ಅಂತಾರಾಷ್ಟ್ರೀಯ

ಸೋವಿಯತ್‌ ಒಕ್ಕೂಟದಂತೆ ಅಮೆರಿಕವೂ ನಾಶವಾಗುತ್ತದೆ : ಹಮಾಸ್‌ ಎಚ್ಚರಿಕೆ

ಬೈರುತ್‌ : ಒಂದಲ್ಲ ಒಂದುದಿನ ಸೋವಿಯತ್‌ ಒಕ್ಕೂಟದಂತೆ ಅಮೆರಿಕ ಕೂಡ ನಾಶವಾಗುತ್ತದೆ ಎಂದು ಹಮಾಸ್‌ ಹಿರಿಯ ಅಧಿಕಾರಿ ಅಲಿ ಬರಾಕಾ ಎಚ್ಚರಿಕೆ ನೀಡಿದ್ದಾರೆ.

ಲೆಬನಾನ್‌ ಯುಟ್ಯೂಬ್‌ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅಲಿ ಬರಾಕಾ, ಅಮೆರಿಕದ ಎಲ್ಲಾ ಶತ್ರುಗಳು ಸಮಾಲೋಚನೆ ನಡೆಸುತ್ತಿದ್ದಾರೆ ಮತ್ತು ಹತ್ತಿರವಾಗುತ್ತಿದ್ದಾರೆ. ಅವರೆಲ್ಲರೂ ಒಟ್ಟಿಗೇ ಒಂದು ದಿನ ಯುದ್ಧ ಮಾಡಬಹುದು. ಆಗ ಅಮೆರಿಕ ಶಕ್ತಿಯುತ ರಾಷ್ಟ್ರವಾಗಿ ಉಳಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಇದೇ ವೇಳೆ ಉತ್ತರ ಕೊರಿಯಾದ ಸಾಮರ್ಥ್ಯವನ್ನು ಶ್ಲಾಘಿಸಿರುವ ಬರಾಕಾ, ನಮಗೆ ತಿಳಿದಿರುವಂತೆ ವಿಶ್ವದಲ್ಲಿ ಅಮೆರಿಕವನ್ನು ಹೊಡೆದುರುಳಿಸುವ ಸಾಮರ್ಥ್ಯ ಇರುವುದು ಉತ್ತರ ಕೊರಿಯಾಕ್ಕೆ. ಶೀಘ್ರದಲ್ಲೇ ಇಸ್ರೇಲ್‌ ಹಮಾಸ್‌ ಯುದ್ಧದ ನಡುವೆ ಉತ್ತರ ಕೊರಿಯಾ ಮಧ್ಯಪ್ರವೇಶಿಸುವ ದಿನ ಬರಬಹುದು. ಇರಾನ್‌ ಅಮೆರಿಕವನ್ನು ಹೊಡೆಯುವ ಸಾಮರ್ಥ್ಯ ಹೊಂದಿಲ್ಲ. ಒಂದು ವೇಳೆ ಇರಾನ್‌ ಯುದ್ಧದ ನಡುವೆ ಮಧ್ಯಪ್ರವೇಶಿಸಿದರೆ, ಅದು ಝಿಯೋನಿಸ್ಟ್ ಘಟಕ ಮತ್ತು ಈ ಪ್ರದೇಶದಲ್ಲಿನ ಅಮೆರಿಕಾದ ನೆಲೆಗಳನ್ನು ಹೊಡೆಯಬಹುದ ಅಷ್ಟೇ ಎಂದು ತಿಳಿಸಿದ್ದಾರೆ.

ಹಮಾಸ್‌ ಬಂಡುಕೋರರ ವಿರುದ್ಧ ಸಮರ ನಡೆಸುತ್ತಿರುವ ಇಸ್ರೇಲ್‌ ಬೆನ್ನಿಗೆ ಬೆಂಬಲವಾಗಿ ನಿಂತಿರುವ ಅಮೆರಿಕ ಸರ್ಕಾರ ಈಗ 14.5 ಬಿಲಿಯನ್‌ ಅಮೆರಿಕನ್‌ ಡಾಲರ್‌ (1.19 ಲಕ್ಷ ಕೋಟಿ ರೂ.) ನೆರವು ಘೋಷಣೆ ಮಾಡಿದೆ. ಅಧ್ಯಕ್ಷ ಜೋ ಬೈಡನ್‌ ಆಡಳಿತ ಇಸ್ರೇಲ್‌ಗೆ ಮಿಲಿಟರಿ ನೆರವು ನೀಡುವ ಸಂಬಂಧ ಹೌಸ್‌ ಆಫ್‌ ರೆಪ್ರೆಸೆಂಟಿಟಿವ್ಸ್ ಸಭೆಯಲ್ಲಿ ಮಂಡಿಸಿದ ವಿಧೇಯಕ ಅಂಗೀಕಾರಗೊಂಡಿದೆ. ಸ್ಪೀಕರ್‌ ಮೈಕ್‌ ಜಾನ್ಸನ್‌ ಮಂಡಿಸಿದ ಪ್ರಸ್ತಾವಕ್ಕೆ ರಿಪಬ್ಲಿಕನ್‌ ಪಕ್ಷದ ಹಿಡಿತದಲ್ಲಿರುವ ಜನಪ್ರತಿನಿಧಿ ಸಭೆ ಅಂಗೀಕಾರದ ಮುದ್ರೆ ಒತ್ತಿದೆ.

ಜನ ಪ್ರತಿನಿಧಿ ಸಭೆಯಲ್ಲಿ 226-196 ಮತಗಳಿಂದ ವಿಧೇಯಕ ಅಂಗೀಕಾರಗೊಂಡಿದ್ದು, ಡೆಮಾಕ್ರಟಿಕ್‌ ಪಕ್ಷ ಬಹುಮತ ಹೊಂದಿರುವ ಸೆನೆಟ್‌ ಆರ್ಥಿಕ ನೆರವು ನೀಡುವ ಉದ್ದೇಶದ ವಿಧೇಯಕಕ್ಕೆ ಅಂಗೀಕಾರ ನೀಡಬೇಕಿದೆ. ಸೆನೆಟ್‌ ವಿಧೇಯಕಕ್ಕೆ ಅನುಮೋದನೆ ನೀಡದಿದ್ದರೆ ‘ವಿಟೋ’ ಅಧಿಕಾರ ಬಳಸಬೇಕಾಗುತ್ತದೆ ಎಂದು ಅಧ್ಯಕ್ಷ ಬೈಡನ್‌ ಎಚ್ಚರಿಕೆ ನೀಡಿದ್ದಾರೆ.

ಯುದ್ಧ ಮುಂದುವರಿಸಲು ಇಸ್ರೇಲ್‌ ರಕ್ಷಣಾ ಪಡೆಗೆ ಅಗತ್ಯವಿರುವ ಶಸ್ತ್ರಾಸ್ತ್ರ ಬಲ ನೀಡಲು ನಿರ್ಧರಿಸಲಾಗಿದೆ. ಇಸ್ರೇಲ್‌ನ ಐರನ್‌ ಡೋಮ್‌ ಬಲಪಡಿಸಲು 4 ಮಿಲಿಯನ್‌ ಡಾಲರ್‌ ಹಣ ವಿನಿಯೋಗಿಸಲು ಒಪ್ಪಿಗೆ ನೀಡಿದೆ.

lokesh

Share
Published by
lokesh
Tags: americahamas

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

6 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

6 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

6 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

6 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

6 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

7 hours ago