ಅಂತಾರಾಷ್ಟ್ರೀಯ

ಸೋವಿಯತ್‌ ಒಕ್ಕೂಟದಂತೆ ಅಮೆರಿಕವೂ ನಾಶವಾಗುತ್ತದೆ : ಹಮಾಸ್‌ ಎಚ್ಚರಿಕೆ

ಬೈರುತ್‌ : ಒಂದಲ್ಲ ಒಂದುದಿನ ಸೋವಿಯತ್‌ ಒಕ್ಕೂಟದಂತೆ ಅಮೆರಿಕ ಕೂಡ ನಾಶವಾಗುತ್ತದೆ ಎಂದು ಹಮಾಸ್‌ ಹಿರಿಯ ಅಧಿಕಾರಿ ಅಲಿ ಬರಾಕಾ ಎಚ್ಚರಿಕೆ ನೀಡಿದ್ದಾರೆ.

ಲೆಬನಾನ್‌ ಯುಟ್ಯೂಬ್‌ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅಲಿ ಬರಾಕಾ, ಅಮೆರಿಕದ ಎಲ್ಲಾ ಶತ್ರುಗಳು ಸಮಾಲೋಚನೆ ನಡೆಸುತ್ತಿದ್ದಾರೆ ಮತ್ತು ಹತ್ತಿರವಾಗುತ್ತಿದ್ದಾರೆ. ಅವರೆಲ್ಲರೂ ಒಟ್ಟಿಗೇ ಒಂದು ದಿನ ಯುದ್ಧ ಮಾಡಬಹುದು. ಆಗ ಅಮೆರಿಕ ಶಕ್ತಿಯುತ ರಾಷ್ಟ್ರವಾಗಿ ಉಳಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಇದೇ ವೇಳೆ ಉತ್ತರ ಕೊರಿಯಾದ ಸಾಮರ್ಥ್ಯವನ್ನು ಶ್ಲಾಘಿಸಿರುವ ಬರಾಕಾ, ನಮಗೆ ತಿಳಿದಿರುವಂತೆ ವಿಶ್ವದಲ್ಲಿ ಅಮೆರಿಕವನ್ನು ಹೊಡೆದುರುಳಿಸುವ ಸಾಮರ್ಥ್ಯ ಇರುವುದು ಉತ್ತರ ಕೊರಿಯಾಕ್ಕೆ. ಶೀಘ್ರದಲ್ಲೇ ಇಸ್ರೇಲ್‌ ಹಮಾಸ್‌ ಯುದ್ಧದ ನಡುವೆ ಉತ್ತರ ಕೊರಿಯಾ ಮಧ್ಯಪ್ರವೇಶಿಸುವ ದಿನ ಬರಬಹುದು. ಇರಾನ್‌ ಅಮೆರಿಕವನ್ನು ಹೊಡೆಯುವ ಸಾಮರ್ಥ್ಯ ಹೊಂದಿಲ್ಲ. ಒಂದು ವೇಳೆ ಇರಾನ್‌ ಯುದ್ಧದ ನಡುವೆ ಮಧ್ಯಪ್ರವೇಶಿಸಿದರೆ, ಅದು ಝಿಯೋನಿಸ್ಟ್ ಘಟಕ ಮತ್ತು ಈ ಪ್ರದೇಶದಲ್ಲಿನ ಅಮೆರಿಕಾದ ನೆಲೆಗಳನ್ನು ಹೊಡೆಯಬಹುದ ಅಷ್ಟೇ ಎಂದು ತಿಳಿಸಿದ್ದಾರೆ.

ಹಮಾಸ್‌ ಬಂಡುಕೋರರ ವಿರುದ್ಧ ಸಮರ ನಡೆಸುತ್ತಿರುವ ಇಸ್ರೇಲ್‌ ಬೆನ್ನಿಗೆ ಬೆಂಬಲವಾಗಿ ನಿಂತಿರುವ ಅಮೆರಿಕ ಸರ್ಕಾರ ಈಗ 14.5 ಬಿಲಿಯನ್‌ ಅಮೆರಿಕನ್‌ ಡಾಲರ್‌ (1.19 ಲಕ್ಷ ಕೋಟಿ ರೂ.) ನೆರವು ಘೋಷಣೆ ಮಾಡಿದೆ. ಅಧ್ಯಕ್ಷ ಜೋ ಬೈಡನ್‌ ಆಡಳಿತ ಇಸ್ರೇಲ್‌ಗೆ ಮಿಲಿಟರಿ ನೆರವು ನೀಡುವ ಸಂಬಂಧ ಹೌಸ್‌ ಆಫ್‌ ರೆಪ್ರೆಸೆಂಟಿಟಿವ್ಸ್ ಸಭೆಯಲ್ಲಿ ಮಂಡಿಸಿದ ವಿಧೇಯಕ ಅಂಗೀಕಾರಗೊಂಡಿದೆ. ಸ್ಪೀಕರ್‌ ಮೈಕ್‌ ಜಾನ್ಸನ್‌ ಮಂಡಿಸಿದ ಪ್ರಸ್ತಾವಕ್ಕೆ ರಿಪಬ್ಲಿಕನ್‌ ಪಕ್ಷದ ಹಿಡಿತದಲ್ಲಿರುವ ಜನಪ್ರತಿನಿಧಿ ಸಭೆ ಅಂಗೀಕಾರದ ಮುದ್ರೆ ಒತ್ತಿದೆ.

ಜನ ಪ್ರತಿನಿಧಿ ಸಭೆಯಲ್ಲಿ 226-196 ಮತಗಳಿಂದ ವಿಧೇಯಕ ಅಂಗೀಕಾರಗೊಂಡಿದ್ದು, ಡೆಮಾಕ್ರಟಿಕ್‌ ಪಕ್ಷ ಬಹುಮತ ಹೊಂದಿರುವ ಸೆನೆಟ್‌ ಆರ್ಥಿಕ ನೆರವು ನೀಡುವ ಉದ್ದೇಶದ ವಿಧೇಯಕಕ್ಕೆ ಅಂಗೀಕಾರ ನೀಡಬೇಕಿದೆ. ಸೆನೆಟ್‌ ವಿಧೇಯಕಕ್ಕೆ ಅನುಮೋದನೆ ನೀಡದಿದ್ದರೆ ‘ವಿಟೋ’ ಅಧಿಕಾರ ಬಳಸಬೇಕಾಗುತ್ತದೆ ಎಂದು ಅಧ್ಯಕ್ಷ ಬೈಡನ್‌ ಎಚ್ಚರಿಕೆ ನೀಡಿದ್ದಾರೆ.

ಯುದ್ಧ ಮುಂದುವರಿಸಲು ಇಸ್ರೇಲ್‌ ರಕ್ಷಣಾ ಪಡೆಗೆ ಅಗತ್ಯವಿರುವ ಶಸ್ತ್ರಾಸ್ತ್ರ ಬಲ ನೀಡಲು ನಿರ್ಧರಿಸಲಾಗಿದೆ. ಇಸ್ರೇಲ್‌ನ ಐರನ್‌ ಡೋಮ್‌ ಬಲಪಡಿಸಲು 4 ಮಿಲಿಯನ್‌ ಡಾಲರ್‌ ಹಣ ವಿನಿಯೋಗಿಸಲು ಒಪ್ಪಿಗೆ ನೀಡಿದೆ.

lokesh

Share
Published by
lokesh
Tags: americahamas

Recent Posts

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

7 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

9 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

13 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

17 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

20 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

20 hours ago