ಅಂತಾರಾಷ್ಟ್ರೀಯ

ಹಮಾಸ್‌ ಉಗ್ರರ ದಾಳಿ: ಯುದ್ಧಪೀಡಿತ ಇಸ್ರೇಲ್‌ನಲ್ಲಿ ಬಾಲಿವುಡ್‌ ನಟಿ ನಾಪತ್ತೆ

ಪ್ಯಾಲೆಸ್ತೀನ್ ಉಗ್ರಗಾಮಿ ಗುಂಪು ಹಮಾಸ್, ಇಸ್ರೇಲ್ ಮೇಲೆ ದಾಳಿ ನಡೆಸಿದೆ. ಇಬ್ಬರ ನಡುವೆ ನಡೆಯುತ್ತಿರುವ ಸಂಘರ್ಷದ ನಡುವೆಯೇ ಭಾರತದ ಚಿತ್ರರಂಗಕ್ಕೆ ಆತಂಕದ ಸುದ್ದಿಯೊಂದು ಹೊರಬಿದ್ದಿದೆ. ಬಾಲಿವುಡ್ ನಟಿ ನುಶ್ರತ್ ಭರುಚಾ ಅವರು ಇಸ್ರೇಲ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅವರ ತಂಡದ ಸದಸ್ಯರೊಬ್ಬರು ತಿಳಿಸಿದ್ದಾರೆ.

ಯಹೂದಿಗಳ ದೇಶವಾದ ಇಸ್ರೇಲ್‌ ಮೇಲೆ ಪ್ಯಾಲೆಸ್ತೀನ್‌ನ  ಹಮಾಸ್‌ ಉಗ್ರರು ದಾಳಿ ನಡೆಸಿದ್ದು, ಇಸ್ರೇಲ್‌ ಕೂಡ ಯುದ್ಧ ಸಾರಿದೆ. ಹಮಾಸ್‌ ಉಗ್ರರು ನಡೆಸಿದ 5 ಸಾವಿರಕ್ಕೂ ಅಧಿಕ ರಾಕೆಟ್‌ಗಳ ದಾಳಿಯಿಂದಾಗಿ ಇಸ್ರೇಲ್‌ನಲ್ಲಿ ಇದುವರೆಗೆ 300ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಸಾವಿರಾರು ಜನ ಗಾಯಗೊಂಡಿದ್ದಾರೆ. ಟೆಲ್‌ಅವಿವ್‌ ನಗರವಂತೂ ಅಕ್ಷರಶಃ ಮಸಣದಂತಾಗಿದೆ. ಇದರ ಬೆನ್ನಲ್ಲೇ ಬಾಲಿವುಡ್‌ ನಟಿ ನುಶ್ರತ್‌ ಭರುಚ್ಚಾ ಅವರು ಇಸ್ರೇಲ್‌ನಲ್ಲಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ನುಶ್ರತ್‌ ಭರುಚ್ಚಾ ಅವರು ಹೈಫಾ ಇಂಟರ್‌ನ್ಯಾಷನಲ್‌ ಫಿಲಂ ಫೆಸ್ಟಿವಲ್‌ನಲ್ಲಿ ಪಾಲ್ಗೊಳ್ಳಲು ಇಸ್ರೇಲ್‌ಗೆ ತೆರಳಿದ್ದರು. ಶನಿವಾರ ಮಧ್ಯಾಹ್ನ 12.30ಕ್ಕೆ ನಾವು ಅವರ ಜತೆ ಮಾತನಾಡಿದ್ದೆವು. ಆದರೆ, ಉಗ್ರರ ದಾಳಿಯ ಬಳಿಕ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ಅವರ ಫೋನ್‌ಗೆ ಕರೆ ಮಾಡಲು ಸಾಧ್ಯವಾಗುತ್ತಿಲ್ಲ.

ಅವರು ಎಲ್ಲಿದ್ದಾರೆ ಎಂಬ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಹಾಗಾಗಿ, ಅವರು ಇಸ್ರೇಲ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನಿಸುತ್ತಿದೆ. ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆತರಲು ಯತ್ನಿಸಲಾಗುತ್ತಿದೆ” ಎಂದು ನಟಿಯ ತಂಡದ ಸದಸ್ಯರೊಬ್ಬರು ಮಾಹಿತಿ ನೀಡಿದ್ದಾರೆ. ನುಸ್ರತ್‌ ಭರುಚ್ಚಾ ಅವರು ಡ್ರೀಮ್‌ ಗರ್ಲ್‌, ಅಕೇಲಿ, ಸೆಲ್ಫಿ, ಜನ್‌ ಹಿತ್‌ ಮೇ ಜಾರಿ ಸೇರಿ ಹಲವು ಬಾಲಿವುಡ್‌ ಸಿನಿಮಾಗಳಲ್ಲಿ ನಟಿಸಿದ್ದಾರೆ.

andolanait

Share
Published by
andolanait

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

6 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

7 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

7 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

8 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

13 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

13 hours ago