ಅಂತಾರಾಷ್ಟ್ರೀಯ

ಎಲೋನ್‌ ಮಸ್ಕ್‌ ಹಿಂದಿಕ್ಕಿ ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿಯಾದ ʼಬರ್ನಾರ್ಡ್‌ ಅರ್ನಾಲ್ಟ್‌ʼ

ನವದೆಹಲಿ: ಟೆಸ್ಲಾ ಓನರ್‌ ಎಲೋನ್ ಮಸ್ಕ್ ಅವರನ್ನು ಹಿಂದಿಕ್ಕಿರುವ ಫ್ರೆಂಚ್ ಉದ್ಯಮಿ ಹಾಗೂ ಎಲ್‌ಎಚ್‌ಎಂವಿ ಸಿಇಒ ಬರ್ನಾರ್ಡ್ ಆರ್ನಾಲ್ಟ್ ಅವರು ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿಯೆಂಬ ಸ್ಥಾನವನ್ನು ಮತ್ತೆ ಪಡೆದಿದ್ದಾರೆ.

ಫೋರ್ಟ್ಸ್ ಪ್ರಕಾರ, ಲೂಯಿ ವಿಟಾನ್ ನಂತಹ ಬ್ರಾಂಡ್ ಗಳನ್ನು ಒಳಗೊಂಡಿರುವ ಜಾಗತಿಕ ಐಷಾರಾಮಿ ಸರಕುಗಳ ಕಂಪನಿ ಎಲ್ ವಿಎಂಎಚ್ ನ ಅಧ್ಯಕ್ಷ ಮತ್ತು ಸಿಇಒ ಮತ್ತು ಅವರ ಕುಟುಂಬದ ನಿವ್ವಳ ಮೌಲ್ಯವು 23.6 ಬಿಲಿಯನ್ ಡಾಲರ್ ಹೆಚ್ಚಳದ ನಂತರ 207.8 ಬಿಲಿಯನ್ ಡಾಲರ್ ಗೆ ಏರಿದೆ. ಏತನ್ಮಧ್ಯೆ, ಟೆಸ್ಲಾ ಸಿಇಒ ನಿವ್ವಳ ಮೌಲ್ಯವು 204.5 ಬಿಲಿಯನ್ ಡಾಲರ್ ಆಗಿದೆ ಎಂದು ಪ್ರಕಟಣೆ ತಿಳಿಸಿದೆ.

ಇದೀಗ ಬೆರ್ನಾರ್ಡ್ ಆರ್ನಾಲ್ಡ್ 207 ಬಿಲಿಯನ್ ಡಾಲರ್ ಸಂಪತ್ತಿನೊಂದಿಗೆ ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದರೆ ಎರಡನೇ ಸ್ಥಾನದಲ್ಲಿರುವ ಎಲಾನ್ ಮಸ್ಕ್ ಅವರ ಒಟ್ಟು ಸಂಪತ್ತಿನ ಮೌಲ್ಯ 204.7 ಬಿಲಿಯನ್ ಡಾಲರ್ ಆಗಿದೆ. ಜೆಫ್ ಬೆಸ್ ಮೂರನೇ ಸ್ಥಾನದಲ್ಲಿ (181.3 ಬಿಲಿಯನ್ ಡಾಲರ್), ಲಾರಿ ಎಲ್ಲಿಸನ್ ನಾಲ್ಕನೇ ಸ್ಥಾನದಲ್ಲಿ (142.2 ಬಿಲಿಯನ್ ಡಾಲರ್), ಮಾರ್ಕ್ ಝುಕರ್ ಬರ್ಗ್ ಐದನೇ ಸ್ಥಾನದಲ್ಲಿ (1391.1 ಬಿಲಿಯನ್ ಡಾಲರ್) ಮತ್ತು ವಾರೆನ್ ಬಫೆಟ್ (127.2 ಬಿಲಿಯನ್ ಡಾಲರ್)ಆರನೇ ಸ್ಥಾನದಲ್ಲಿದ್ದಾರೆ.

ಆದರೆ ಬ್ಲೂಂಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ 199 ಬಿಲಿಯನ್ ಡಾಲರ್ ಮೌಲ್ಯದ ಸಂಪತ್ತಿನೊಂದಿಗೆ ಎಲಾನ್ ಮಸ್ಕ್ ಈಗಲೂ ಮೊದಲನೇ ಸ್ಥಾನದಲ್ಲಿದ್ದರೆ ಎರಡನೇ ಸ್ಥಾನದಲ್ಲಿ ಅಮೆಝಾನ್ ಮುಖ್ಯಸ್ಥ ಜೆಫ್ ಬೆರೋಸ್ (184 ಬಿಲಿಯನ್ ಡಾಲರ್) ಮತ್ತು ಮೂರನೇ ಸ್ಥಾನದಲ್ಲಿ ಬೆರ್ನಾರ್ಡ್ ಆರ್ನಾಲ್ಡ್ (183 ಬಿಲಿಯನ್ ಡಾಲರ್) ಇದ್ದಾರೆ.

ಫ್ರಾನ್ಸ್ ದೇಶದ ಉದ್ಯಮಿಯಾದ ಬರ್ನಾರ್ಡ್ ಆರ್ನಾಲ್ಡ್ ಅವರು ಎಲ್‌ಎಂವಿಎಚ್ ಎಂಬ ಲಕ್ಷುರಿ ವಸ್ತುಗಳ ಕಂಪನಿಯ ಸಿಇಒ ಆಗಿದ್ದಾರೆ. ಬಹಳ ದುಬಾರಿ ಹಾಗೂ ಉಚ್ಚ ಗುಣಮಟ್ಟದ ಲೂಯಿಸ್ ವ್ಯೂಟನ್ ಸೇರಿದಂತೆ ವಿವಿಧ ಬ್ರಾಂಡ್‌ಗಳ ಅಡಿಯಲ್ಲಿ ಹಲವು ಐಷಾರಾಮಿ ವಸ್ತುಗಳನ್ನು ಇವರ ಕಂಪನಿ ತಯಾರಿಸಿ ಮಾರುತ್ತದೆ.

andolanait

Share
Published by
andolanait

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

6 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

7 hours ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

9 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

11 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

11 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

11 hours ago