ಅಂತಾರಾಷ್ಟ್ರೀಯ

ಸೋವಿಯತ್‌ ಒಕ್ಕೂಟದಂತೆ ಅಮೆರಿಕವೂ ನಾಶವಾಗುತ್ತದೆ : ಹಮಾಸ್‌ ಎಚ್ಚರಿಕೆ

ಬೈರುತ್‌ : ಒಂದಲ್ಲ ಒಂದುದಿನ ಸೋವಿಯತ್‌ ಒಕ್ಕೂಟದಂತೆ ಅಮೆರಿಕ ಕೂಡ ನಾಶವಾಗುತ್ತದೆ ಎಂದು ಹಮಾಸ್‌ ಹಿರಿಯ ಅಧಿಕಾರಿ ಅಲಿ ಬರಾಕಾ ಎಚ್ಚರಿಕೆ ನೀಡಿದ್ದಾರೆ.

ಲೆಬನಾನ್‌ ಯುಟ್ಯೂಬ್‌ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅಲಿ ಬರಾಕಾ, ಅಮೆರಿಕದ ಎಲ್ಲಾ ಶತ್ರುಗಳು ಸಮಾಲೋಚನೆ ನಡೆಸುತ್ತಿದ್ದಾರೆ ಮತ್ತು ಹತ್ತಿರವಾಗುತ್ತಿದ್ದಾರೆ. ಅವರೆಲ್ಲರೂ ಒಟ್ಟಿಗೇ ಒಂದು ದಿನ ಯುದ್ಧ ಮಾಡಬಹುದು. ಆಗ ಅಮೆರಿಕ ಶಕ್ತಿಯುತ ರಾಷ್ಟ್ರವಾಗಿ ಉಳಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಇದೇ ವೇಳೆ ಉತ್ತರ ಕೊರಿಯಾದ ಸಾಮರ್ಥ್ಯವನ್ನು ಶ್ಲಾಘಿಸಿರುವ ಬರಾಕಾ, ನಮಗೆ ತಿಳಿದಿರುವಂತೆ ವಿಶ್ವದಲ್ಲಿ ಅಮೆರಿಕವನ್ನು ಹೊಡೆದುರುಳಿಸುವ ಸಾಮರ್ಥ್ಯ ಇರುವುದು ಉತ್ತರ ಕೊರಿಯಾಕ್ಕೆ. ಶೀಘ್ರದಲ್ಲೇ ಇಸ್ರೇಲ್‌ ಹಮಾಸ್‌ ಯುದ್ಧದ ನಡುವೆ ಉತ್ತರ ಕೊರಿಯಾ ಮಧ್ಯಪ್ರವೇಶಿಸುವ ದಿನ ಬರಬಹುದು. ಇರಾನ್‌ ಅಮೆರಿಕವನ್ನು ಹೊಡೆಯುವ ಸಾಮರ್ಥ್ಯ ಹೊಂದಿಲ್ಲ. ಒಂದು ವೇಳೆ ಇರಾನ್‌ ಯುದ್ಧದ ನಡುವೆ ಮಧ್ಯಪ್ರವೇಶಿಸಿದರೆ, ಅದು ಝಿಯೋನಿಸ್ಟ್ ಘಟಕ ಮತ್ತು ಈ ಪ್ರದೇಶದಲ್ಲಿನ ಅಮೆರಿಕಾದ ನೆಲೆಗಳನ್ನು ಹೊಡೆಯಬಹುದ ಅಷ್ಟೇ ಎಂದು ತಿಳಿಸಿದ್ದಾರೆ.

ಹಮಾಸ್‌ ಬಂಡುಕೋರರ ವಿರುದ್ಧ ಸಮರ ನಡೆಸುತ್ತಿರುವ ಇಸ್ರೇಲ್‌ ಬೆನ್ನಿಗೆ ಬೆಂಬಲವಾಗಿ ನಿಂತಿರುವ ಅಮೆರಿಕ ಸರ್ಕಾರ ಈಗ 14.5 ಬಿಲಿಯನ್‌ ಅಮೆರಿಕನ್‌ ಡಾಲರ್‌ (1.19 ಲಕ್ಷ ಕೋಟಿ ರೂ.) ನೆರವು ಘೋಷಣೆ ಮಾಡಿದೆ. ಅಧ್ಯಕ್ಷ ಜೋ ಬೈಡನ್‌ ಆಡಳಿತ ಇಸ್ರೇಲ್‌ಗೆ ಮಿಲಿಟರಿ ನೆರವು ನೀಡುವ ಸಂಬಂಧ ಹೌಸ್‌ ಆಫ್‌ ರೆಪ್ರೆಸೆಂಟಿಟಿವ್ಸ್ ಸಭೆಯಲ್ಲಿ ಮಂಡಿಸಿದ ವಿಧೇಯಕ ಅಂಗೀಕಾರಗೊಂಡಿದೆ. ಸ್ಪೀಕರ್‌ ಮೈಕ್‌ ಜಾನ್ಸನ್‌ ಮಂಡಿಸಿದ ಪ್ರಸ್ತಾವಕ್ಕೆ ರಿಪಬ್ಲಿಕನ್‌ ಪಕ್ಷದ ಹಿಡಿತದಲ್ಲಿರುವ ಜನಪ್ರತಿನಿಧಿ ಸಭೆ ಅಂಗೀಕಾರದ ಮುದ್ರೆ ಒತ್ತಿದೆ.

ಜನ ಪ್ರತಿನಿಧಿ ಸಭೆಯಲ್ಲಿ 226-196 ಮತಗಳಿಂದ ವಿಧೇಯಕ ಅಂಗೀಕಾರಗೊಂಡಿದ್ದು, ಡೆಮಾಕ್ರಟಿಕ್‌ ಪಕ್ಷ ಬಹುಮತ ಹೊಂದಿರುವ ಸೆನೆಟ್‌ ಆರ್ಥಿಕ ನೆರವು ನೀಡುವ ಉದ್ದೇಶದ ವಿಧೇಯಕಕ್ಕೆ ಅಂಗೀಕಾರ ನೀಡಬೇಕಿದೆ. ಸೆನೆಟ್‌ ವಿಧೇಯಕಕ್ಕೆ ಅನುಮೋದನೆ ನೀಡದಿದ್ದರೆ ‘ವಿಟೋ’ ಅಧಿಕಾರ ಬಳಸಬೇಕಾಗುತ್ತದೆ ಎಂದು ಅಧ್ಯಕ್ಷ ಬೈಡನ್‌ ಎಚ್ಚರಿಕೆ ನೀಡಿದ್ದಾರೆ.

ಯುದ್ಧ ಮುಂದುವರಿಸಲು ಇಸ್ರೇಲ್‌ ರಕ್ಷಣಾ ಪಡೆಗೆ ಅಗತ್ಯವಿರುವ ಶಸ್ತ್ರಾಸ್ತ್ರ ಬಲ ನೀಡಲು ನಿರ್ಧರಿಸಲಾಗಿದೆ. ಇಸ್ರೇಲ್‌ನ ಐರನ್‌ ಡೋಮ್‌ ಬಲಪಡಿಸಲು 4 ಮಿಲಿಯನ್‌ ಡಾಲರ್‌ ಹಣ ವಿನಿಯೋಗಿಸಲು ಒಪ್ಪಿಗೆ ನೀಡಿದೆ.

lokesh

Share
Published by
lokesh
Tags: americahamas

Recent Posts

ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್‌ ಟ್ರೋಫಿಗೆ ಚಾಲನೆ

ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…

1 hour ago

ಹಲವು ಹೊಸ ದಾಖಲೆಗಳಿಗೆ ಷರಾ ಬರೆದ 2025

ಗಿರೀಶ್‌ ಹುಣಸೂರು  ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…

1 hour ago

ಸಫಾರಿ ನಿರ್ಬಂಧ: ಮೈಸೂರಿನತ್ತ ಪ್ರವಾಸಿಗರ ದಂಡು

ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…

1 hour ago

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

9 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

14 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

14 hours ago