ಅಂತಾರಾಷ್ಟ್ರೀಯ

ಹಮಾಸ್‌ ಉಗ್ರರ ದಾಳಿ: ಯುದ್ಧಪೀಡಿತ ಇಸ್ರೇಲ್‌ನಲ್ಲಿ ಬಾಲಿವುಡ್‌ ನಟಿ ನಾಪತ್ತೆ

ಪ್ಯಾಲೆಸ್ತೀನ್ ಉಗ್ರಗಾಮಿ ಗುಂಪು ಹಮಾಸ್, ಇಸ್ರೇಲ್ ಮೇಲೆ ದಾಳಿ ನಡೆಸಿದೆ. ಇಬ್ಬರ ನಡುವೆ ನಡೆಯುತ್ತಿರುವ ಸಂಘರ್ಷದ ನಡುವೆಯೇ ಭಾರತದ ಚಿತ್ರರಂಗಕ್ಕೆ ಆತಂಕದ ಸುದ್ದಿಯೊಂದು ಹೊರಬಿದ್ದಿದೆ. ಬಾಲಿವುಡ್ ನಟಿ ನುಶ್ರತ್ ಭರುಚಾ ಅವರು ಇಸ್ರೇಲ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅವರ ತಂಡದ ಸದಸ್ಯರೊಬ್ಬರು ತಿಳಿಸಿದ್ದಾರೆ.

ಯಹೂದಿಗಳ ದೇಶವಾದ ಇಸ್ರೇಲ್‌ ಮೇಲೆ ಪ್ಯಾಲೆಸ್ತೀನ್‌ನ  ಹಮಾಸ್‌ ಉಗ್ರರು ದಾಳಿ ನಡೆಸಿದ್ದು, ಇಸ್ರೇಲ್‌ ಕೂಡ ಯುದ್ಧ ಸಾರಿದೆ. ಹಮಾಸ್‌ ಉಗ್ರರು ನಡೆಸಿದ 5 ಸಾವಿರಕ್ಕೂ ಅಧಿಕ ರಾಕೆಟ್‌ಗಳ ದಾಳಿಯಿಂದಾಗಿ ಇಸ್ರೇಲ್‌ನಲ್ಲಿ ಇದುವರೆಗೆ 300ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಸಾವಿರಾರು ಜನ ಗಾಯಗೊಂಡಿದ್ದಾರೆ. ಟೆಲ್‌ಅವಿವ್‌ ನಗರವಂತೂ ಅಕ್ಷರಶಃ ಮಸಣದಂತಾಗಿದೆ. ಇದರ ಬೆನ್ನಲ್ಲೇ ಬಾಲಿವುಡ್‌ ನಟಿ ನುಶ್ರತ್‌ ಭರುಚ್ಚಾ ಅವರು ಇಸ್ರೇಲ್‌ನಲ್ಲಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ನುಶ್ರತ್‌ ಭರುಚ್ಚಾ ಅವರು ಹೈಫಾ ಇಂಟರ್‌ನ್ಯಾಷನಲ್‌ ಫಿಲಂ ಫೆಸ್ಟಿವಲ್‌ನಲ್ಲಿ ಪಾಲ್ಗೊಳ್ಳಲು ಇಸ್ರೇಲ್‌ಗೆ ತೆರಳಿದ್ದರು. ಶನಿವಾರ ಮಧ್ಯಾಹ್ನ 12.30ಕ್ಕೆ ನಾವು ಅವರ ಜತೆ ಮಾತನಾಡಿದ್ದೆವು. ಆದರೆ, ಉಗ್ರರ ದಾಳಿಯ ಬಳಿಕ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ಅವರ ಫೋನ್‌ಗೆ ಕರೆ ಮಾಡಲು ಸಾಧ್ಯವಾಗುತ್ತಿಲ್ಲ.

ಅವರು ಎಲ್ಲಿದ್ದಾರೆ ಎಂಬ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಹಾಗಾಗಿ, ಅವರು ಇಸ್ರೇಲ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನಿಸುತ್ತಿದೆ. ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆತರಲು ಯತ್ನಿಸಲಾಗುತ್ತಿದೆ” ಎಂದು ನಟಿಯ ತಂಡದ ಸದಸ್ಯರೊಬ್ಬರು ಮಾಹಿತಿ ನೀಡಿದ್ದಾರೆ. ನುಸ್ರತ್‌ ಭರುಚ್ಚಾ ಅವರು ಡ್ರೀಮ್‌ ಗರ್ಲ್‌, ಅಕೇಲಿ, ಸೆಲ್ಫಿ, ಜನ್‌ ಹಿತ್‌ ಮೇ ಜಾರಿ ಸೇರಿ ಹಲವು ಬಾಲಿವುಡ್‌ ಸಿನಿಮಾಗಳಲ್ಲಿ ನಟಿಸಿದ್ದಾರೆ.

andolanait

Share
Published by
andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago