ಅಂತಾರಾಷ್ಟ್ರೀಯ

ಸೋವಿಯತ್‌ ಒಕ್ಕೂಟದಂತೆ ಅಮೆರಿಕವೂ ನಾಶವಾಗುತ್ತದೆ : ಹಮಾಸ್‌ ಎಚ್ಚರಿಕೆ

ಬೈರುತ್‌ : ಒಂದಲ್ಲ ಒಂದುದಿನ ಸೋವಿಯತ್‌ ಒಕ್ಕೂಟದಂತೆ ಅಮೆರಿಕ ಕೂಡ ನಾಶವಾಗುತ್ತದೆ ಎಂದು ಹಮಾಸ್‌ ಹಿರಿಯ ಅಧಿಕಾರಿ ಅಲಿ ಬರಾಕಾ ಎಚ್ಚರಿಕೆ ನೀಡಿದ್ದಾರೆ.

ಲೆಬನಾನ್‌ ಯುಟ್ಯೂಬ್‌ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅಲಿ ಬರಾಕಾ, ಅಮೆರಿಕದ ಎಲ್ಲಾ ಶತ್ರುಗಳು ಸಮಾಲೋಚನೆ ನಡೆಸುತ್ತಿದ್ದಾರೆ ಮತ್ತು ಹತ್ತಿರವಾಗುತ್ತಿದ್ದಾರೆ. ಅವರೆಲ್ಲರೂ ಒಟ್ಟಿಗೇ ಒಂದು ದಿನ ಯುದ್ಧ ಮಾಡಬಹುದು. ಆಗ ಅಮೆರಿಕ ಶಕ್ತಿಯುತ ರಾಷ್ಟ್ರವಾಗಿ ಉಳಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಇದೇ ವೇಳೆ ಉತ್ತರ ಕೊರಿಯಾದ ಸಾಮರ್ಥ್ಯವನ್ನು ಶ್ಲಾಘಿಸಿರುವ ಬರಾಕಾ, ನಮಗೆ ತಿಳಿದಿರುವಂತೆ ವಿಶ್ವದಲ್ಲಿ ಅಮೆರಿಕವನ್ನು ಹೊಡೆದುರುಳಿಸುವ ಸಾಮರ್ಥ್ಯ ಇರುವುದು ಉತ್ತರ ಕೊರಿಯಾಕ್ಕೆ. ಶೀಘ್ರದಲ್ಲೇ ಇಸ್ರೇಲ್‌ ಹಮಾಸ್‌ ಯುದ್ಧದ ನಡುವೆ ಉತ್ತರ ಕೊರಿಯಾ ಮಧ್ಯಪ್ರವೇಶಿಸುವ ದಿನ ಬರಬಹುದು. ಇರಾನ್‌ ಅಮೆರಿಕವನ್ನು ಹೊಡೆಯುವ ಸಾಮರ್ಥ್ಯ ಹೊಂದಿಲ್ಲ. ಒಂದು ವೇಳೆ ಇರಾನ್‌ ಯುದ್ಧದ ನಡುವೆ ಮಧ್ಯಪ್ರವೇಶಿಸಿದರೆ, ಅದು ಝಿಯೋನಿಸ್ಟ್ ಘಟಕ ಮತ್ತು ಈ ಪ್ರದೇಶದಲ್ಲಿನ ಅಮೆರಿಕಾದ ನೆಲೆಗಳನ್ನು ಹೊಡೆಯಬಹುದ ಅಷ್ಟೇ ಎಂದು ತಿಳಿಸಿದ್ದಾರೆ.

ಹಮಾಸ್‌ ಬಂಡುಕೋರರ ವಿರುದ್ಧ ಸಮರ ನಡೆಸುತ್ತಿರುವ ಇಸ್ರೇಲ್‌ ಬೆನ್ನಿಗೆ ಬೆಂಬಲವಾಗಿ ನಿಂತಿರುವ ಅಮೆರಿಕ ಸರ್ಕಾರ ಈಗ 14.5 ಬಿಲಿಯನ್‌ ಅಮೆರಿಕನ್‌ ಡಾಲರ್‌ (1.19 ಲಕ್ಷ ಕೋಟಿ ರೂ.) ನೆರವು ಘೋಷಣೆ ಮಾಡಿದೆ. ಅಧ್ಯಕ್ಷ ಜೋ ಬೈಡನ್‌ ಆಡಳಿತ ಇಸ್ರೇಲ್‌ಗೆ ಮಿಲಿಟರಿ ನೆರವು ನೀಡುವ ಸಂಬಂಧ ಹೌಸ್‌ ಆಫ್‌ ರೆಪ್ರೆಸೆಂಟಿಟಿವ್ಸ್ ಸಭೆಯಲ್ಲಿ ಮಂಡಿಸಿದ ವಿಧೇಯಕ ಅಂಗೀಕಾರಗೊಂಡಿದೆ. ಸ್ಪೀಕರ್‌ ಮೈಕ್‌ ಜಾನ್ಸನ್‌ ಮಂಡಿಸಿದ ಪ್ರಸ್ತಾವಕ್ಕೆ ರಿಪಬ್ಲಿಕನ್‌ ಪಕ್ಷದ ಹಿಡಿತದಲ್ಲಿರುವ ಜನಪ್ರತಿನಿಧಿ ಸಭೆ ಅಂಗೀಕಾರದ ಮುದ್ರೆ ಒತ್ತಿದೆ.

ಜನ ಪ್ರತಿನಿಧಿ ಸಭೆಯಲ್ಲಿ 226-196 ಮತಗಳಿಂದ ವಿಧೇಯಕ ಅಂಗೀಕಾರಗೊಂಡಿದ್ದು, ಡೆಮಾಕ್ರಟಿಕ್‌ ಪಕ್ಷ ಬಹುಮತ ಹೊಂದಿರುವ ಸೆನೆಟ್‌ ಆರ್ಥಿಕ ನೆರವು ನೀಡುವ ಉದ್ದೇಶದ ವಿಧೇಯಕಕ್ಕೆ ಅಂಗೀಕಾರ ನೀಡಬೇಕಿದೆ. ಸೆನೆಟ್‌ ವಿಧೇಯಕಕ್ಕೆ ಅನುಮೋದನೆ ನೀಡದಿದ್ದರೆ ‘ವಿಟೋ’ ಅಧಿಕಾರ ಬಳಸಬೇಕಾಗುತ್ತದೆ ಎಂದು ಅಧ್ಯಕ್ಷ ಬೈಡನ್‌ ಎಚ್ಚರಿಕೆ ನೀಡಿದ್ದಾರೆ.

ಯುದ್ಧ ಮುಂದುವರಿಸಲು ಇಸ್ರೇಲ್‌ ರಕ್ಷಣಾ ಪಡೆಗೆ ಅಗತ್ಯವಿರುವ ಶಸ್ತ್ರಾಸ್ತ್ರ ಬಲ ನೀಡಲು ನಿರ್ಧರಿಸಲಾಗಿದೆ. ಇಸ್ರೇಲ್‌ನ ಐರನ್‌ ಡೋಮ್‌ ಬಲಪಡಿಸಲು 4 ಮಿಲಿಯನ್‌ ಡಾಲರ್‌ ಹಣ ವಿನಿಯೋಗಿಸಲು ಒಪ್ಪಿಗೆ ನೀಡಿದೆ.

lokesh

Share
Published by
lokesh
Tags: americahamas

Recent Posts

ಕೊಡಗಿನ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ: ಸಂಸದ ಯದುವೀರ್‌ ಒಡೆಯರ್‌ ಸ್ಪಷ್ಟನೆ

ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ…

9 mins ago

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: ನಿತಿನ್‌ ನಬಿನ್‌ಗೆ ರಾಜೀನಾಮೆ ಸಲ್ಲಿಕೆ

ನವದೆಹಲಿ: ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರನ್ನು ಭೇಟಿಯಾಗಿ ರಾಜೀನಾಮೆ…

2 hours ago

ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಸಹೋದರ ವಾಸುದೇವನ್‌ ನಿಧನ

ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್‌ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…

2 hours ago

ನಾಳೆ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…

4 hours ago

ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶ

ಬೆಂಗಳೂರು: ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ…

4 hours ago

ನಿನಗೆ ಹುಚ್ಚು ಹಿಡಿದಿದ್ಯಾ?: ನೆತನ್ಯಾಹು ವಿರುದ್ಧ ಡೊನಾಲ್ಡ್‌ ಟ್ರಂಪ್‌ ಕೆಂಡಾಮಂಡಲ

ವಾಷಿಂಗ್ಟನ್:‌ ದೂರವಾಣಿ ಸಂಭಾಷಣೆ ವೇಳೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ವಿರುದ್ಧ ಆಕ್ರೋಶ…

5 hours ago