ಅಂತಾರಾಷ್ಟ್ರೀಯ

ಹಮಾಸ್‌ ಉಗ್ರರ ದಾಳಿ: ಯುದ್ಧಪೀಡಿತ ಇಸ್ರೇಲ್‌ನಲ್ಲಿ ಬಾಲಿವುಡ್‌ ನಟಿ ನಾಪತ್ತೆ

ಪ್ಯಾಲೆಸ್ತೀನ್ ಉಗ್ರಗಾಮಿ ಗುಂಪು ಹಮಾಸ್, ಇಸ್ರೇಲ್ ಮೇಲೆ ದಾಳಿ ನಡೆಸಿದೆ. ಇಬ್ಬರ ನಡುವೆ ನಡೆಯುತ್ತಿರುವ ಸಂಘರ್ಷದ ನಡುವೆಯೇ ಭಾರತದ ಚಿತ್ರರಂಗಕ್ಕೆ ಆತಂಕದ ಸುದ್ದಿಯೊಂದು ಹೊರಬಿದ್ದಿದೆ. ಬಾಲಿವುಡ್ ನಟಿ ನುಶ್ರತ್ ಭರುಚಾ ಅವರು ಇಸ್ರೇಲ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅವರ ತಂಡದ ಸದಸ್ಯರೊಬ್ಬರು ತಿಳಿಸಿದ್ದಾರೆ.

ಯಹೂದಿಗಳ ದೇಶವಾದ ಇಸ್ರೇಲ್‌ ಮೇಲೆ ಪ್ಯಾಲೆಸ್ತೀನ್‌ನ  ಹಮಾಸ್‌ ಉಗ್ರರು ದಾಳಿ ನಡೆಸಿದ್ದು, ಇಸ್ರೇಲ್‌ ಕೂಡ ಯುದ್ಧ ಸಾರಿದೆ. ಹಮಾಸ್‌ ಉಗ್ರರು ನಡೆಸಿದ 5 ಸಾವಿರಕ್ಕೂ ಅಧಿಕ ರಾಕೆಟ್‌ಗಳ ದಾಳಿಯಿಂದಾಗಿ ಇಸ್ರೇಲ್‌ನಲ್ಲಿ ಇದುವರೆಗೆ 300ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಸಾವಿರಾರು ಜನ ಗಾಯಗೊಂಡಿದ್ದಾರೆ. ಟೆಲ್‌ಅವಿವ್‌ ನಗರವಂತೂ ಅಕ್ಷರಶಃ ಮಸಣದಂತಾಗಿದೆ. ಇದರ ಬೆನ್ನಲ್ಲೇ ಬಾಲಿವುಡ್‌ ನಟಿ ನುಶ್ರತ್‌ ಭರುಚ್ಚಾ ಅವರು ಇಸ್ರೇಲ್‌ನಲ್ಲಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ನುಶ್ರತ್‌ ಭರುಚ್ಚಾ ಅವರು ಹೈಫಾ ಇಂಟರ್‌ನ್ಯಾಷನಲ್‌ ಫಿಲಂ ಫೆಸ್ಟಿವಲ್‌ನಲ್ಲಿ ಪಾಲ್ಗೊಳ್ಳಲು ಇಸ್ರೇಲ್‌ಗೆ ತೆರಳಿದ್ದರು. ಶನಿವಾರ ಮಧ್ಯಾಹ್ನ 12.30ಕ್ಕೆ ನಾವು ಅವರ ಜತೆ ಮಾತನಾಡಿದ್ದೆವು. ಆದರೆ, ಉಗ್ರರ ದಾಳಿಯ ಬಳಿಕ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ಅವರ ಫೋನ್‌ಗೆ ಕರೆ ಮಾಡಲು ಸಾಧ್ಯವಾಗುತ್ತಿಲ್ಲ.

ಅವರು ಎಲ್ಲಿದ್ದಾರೆ ಎಂಬ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಹಾಗಾಗಿ, ಅವರು ಇಸ್ರೇಲ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನಿಸುತ್ತಿದೆ. ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆತರಲು ಯತ್ನಿಸಲಾಗುತ್ತಿದೆ” ಎಂದು ನಟಿಯ ತಂಡದ ಸದಸ್ಯರೊಬ್ಬರು ಮಾಹಿತಿ ನೀಡಿದ್ದಾರೆ. ನುಸ್ರತ್‌ ಭರುಚ್ಚಾ ಅವರು ಡ್ರೀಮ್‌ ಗರ್ಲ್‌, ಅಕೇಲಿ, ಸೆಲ್ಫಿ, ಜನ್‌ ಹಿತ್‌ ಮೇ ಜಾರಿ ಸೇರಿ ಹಲವು ಬಾಲಿವುಡ್‌ ಸಿನಿಮಾಗಳಲ್ಲಿ ನಟಿಸಿದ್ದಾರೆ.

andolanait

Share
Published by
andolanait

Recent Posts

ಎಲ್‌ಪಿಜಿ ಕೊರತೆ; ಜನರ ಆತಂಕ ದೂರ ಮಾಡಬೇಕಿದೆ

ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…

3 hours ago

ಭಾರತ-ಗಲ್ಛ್ ರಾಷ್ಟ್ರಗಳ ಸಂಬಂಧಕ್ಕೆ ಧಕ್ಕೆ ಇಲ್ಲ!

ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್‌ನಲ್ಲಿ ನಿರ್ಣಾಯಕ ಘಟ್ಟಕ್ಕೆ ತಲುಪಿದ ಅಧಿಕಾರ ಹಂಚಿಕೆ

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…

3 hours ago

‘ಕೈಗೂಡಿದ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯ ಕನಸು’

ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…

3 hours ago

ನಗರಸಭೆಗೆ ಗೆಜ್ಜಲಗೆರೆ-ಗೊರವನಹಳ್ಳಿ ಸೇರ್ಪಡೆಗೆ ವಿರೋಧ

ಹೇಮಂತ್‌ ಕುಮಾರ್‌  ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…

3 hours ago

ಮಧ್ಯಾಹ್ನದ ಬಿಸಿಯೂಟಕ್ಕೂ ತಟ್ಟಲಿದೆ ಗ್ಯಾಸ್ ಬಿಸಿ?

ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್‌ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್‌ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…

4 hours ago