಲ್ಲಿ ಪತನಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ವಿಮಾನ ಅಜರ್‌ಬೈಜಾಣ್‌ ಏರ್‌ಲೈನ್ಸ್‌ ನಿರ್ವಹಿಸುತ್ತಿದ್ದ ವಿಮಾನ ಇದಾಗಿದ್ದು, ಐವರು ಸಿಬ್ಬಂದಿಯೊಂದಿಗೆ ಅಂದಾಜು 67 ಮಂದಿ ಪ್ರಯಾಣಿಸುತ್ತಿದ್ದರು.ಇದು ಅಜೆರ್‌ಬೈಜಾನ್‌ನ ರಾಜಧಾನಿ ಬಾಕುವಿನಿಂದ ರಷ್ಯಾದ ಚೆಚೆನ್ಯಾದ ಗ್ರೋಜ್ನಿಗೆ ಸಂಚಾರ ಮಾಡುತ್ತಿತ್ತು. ಆದರೆ ಅಕ್ಟೌ ನಗರದಿಂದ ಸರಿಸುಮಾರು 3 ಕಿ.ಮೀ.ಇರುವಾಗ
ಗ್ರೋಜ್ನಿಯ ಮಂಜಿನಿಂದಾಗಿ ತನ್ನ ಸ್ಥಳ ಮಾರ್ಗವನ್ನು ಬದಲಾಯಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಇನ್ನು ವಿಮಾನ ನಿಲ್ದಾಣದ ಸಮೀಪದಲ್ಲೇ ತೆರೆದ ಮೈದಾನದಲ್ಲಿ ವಿಮಾನವನ್ನು ಲ್ಯಾಂಡ್‌ ಮಾಡಲಾಗಿದ್ದು, ನೆಲಕ್ಕೆ ಅಪ್ಪಳಿಸುತ್ತಿದ್ದಂತೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿಯವರು ಬೆಂಕಿಯನ್ನು ಆರಿಸಿದ್ದಾರೆ. ಹೀಗಾಗಿ ವಿಮಾನದ ಹಿಂಭಾಗದ ತುದಿಯಲ್ಲಿರುವ ತುರ್ತು ನಿರ್ಗಮನದಿಂದ ಪ್ರಯಾಣಿಕರನ್ನು ಡಿಬೋರ್ಡಿಂಗ್‌ ಮಾಡಲಾಗಿದೆ. ಆದರೆ ಈ ವಿಮಾನದಲ್ಲಿ ಪ್ರಯಾಣಿಕರಲ್ಲಿ 12 ಮಂದಿ ಬದುಕುಳಿದ್ದಾರೆ ಎಂಬ ಮಾಹಿತಿಯನ್ನು ಕಝಾಕಿಸ್ತಾನದ ತುರ್ತು ಸಚಿವಾಲಯ ತನ್ನ ಹೇಳಿಕೆಯಲ್ಲಿ ಪ್ರಕಟಿಸಿದೆ.

ಅರ್ಚನ ಎಸ್‌ ಎಸ್

Share
Published by
ಅರ್ಚನ ಎಸ್‌ ಎಸ್

Recent Posts

ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷ: ಇನ್ನೂ ಚೇತರಿಸಿಕೊಳ್ಳದ ಪಾಕ್‌

ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷವಾಗಿದೆ.…

17 mins ago

ಡಿಕೆಶಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರೋದು ನಿಜ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರುವುದು ನಿಜ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.…

52 mins ago

ಮೈಸೂರಿನಲ್ಲಿ ಮುಂದುವರಿದ ಕಾಡುಪ್ರಾಣಿಗಳ ಉಪಟಳ

ಮೈಸೂರು: ಮೈಸೂರಿನಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ಚಿರತೆಯೊಂದ ನಾಯಿ ಬೇಟೆಯಾಡಿರುವ ಘಟನೆ ಗೌರಿಶಂಕರನಗರದ ಗವಿಮಠದ ಹತ್ತಿರ ನಡೆದಿದೆ. ರಾತ್ರೋರಾತ್ರಿ ಚಿರತೆಯೊಂದು…

2 hours ago

ಓದುಗರ ಪತ್ರ: ಚಿನ್ನದ ಹೆಸರಿನಲ್ಲಾಗುವ ವಂಚನೆಯನ್ನು ತಡೆಗಟ್ಟಿ

ಚಿನ್ನದ ಹೂಡಿಕೆಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಅತ್ಯಂತ ಸಂಕೀರ್ಣವೂ ಮತ್ತು ವ್ಯವಸ್ಥಿತವೂ ಆಗಿದೆ. ವಂಚಕರು ಮುಖ್ಯವಾಗಿ ಪೊಂಜಿ ಮಾದರಿಯ ಯೋಜನೆಗಳನ್ನು…

2 hours ago

ಓದುಗರ ಪತ್ರ: ವಿಜಯ್ ಉತ್ತಮ ಆಡಳಿತ ನೀಡಲಿ

ತಮಿಳುನಾಡಿನ ‘ತಮಿಳಿಗ ವೆಟ್ರಿ ಕಳಗಂ’ ಪಕ್ಷದ ಸ್ಥಾಪಕ ಜೋಸೆಫ್ ವಿಜಯ್ ಅವರು ಕೇವಲ ಎರಡು ವರ್ಷಗಳ ಹಿಂದೆ ರಾಜಕೀಯ ಪಕ್ಷ…

2 hours ago

ಓದುಗರ ಪತ್ರ: ಖಾಸಗಿ ಅಂಗಡಿಗಳ ಮಾಲೀಕರಿಂದ ರಸ್ತೆ ಅತಿಕ್ರಮಣ

ಮೈಸೂರು ನಗರದ ಅಶೋಕ ರಸ್ತೆ, ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಧನ್ವಂತರಿ ರಸ್ತೆ, ಶಿವರಾಂ ಪೇಟೆಯ ಹಲವಾರು ಕಡೆಗಳಲ್ಲಿ…

2 hours ago