ಅಂತಾರಾಷ್ಟ್ರೀಯ

ಎಲ್ಲಾ ರಾಷ್ಟ್ರಗಳು ಕೊರೊನಾ ಪ್ರಕರಣಗಳ ಮೇಲೆ ನಿಗಾ ಇಡಿ:  ಡಬ್ಲ್ಯೂಎಚ್‌ಒ

ಕೊರೊನಾದ ಹೊಸ ರೂಪಾಂತರಿ ಜೆಎನ್​1 ಮತ್ತು ಇನ್​ಫ್ಲುಯೆನ್ಜಾ ಸೇರಿದಂತೆ ಉಸಿರಾಟ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ರಕ್ಷಣಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವಂತೆ ವಿಶ್ವ ಆರೋಗ್ಯ ಸಂಸ್ಥೆ ಸಲಹೆ ನೀಡಿದೆ.

ಕ್ರಿಸ್‌ಮಸ್‌​ ಹಾಗೂ ಹೊಸ ವರ್ಷದ ಹೊತ್ತಲ್ಲೇ ಕೊರೊನಾ ವೈರಸ್‌ ಮತ್ತೆ ಭೀತಿ ಹುಟ್ಟಿಸಿದೆ. ಇದರ ಬೆನ್ನಲ್ಲೇ ಕೋವಿಡ್‌ ಪ್ರಕರಣಗಳ ಮೇಲೆ ಎಲ್ಲಾ ರಾಷ್ಟ್ರಗಳು ನಿಗಾ ಇಡಬೇಕು ಎಂದು ಡಬ್ಲ್ಯೂಎಚ್‌ಒ ಸೂಚನೆ ನೀಡಿದೆ.

ಕೇರಳದಲ್ಲಿ ಮೊದಲ ಪ್ರಕರಣ ವರದಿಯಾದ ನಂತರ, ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಕರಣಗಳಲ್ಲಿ ತ್ವರಿತಗತಿಯಲ್ಲಿ ಏರಿಕೆ ಕಂಡುಬಂದಿದೆ. ಏತನ್ಮಧ್ಯೆ, ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡುವಂತೆ ಸೂಚನೆ ನೀಡಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 106 ಕೊರೊನಾ ಪಾಸಿಟಿವ್‌ ಪ್ರಕರಣಗಳು ದಾಖಲಾಗಿದ್ದು, ಇಂದು ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 344 ಕ್ಕೆ ಏರಿಕೆಯಾಗಿದ್ದು,. ಪಾಸಿಟಿವಿ ರೇಟ್‌ 7.35 % ಆಗಿದೆ.

ಹೋಂ ಐಸೋಲೇಷನ್ ಕಡ್ಡಾಯಗೊಳಿಸುವುದು, ಕ್ವಾರಂಟೈನ್ ಆದವರ ಮೇಲೆ ಹೆಚ್ಚು ನಿಗಾ ಇಡುವುದು, ಕೋವಿಡ್ ಟೆಸ್ಟ್ ಹೆಚ್ಚಳ, ನೆರೆ ರಾಜ್ಯಗಳಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚು ನಿಗಾ ಇಡುವುದು ಹಾಗೂ ಆಕ್ಸಿಜನ್, ವೆಂಟಿಲೇಟರ್ ಹಾಗೂ ವೈದ್ಯಕೀಯ ಉಪಕರಣಗಳನ್ನು ಸಿದ್ಧಪಡಿಸಿಕೊಳ್ಳಲು ಉದ್ದೇಶಿಸಿದೆ.

andolanait

Share
Published by
andolanait

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

9 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

10 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

10 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

11 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

11 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

13 hours ago