ಅಂತಾರಾಷ್ಟ್ರೀಯ

ಸೋವಿಯತ್‌ ಒಕ್ಕೂಟದಂತೆ ಅಮೆರಿಕವೂ ನಾಶವಾಗುತ್ತದೆ : ಹಮಾಸ್‌ ಎಚ್ಚರಿಕೆ

ಬೈರುತ್‌ : ಒಂದಲ್ಲ ಒಂದುದಿನ ಸೋವಿಯತ್‌ ಒಕ್ಕೂಟದಂತೆ ಅಮೆರಿಕ ಕೂಡ ನಾಶವಾಗುತ್ತದೆ ಎಂದು ಹಮಾಸ್‌ ಹಿರಿಯ ಅಧಿಕಾರಿ ಅಲಿ ಬರಾಕಾ ಎಚ್ಚರಿಕೆ ನೀಡಿದ್ದಾರೆ.

ಲೆಬನಾನ್‌ ಯುಟ್ಯೂಬ್‌ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅಲಿ ಬರಾಕಾ, ಅಮೆರಿಕದ ಎಲ್ಲಾ ಶತ್ರುಗಳು ಸಮಾಲೋಚನೆ ನಡೆಸುತ್ತಿದ್ದಾರೆ ಮತ್ತು ಹತ್ತಿರವಾಗುತ್ತಿದ್ದಾರೆ. ಅವರೆಲ್ಲರೂ ಒಟ್ಟಿಗೇ ಒಂದು ದಿನ ಯುದ್ಧ ಮಾಡಬಹುದು. ಆಗ ಅಮೆರಿಕ ಶಕ್ತಿಯುತ ರಾಷ್ಟ್ರವಾಗಿ ಉಳಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಇದೇ ವೇಳೆ ಉತ್ತರ ಕೊರಿಯಾದ ಸಾಮರ್ಥ್ಯವನ್ನು ಶ್ಲಾಘಿಸಿರುವ ಬರಾಕಾ, ನಮಗೆ ತಿಳಿದಿರುವಂತೆ ವಿಶ್ವದಲ್ಲಿ ಅಮೆರಿಕವನ್ನು ಹೊಡೆದುರುಳಿಸುವ ಸಾಮರ್ಥ್ಯ ಇರುವುದು ಉತ್ತರ ಕೊರಿಯಾಕ್ಕೆ. ಶೀಘ್ರದಲ್ಲೇ ಇಸ್ರೇಲ್‌ ಹಮಾಸ್‌ ಯುದ್ಧದ ನಡುವೆ ಉತ್ತರ ಕೊರಿಯಾ ಮಧ್ಯಪ್ರವೇಶಿಸುವ ದಿನ ಬರಬಹುದು. ಇರಾನ್‌ ಅಮೆರಿಕವನ್ನು ಹೊಡೆಯುವ ಸಾಮರ್ಥ್ಯ ಹೊಂದಿಲ್ಲ. ಒಂದು ವೇಳೆ ಇರಾನ್‌ ಯುದ್ಧದ ನಡುವೆ ಮಧ್ಯಪ್ರವೇಶಿಸಿದರೆ, ಅದು ಝಿಯೋನಿಸ್ಟ್ ಘಟಕ ಮತ್ತು ಈ ಪ್ರದೇಶದಲ್ಲಿನ ಅಮೆರಿಕಾದ ನೆಲೆಗಳನ್ನು ಹೊಡೆಯಬಹುದ ಅಷ್ಟೇ ಎಂದು ತಿಳಿಸಿದ್ದಾರೆ.

ಹಮಾಸ್‌ ಬಂಡುಕೋರರ ವಿರುದ್ಧ ಸಮರ ನಡೆಸುತ್ತಿರುವ ಇಸ್ರೇಲ್‌ ಬೆನ್ನಿಗೆ ಬೆಂಬಲವಾಗಿ ನಿಂತಿರುವ ಅಮೆರಿಕ ಸರ್ಕಾರ ಈಗ 14.5 ಬಿಲಿಯನ್‌ ಅಮೆರಿಕನ್‌ ಡಾಲರ್‌ (1.19 ಲಕ್ಷ ಕೋಟಿ ರೂ.) ನೆರವು ಘೋಷಣೆ ಮಾಡಿದೆ. ಅಧ್ಯಕ್ಷ ಜೋ ಬೈಡನ್‌ ಆಡಳಿತ ಇಸ್ರೇಲ್‌ಗೆ ಮಿಲಿಟರಿ ನೆರವು ನೀಡುವ ಸಂಬಂಧ ಹೌಸ್‌ ಆಫ್‌ ರೆಪ್ರೆಸೆಂಟಿಟಿವ್ಸ್ ಸಭೆಯಲ್ಲಿ ಮಂಡಿಸಿದ ವಿಧೇಯಕ ಅಂಗೀಕಾರಗೊಂಡಿದೆ. ಸ್ಪೀಕರ್‌ ಮೈಕ್‌ ಜಾನ್ಸನ್‌ ಮಂಡಿಸಿದ ಪ್ರಸ್ತಾವಕ್ಕೆ ರಿಪಬ್ಲಿಕನ್‌ ಪಕ್ಷದ ಹಿಡಿತದಲ್ಲಿರುವ ಜನಪ್ರತಿನಿಧಿ ಸಭೆ ಅಂಗೀಕಾರದ ಮುದ್ರೆ ಒತ್ತಿದೆ.

ಜನ ಪ್ರತಿನಿಧಿ ಸಭೆಯಲ್ಲಿ 226-196 ಮತಗಳಿಂದ ವಿಧೇಯಕ ಅಂಗೀಕಾರಗೊಂಡಿದ್ದು, ಡೆಮಾಕ್ರಟಿಕ್‌ ಪಕ್ಷ ಬಹುಮತ ಹೊಂದಿರುವ ಸೆನೆಟ್‌ ಆರ್ಥಿಕ ನೆರವು ನೀಡುವ ಉದ್ದೇಶದ ವಿಧೇಯಕಕ್ಕೆ ಅಂಗೀಕಾರ ನೀಡಬೇಕಿದೆ. ಸೆನೆಟ್‌ ವಿಧೇಯಕಕ್ಕೆ ಅನುಮೋದನೆ ನೀಡದಿದ್ದರೆ ‘ವಿಟೋ’ ಅಧಿಕಾರ ಬಳಸಬೇಕಾಗುತ್ತದೆ ಎಂದು ಅಧ್ಯಕ್ಷ ಬೈಡನ್‌ ಎಚ್ಚರಿಕೆ ನೀಡಿದ್ದಾರೆ.

ಯುದ್ಧ ಮುಂದುವರಿಸಲು ಇಸ್ರೇಲ್‌ ರಕ್ಷಣಾ ಪಡೆಗೆ ಅಗತ್ಯವಿರುವ ಶಸ್ತ್ರಾಸ್ತ್ರ ಬಲ ನೀಡಲು ನಿರ್ಧರಿಸಲಾಗಿದೆ. ಇಸ್ರೇಲ್‌ನ ಐರನ್‌ ಡೋಮ್‌ ಬಲಪಡಿಸಲು 4 ಮಿಲಿಯನ್‌ ಡಾಲರ್‌ ಹಣ ವಿನಿಯೋಗಿಸಲು ಒಪ್ಪಿಗೆ ನೀಡಿದೆ.

lokesh

Share
Published by
lokesh
Tags: americahamas

Recent Posts

ಮೈಸೂರು | ಅನಧಿಕೃತ ಪ್ಲೇಕ್ಸ್, ಬ್ಯಾನರ್ ತೆರವುಗೊಳಿಸಿ ; ಜಿಲ್ಲಾಧಿಕಾರಿ ಆದೇಶ

ಮೈಸೂರು : ಸಂಘ ಸಂಸ್ಥೆ, ಸಂಘಟನೆಗಳು, ಸಾರ್ವಜನಿಕರು ಹಾಗೂ ಇತರರು ಸಾರ್ವಜನಿಕ ಪ್ರದೇಶದಲ್ಲಿ ಪ್ಲೇಕ್ಸ್ ಮತ್ತು ಬ್ಯಾನರ್ ಗಳನ್ನು ಅಳವಡಿಸಬೇಕಾದ್ದಲ್ಲಿ…

12 mins ago

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ : ಸಿಎಂ ಖಂಡನೆ, ಶಾಂತಿ-ಸೌಹಾರ್ದತೆಗೆ ಮನವಿ

ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…

2 hours ago

ಮಡಿಕೇರಿ | ಟ್ರಾಕ್ಟರ್ ಮಗುಚಿ ಕಾರ್ಮಿಕ ಸಾವು

ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ…

2 hours ago

ಬುದನೂರು ಉತ್ಸವ | ಹೆಲಿಕಾಪ್ಟರ್‌ ಜಾಯ್‌ ರೈಡ್‌ಗೆ ಚಾಲನೆ

ಮಂಡ್ಯ : ಜಿಲ್ಲೆಯ ಯುವ ಜನತೆಗೆ ನಗರದ ಚಿತ್ರಣವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಹೆಲಿಕಾಪ್ಟರ್‌ ಜಾಯ್‌ ರೈಡ್‌ಅನ್ನು ಆಯೋಜಿಸಲಗಿದ್ದು, ಮೂರು ದಿನಗಳ…

3 hours ago

ಟಾಕ್ಸಿಕ್ ಟೀಸರ್ ಬಿಡುಗಡೆ : ಡಬಲ್‌ ಲುಕ್‌ನಲ್ಲಿ ಅಬ್ಬರಿಸಿದ ರಾಕಿಂಗ್‌ ಸ್ಟಾರ್ ರಾಯ‌

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಟೀಸರ್ ಇಂದು(ಫೆ.20) ಬಿಡುಗಡೆಯಾಗಿದೆ. 2 ನಿಮಿಷಗಳ ಈ ಟೀಸರ್…

3 hours ago

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

7 hours ago