ಅಂತಾರಾಷ್ಟ್ರೀಯ

ಸೋವಿಯತ್‌ ಒಕ್ಕೂಟದಂತೆ ಅಮೆರಿಕವೂ ನಾಶವಾಗುತ್ತದೆ : ಹಮಾಸ್‌ ಎಚ್ಚರಿಕೆ

ಬೈರುತ್‌ : ಒಂದಲ್ಲ ಒಂದುದಿನ ಸೋವಿಯತ್‌ ಒಕ್ಕೂಟದಂತೆ ಅಮೆರಿಕ ಕೂಡ ನಾಶವಾಗುತ್ತದೆ ಎಂದು ಹಮಾಸ್‌ ಹಿರಿಯ ಅಧಿಕಾರಿ ಅಲಿ ಬರಾಕಾ ಎಚ್ಚರಿಕೆ ನೀಡಿದ್ದಾರೆ.

ಲೆಬನಾನ್‌ ಯುಟ್ಯೂಬ್‌ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅಲಿ ಬರಾಕಾ, ಅಮೆರಿಕದ ಎಲ್ಲಾ ಶತ್ರುಗಳು ಸಮಾಲೋಚನೆ ನಡೆಸುತ್ತಿದ್ದಾರೆ ಮತ್ತು ಹತ್ತಿರವಾಗುತ್ತಿದ್ದಾರೆ. ಅವರೆಲ್ಲರೂ ಒಟ್ಟಿಗೇ ಒಂದು ದಿನ ಯುದ್ಧ ಮಾಡಬಹುದು. ಆಗ ಅಮೆರಿಕ ಶಕ್ತಿಯುತ ರಾಷ್ಟ್ರವಾಗಿ ಉಳಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಇದೇ ವೇಳೆ ಉತ್ತರ ಕೊರಿಯಾದ ಸಾಮರ್ಥ್ಯವನ್ನು ಶ್ಲಾಘಿಸಿರುವ ಬರಾಕಾ, ನಮಗೆ ತಿಳಿದಿರುವಂತೆ ವಿಶ್ವದಲ್ಲಿ ಅಮೆರಿಕವನ್ನು ಹೊಡೆದುರುಳಿಸುವ ಸಾಮರ್ಥ್ಯ ಇರುವುದು ಉತ್ತರ ಕೊರಿಯಾಕ್ಕೆ. ಶೀಘ್ರದಲ್ಲೇ ಇಸ್ರೇಲ್‌ ಹಮಾಸ್‌ ಯುದ್ಧದ ನಡುವೆ ಉತ್ತರ ಕೊರಿಯಾ ಮಧ್ಯಪ್ರವೇಶಿಸುವ ದಿನ ಬರಬಹುದು. ಇರಾನ್‌ ಅಮೆರಿಕವನ್ನು ಹೊಡೆಯುವ ಸಾಮರ್ಥ್ಯ ಹೊಂದಿಲ್ಲ. ಒಂದು ವೇಳೆ ಇರಾನ್‌ ಯುದ್ಧದ ನಡುವೆ ಮಧ್ಯಪ್ರವೇಶಿಸಿದರೆ, ಅದು ಝಿಯೋನಿಸ್ಟ್ ಘಟಕ ಮತ್ತು ಈ ಪ್ರದೇಶದಲ್ಲಿನ ಅಮೆರಿಕಾದ ನೆಲೆಗಳನ್ನು ಹೊಡೆಯಬಹುದ ಅಷ್ಟೇ ಎಂದು ತಿಳಿಸಿದ್ದಾರೆ.

ಹಮಾಸ್‌ ಬಂಡುಕೋರರ ವಿರುದ್ಧ ಸಮರ ನಡೆಸುತ್ತಿರುವ ಇಸ್ರೇಲ್‌ ಬೆನ್ನಿಗೆ ಬೆಂಬಲವಾಗಿ ನಿಂತಿರುವ ಅಮೆರಿಕ ಸರ್ಕಾರ ಈಗ 14.5 ಬಿಲಿಯನ್‌ ಅಮೆರಿಕನ್‌ ಡಾಲರ್‌ (1.19 ಲಕ್ಷ ಕೋಟಿ ರೂ.) ನೆರವು ಘೋಷಣೆ ಮಾಡಿದೆ. ಅಧ್ಯಕ್ಷ ಜೋ ಬೈಡನ್‌ ಆಡಳಿತ ಇಸ್ರೇಲ್‌ಗೆ ಮಿಲಿಟರಿ ನೆರವು ನೀಡುವ ಸಂಬಂಧ ಹೌಸ್‌ ಆಫ್‌ ರೆಪ್ರೆಸೆಂಟಿಟಿವ್ಸ್ ಸಭೆಯಲ್ಲಿ ಮಂಡಿಸಿದ ವಿಧೇಯಕ ಅಂಗೀಕಾರಗೊಂಡಿದೆ. ಸ್ಪೀಕರ್‌ ಮೈಕ್‌ ಜಾನ್ಸನ್‌ ಮಂಡಿಸಿದ ಪ್ರಸ್ತಾವಕ್ಕೆ ರಿಪಬ್ಲಿಕನ್‌ ಪಕ್ಷದ ಹಿಡಿತದಲ್ಲಿರುವ ಜನಪ್ರತಿನಿಧಿ ಸಭೆ ಅಂಗೀಕಾರದ ಮುದ್ರೆ ಒತ್ತಿದೆ.

ಜನ ಪ್ರತಿನಿಧಿ ಸಭೆಯಲ್ಲಿ 226-196 ಮತಗಳಿಂದ ವಿಧೇಯಕ ಅಂಗೀಕಾರಗೊಂಡಿದ್ದು, ಡೆಮಾಕ್ರಟಿಕ್‌ ಪಕ್ಷ ಬಹುಮತ ಹೊಂದಿರುವ ಸೆನೆಟ್‌ ಆರ್ಥಿಕ ನೆರವು ನೀಡುವ ಉದ್ದೇಶದ ವಿಧೇಯಕಕ್ಕೆ ಅಂಗೀಕಾರ ನೀಡಬೇಕಿದೆ. ಸೆನೆಟ್‌ ವಿಧೇಯಕಕ್ಕೆ ಅನುಮೋದನೆ ನೀಡದಿದ್ದರೆ ‘ವಿಟೋ’ ಅಧಿಕಾರ ಬಳಸಬೇಕಾಗುತ್ತದೆ ಎಂದು ಅಧ್ಯಕ್ಷ ಬೈಡನ್‌ ಎಚ್ಚರಿಕೆ ನೀಡಿದ್ದಾರೆ.

ಯುದ್ಧ ಮುಂದುವರಿಸಲು ಇಸ್ರೇಲ್‌ ರಕ್ಷಣಾ ಪಡೆಗೆ ಅಗತ್ಯವಿರುವ ಶಸ್ತ್ರಾಸ್ತ್ರ ಬಲ ನೀಡಲು ನಿರ್ಧರಿಸಲಾಗಿದೆ. ಇಸ್ರೇಲ್‌ನ ಐರನ್‌ ಡೋಮ್‌ ಬಲಪಡಿಸಲು 4 ಮಿಲಿಯನ್‌ ಡಾಲರ್‌ ಹಣ ವಿನಿಯೋಗಿಸಲು ಒಪ್ಪಿಗೆ ನೀಡಿದೆ.

lokesh

Share
Published by
lokesh
Tags: americahamas

Recent Posts

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

9 mins ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

18 mins ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

22 mins ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

27 mins ago

ಋತುಚಕ್ರದ ರಜೆ : ತನ್ನದೆ ತಡೆಯಾಜ್ಞೆ ಹಿಂಪಡೆದ ನ್ಯಾಯಮೂರ್ತಿ…!

ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…

31 mins ago

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…

34 mins ago