ಅಂತಾರಾಷ್ಟ್ರೀಯ

ಸೋವಿಯತ್‌ ಒಕ್ಕೂಟದಂತೆ ಅಮೆರಿಕವೂ ನಾಶವಾಗುತ್ತದೆ : ಹಮಾಸ್‌ ಎಚ್ಚರಿಕೆ

ಬೈರುತ್‌ : ಒಂದಲ್ಲ ಒಂದುದಿನ ಸೋವಿಯತ್‌ ಒಕ್ಕೂಟದಂತೆ ಅಮೆರಿಕ ಕೂಡ ನಾಶವಾಗುತ್ತದೆ ಎಂದು ಹಮಾಸ್‌ ಹಿರಿಯ ಅಧಿಕಾರಿ ಅಲಿ ಬರಾಕಾ ಎಚ್ಚರಿಕೆ ನೀಡಿದ್ದಾರೆ.

ಲೆಬನಾನ್‌ ಯುಟ್ಯೂಬ್‌ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅಲಿ ಬರಾಕಾ, ಅಮೆರಿಕದ ಎಲ್ಲಾ ಶತ್ರುಗಳು ಸಮಾಲೋಚನೆ ನಡೆಸುತ್ತಿದ್ದಾರೆ ಮತ್ತು ಹತ್ತಿರವಾಗುತ್ತಿದ್ದಾರೆ. ಅವರೆಲ್ಲರೂ ಒಟ್ಟಿಗೇ ಒಂದು ದಿನ ಯುದ್ಧ ಮಾಡಬಹುದು. ಆಗ ಅಮೆರಿಕ ಶಕ್ತಿಯುತ ರಾಷ್ಟ್ರವಾಗಿ ಉಳಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಇದೇ ವೇಳೆ ಉತ್ತರ ಕೊರಿಯಾದ ಸಾಮರ್ಥ್ಯವನ್ನು ಶ್ಲಾಘಿಸಿರುವ ಬರಾಕಾ, ನಮಗೆ ತಿಳಿದಿರುವಂತೆ ವಿಶ್ವದಲ್ಲಿ ಅಮೆರಿಕವನ್ನು ಹೊಡೆದುರುಳಿಸುವ ಸಾಮರ್ಥ್ಯ ಇರುವುದು ಉತ್ತರ ಕೊರಿಯಾಕ್ಕೆ. ಶೀಘ್ರದಲ್ಲೇ ಇಸ್ರೇಲ್‌ ಹಮಾಸ್‌ ಯುದ್ಧದ ನಡುವೆ ಉತ್ತರ ಕೊರಿಯಾ ಮಧ್ಯಪ್ರವೇಶಿಸುವ ದಿನ ಬರಬಹುದು. ಇರಾನ್‌ ಅಮೆರಿಕವನ್ನು ಹೊಡೆಯುವ ಸಾಮರ್ಥ್ಯ ಹೊಂದಿಲ್ಲ. ಒಂದು ವೇಳೆ ಇರಾನ್‌ ಯುದ್ಧದ ನಡುವೆ ಮಧ್ಯಪ್ರವೇಶಿಸಿದರೆ, ಅದು ಝಿಯೋನಿಸ್ಟ್ ಘಟಕ ಮತ್ತು ಈ ಪ್ರದೇಶದಲ್ಲಿನ ಅಮೆರಿಕಾದ ನೆಲೆಗಳನ್ನು ಹೊಡೆಯಬಹುದ ಅಷ್ಟೇ ಎಂದು ತಿಳಿಸಿದ್ದಾರೆ.

ಹಮಾಸ್‌ ಬಂಡುಕೋರರ ವಿರುದ್ಧ ಸಮರ ನಡೆಸುತ್ತಿರುವ ಇಸ್ರೇಲ್‌ ಬೆನ್ನಿಗೆ ಬೆಂಬಲವಾಗಿ ನಿಂತಿರುವ ಅಮೆರಿಕ ಸರ್ಕಾರ ಈಗ 14.5 ಬಿಲಿಯನ್‌ ಅಮೆರಿಕನ್‌ ಡಾಲರ್‌ (1.19 ಲಕ್ಷ ಕೋಟಿ ರೂ.) ನೆರವು ಘೋಷಣೆ ಮಾಡಿದೆ. ಅಧ್ಯಕ್ಷ ಜೋ ಬೈಡನ್‌ ಆಡಳಿತ ಇಸ್ರೇಲ್‌ಗೆ ಮಿಲಿಟರಿ ನೆರವು ನೀಡುವ ಸಂಬಂಧ ಹೌಸ್‌ ಆಫ್‌ ರೆಪ್ರೆಸೆಂಟಿಟಿವ್ಸ್ ಸಭೆಯಲ್ಲಿ ಮಂಡಿಸಿದ ವಿಧೇಯಕ ಅಂಗೀಕಾರಗೊಂಡಿದೆ. ಸ್ಪೀಕರ್‌ ಮೈಕ್‌ ಜಾನ್ಸನ್‌ ಮಂಡಿಸಿದ ಪ್ರಸ್ತಾವಕ್ಕೆ ರಿಪಬ್ಲಿಕನ್‌ ಪಕ್ಷದ ಹಿಡಿತದಲ್ಲಿರುವ ಜನಪ್ರತಿನಿಧಿ ಸಭೆ ಅಂಗೀಕಾರದ ಮುದ್ರೆ ಒತ್ತಿದೆ.

ಜನ ಪ್ರತಿನಿಧಿ ಸಭೆಯಲ್ಲಿ 226-196 ಮತಗಳಿಂದ ವಿಧೇಯಕ ಅಂಗೀಕಾರಗೊಂಡಿದ್ದು, ಡೆಮಾಕ್ರಟಿಕ್‌ ಪಕ್ಷ ಬಹುಮತ ಹೊಂದಿರುವ ಸೆನೆಟ್‌ ಆರ್ಥಿಕ ನೆರವು ನೀಡುವ ಉದ್ದೇಶದ ವಿಧೇಯಕಕ್ಕೆ ಅಂಗೀಕಾರ ನೀಡಬೇಕಿದೆ. ಸೆನೆಟ್‌ ವಿಧೇಯಕಕ್ಕೆ ಅನುಮೋದನೆ ನೀಡದಿದ್ದರೆ ‘ವಿಟೋ’ ಅಧಿಕಾರ ಬಳಸಬೇಕಾಗುತ್ತದೆ ಎಂದು ಅಧ್ಯಕ್ಷ ಬೈಡನ್‌ ಎಚ್ಚರಿಕೆ ನೀಡಿದ್ದಾರೆ.

ಯುದ್ಧ ಮುಂದುವರಿಸಲು ಇಸ್ರೇಲ್‌ ರಕ್ಷಣಾ ಪಡೆಗೆ ಅಗತ್ಯವಿರುವ ಶಸ್ತ್ರಾಸ್ತ್ರ ಬಲ ನೀಡಲು ನಿರ್ಧರಿಸಲಾಗಿದೆ. ಇಸ್ರೇಲ್‌ನ ಐರನ್‌ ಡೋಮ್‌ ಬಲಪಡಿಸಲು 4 ಮಿಲಿಯನ್‌ ಡಾಲರ್‌ ಹಣ ವಿನಿಯೋಗಿಸಲು ಒಪ್ಪಿಗೆ ನೀಡಿದೆ.

lokesh

Share
Published by
lokesh
Tags: americahamas

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

3 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

3 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

3 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

3 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

3 hours ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

3 hours ago