ಅಂತಾರಾಷ್ಟ್ರೀಯ

ಎಲೋನ್‌ ಮಸ್ಕ್‌ ಹಿಂದಿಕ್ಕಿ ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿಯಾದ ʼಬರ್ನಾರ್ಡ್‌ ಅರ್ನಾಲ್ಟ್‌ʼ

ನವದೆಹಲಿ: ಟೆಸ್ಲಾ ಓನರ್‌ ಎಲೋನ್ ಮಸ್ಕ್ ಅವರನ್ನು ಹಿಂದಿಕ್ಕಿರುವ ಫ್ರೆಂಚ್ ಉದ್ಯಮಿ ಹಾಗೂ ಎಲ್‌ಎಚ್‌ಎಂವಿ ಸಿಇಒ ಬರ್ನಾರ್ಡ್ ಆರ್ನಾಲ್ಟ್ ಅವರು ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿಯೆಂಬ ಸ್ಥಾನವನ್ನು ಮತ್ತೆ ಪಡೆದಿದ್ದಾರೆ.

ಫೋರ್ಟ್ಸ್ ಪ್ರಕಾರ, ಲೂಯಿ ವಿಟಾನ್ ನಂತಹ ಬ್ರಾಂಡ್ ಗಳನ್ನು ಒಳಗೊಂಡಿರುವ ಜಾಗತಿಕ ಐಷಾರಾಮಿ ಸರಕುಗಳ ಕಂಪನಿ ಎಲ್ ವಿಎಂಎಚ್ ನ ಅಧ್ಯಕ್ಷ ಮತ್ತು ಸಿಇಒ ಮತ್ತು ಅವರ ಕುಟುಂಬದ ನಿವ್ವಳ ಮೌಲ್ಯವು 23.6 ಬಿಲಿಯನ್ ಡಾಲರ್ ಹೆಚ್ಚಳದ ನಂತರ 207.8 ಬಿಲಿಯನ್ ಡಾಲರ್ ಗೆ ಏರಿದೆ. ಏತನ್ಮಧ್ಯೆ, ಟೆಸ್ಲಾ ಸಿಇಒ ನಿವ್ವಳ ಮೌಲ್ಯವು 204.5 ಬಿಲಿಯನ್ ಡಾಲರ್ ಆಗಿದೆ ಎಂದು ಪ್ರಕಟಣೆ ತಿಳಿಸಿದೆ.

ಇದೀಗ ಬೆರ್ನಾರ್ಡ್ ಆರ್ನಾಲ್ಡ್ 207 ಬಿಲಿಯನ್ ಡಾಲರ್ ಸಂಪತ್ತಿನೊಂದಿಗೆ ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದರೆ ಎರಡನೇ ಸ್ಥಾನದಲ್ಲಿರುವ ಎಲಾನ್ ಮಸ್ಕ್ ಅವರ ಒಟ್ಟು ಸಂಪತ್ತಿನ ಮೌಲ್ಯ 204.7 ಬಿಲಿಯನ್ ಡಾಲರ್ ಆಗಿದೆ. ಜೆಫ್ ಬೆಸ್ ಮೂರನೇ ಸ್ಥಾನದಲ್ಲಿ (181.3 ಬಿಲಿಯನ್ ಡಾಲರ್), ಲಾರಿ ಎಲ್ಲಿಸನ್ ನಾಲ್ಕನೇ ಸ್ಥಾನದಲ್ಲಿ (142.2 ಬಿಲಿಯನ್ ಡಾಲರ್), ಮಾರ್ಕ್ ಝುಕರ್ ಬರ್ಗ್ ಐದನೇ ಸ್ಥಾನದಲ್ಲಿ (1391.1 ಬಿಲಿಯನ್ ಡಾಲರ್) ಮತ್ತು ವಾರೆನ್ ಬಫೆಟ್ (127.2 ಬಿಲಿಯನ್ ಡಾಲರ್)ಆರನೇ ಸ್ಥಾನದಲ್ಲಿದ್ದಾರೆ.

ಆದರೆ ಬ್ಲೂಂಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ 199 ಬಿಲಿಯನ್ ಡಾಲರ್ ಮೌಲ್ಯದ ಸಂಪತ್ತಿನೊಂದಿಗೆ ಎಲಾನ್ ಮಸ್ಕ್ ಈಗಲೂ ಮೊದಲನೇ ಸ್ಥಾನದಲ್ಲಿದ್ದರೆ ಎರಡನೇ ಸ್ಥಾನದಲ್ಲಿ ಅಮೆಝಾನ್ ಮುಖ್ಯಸ್ಥ ಜೆಫ್ ಬೆರೋಸ್ (184 ಬಿಲಿಯನ್ ಡಾಲರ್) ಮತ್ತು ಮೂರನೇ ಸ್ಥಾನದಲ್ಲಿ ಬೆರ್ನಾರ್ಡ್ ಆರ್ನಾಲ್ಡ್ (183 ಬಿಲಿಯನ್ ಡಾಲರ್) ಇದ್ದಾರೆ.

ಫ್ರಾನ್ಸ್ ದೇಶದ ಉದ್ಯಮಿಯಾದ ಬರ್ನಾರ್ಡ್ ಆರ್ನಾಲ್ಡ್ ಅವರು ಎಲ್‌ಎಂವಿಎಚ್ ಎಂಬ ಲಕ್ಷುರಿ ವಸ್ತುಗಳ ಕಂಪನಿಯ ಸಿಇಒ ಆಗಿದ್ದಾರೆ. ಬಹಳ ದುಬಾರಿ ಹಾಗೂ ಉಚ್ಚ ಗುಣಮಟ್ಟದ ಲೂಯಿಸ್ ವ್ಯೂಟನ್ ಸೇರಿದಂತೆ ವಿವಿಧ ಬ್ರಾಂಡ್‌ಗಳ ಅಡಿಯಲ್ಲಿ ಹಲವು ಐಷಾರಾಮಿ ವಸ್ತುಗಳನ್ನು ಇವರ ಕಂಪನಿ ತಯಾರಿಸಿ ಮಾರುತ್ತದೆ.

andolanait

Share
Published by
andolanait

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

53 mins ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

58 mins ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

1 hour ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

1 hour ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

10 hours ago