ಅಂತಾರಾಷ್ಟ್ರೀಯ

ಎಲೋನ್‌ ಮಸ್ಕ್‌ ಹಿಂದಿಕ್ಕಿ ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿಯಾದ ʼಬರ್ನಾರ್ಡ್‌ ಅರ್ನಾಲ್ಟ್‌ʼ

ನವದೆಹಲಿ: ಟೆಸ್ಲಾ ಓನರ್‌ ಎಲೋನ್ ಮಸ್ಕ್ ಅವರನ್ನು ಹಿಂದಿಕ್ಕಿರುವ ಫ್ರೆಂಚ್ ಉದ್ಯಮಿ ಹಾಗೂ ಎಲ್‌ಎಚ್‌ಎಂವಿ ಸಿಇಒ ಬರ್ನಾರ್ಡ್ ಆರ್ನಾಲ್ಟ್ ಅವರು ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿಯೆಂಬ ಸ್ಥಾನವನ್ನು ಮತ್ತೆ ಪಡೆದಿದ್ದಾರೆ.

ಫೋರ್ಟ್ಸ್ ಪ್ರಕಾರ, ಲೂಯಿ ವಿಟಾನ್ ನಂತಹ ಬ್ರಾಂಡ್ ಗಳನ್ನು ಒಳಗೊಂಡಿರುವ ಜಾಗತಿಕ ಐಷಾರಾಮಿ ಸರಕುಗಳ ಕಂಪನಿ ಎಲ್ ವಿಎಂಎಚ್ ನ ಅಧ್ಯಕ್ಷ ಮತ್ತು ಸಿಇಒ ಮತ್ತು ಅವರ ಕುಟುಂಬದ ನಿವ್ವಳ ಮೌಲ್ಯವು 23.6 ಬಿಲಿಯನ್ ಡಾಲರ್ ಹೆಚ್ಚಳದ ನಂತರ 207.8 ಬಿಲಿಯನ್ ಡಾಲರ್ ಗೆ ಏರಿದೆ. ಏತನ್ಮಧ್ಯೆ, ಟೆಸ್ಲಾ ಸಿಇಒ ನಿವ್ವಳ ಮೌಲ್ಯವು 204.5 ಬಿಲಿಯನ್ ಡಾಲರ್ ಆಗಿದೆ ಎಂದು ಪ್ರಕಟಣೆ ತಿಳಿಸಿದೆ.

ಇದೀಗ ಬೆರ್ನಾರ್ಡ್ ಆರ್ನಾಲ್ಡ್ 207 ಬಿಲಿಯನ್ ಡಾಲರ್ ಸಂಪತ್ತಿನೊಂದಿಗೆ ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದರೆ ಎರಡನೇ ಸ್ಥಾನದಲ್ಲಿರುವ ಎಲಾನ್ ಮಸ್ಕ್ ಅವರ ಒಟ್ಟು ಸಂಪತ್ತಿನ ಮೌಲ್ಯ 204.7 ಬಿಲಿಯನ್ ಡಾಲರ್ ಆಗಿದೆ. ಜೆಫ್ ಬೆಸ್ ಮೂರನೇ ಸ್ಥಾನದಲ್ಲಿ (181.3 ಬಿಲಿಯನ್ ಡಾಲರ್), ಲಾರಿ ಎಲ್ಲಿಸನ್ ನಾಲ್ಕನೇ ಸ್ಥಾನದಲ್ಲಿ (142.2 ಬಿಲಿಯನ್ ಡಾಲರ್), ಮಾರ್ಕ್ ಝುಕರ್ ಬರ್ಗ್ ಐದನೇ ಸ್ಥಾನದಲ್ಲಿ (1391.1 ಬಿಲಿಯನ್ ಡಾಲರ್) ಮತ್ತು ವಾರೆನ್ ಬಫೆಟ್ (127.2 ಬಿಲಿಯನ್ ಡಾಲರ್)ಆರನೇ ಸ್ಥಾನದಲ್ಲಿದ್ದಾರೆ.

ಆದರೆ ಬ್ಲೂಂಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ 199 ಬಿಲಿಯನ್ ಡಾಲರ್ ಮೌಲ್ಯದ ಸಂಪತ್ತಿನೊಂದಿಗೆ ಎಲಾನ್ ಮಸ್ಕ್ ಈಗಲೂ ಮೊದಲನೇ ಸ್ಥಾನದಲ್ಲಿದ್ದರೆ ಎರಡನೇ ಸ್ಥಾನದಲ್ಲಿ ಅಮೆಝಾನ್ ಮುಖ್ಯಸ್ಥ ಜೆಫ್ ಬೆರೋಸ್ (184 ಬಿಲಿಯನ್ ಡಾಲರ್) ಮತ್ತು ಮೂರನೇ ಸ್ಥಾನದಲ್ಲಿ ಬೆರ್ನಾರ್ಡ್ ಆರ್ನಾಲ್ಡ್ (183 ಬಿಲಿಯನ್ ಡಾಲರ್) ಇದ್ದಾರೆ.

ಫ್ರಾನ್ಸ್ ದೇಶದ ಉದ್ಯಮಿಯಾದ ಬರ್ನಾರ್ಡ್ ಆರ್ನಾಲ್ಡ್ ಅವರು ಎಲ್‌ಎಂವಿಎಚ್ ಎಂಬ ಲಕ್ಷುರಿ ವಸ್ತುಗಳ ಕಂಪನಿಯ ಸಿಇಒ ಆಗಿದ್ದಾರೆ. ಬಹಳ ದುಬಾರಿ ಹಾಗೂ ಉಚ್ಚ ಗುಣಮಟ್ಟದ ಲೂಯಿಸ್ ವ್ಯೂಟನ್ ಸೇರಿದಂತೆ ವಿವಿಧ ಬ್ರಾಂಡ್‌ಗಳ ಅಡಿಯಲ್ಲಿ ಹಲವು ಐಷಾರಾಮಿ ವಸ್ತುಗಳನ್ನು ಇವರ ಕಂಪನಿ ತಯಾರಿಸಿ ಮಾರುತ್ತದೆ.

andolanait

Share
Published by
andolanait

Recent Posts

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

39 mins ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

40 mins ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

42 mins ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

45 mins ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

47 mins ago

ಇದು ಶೌಚಾಲಯ… ಈಗ ಅನುಪಯುಕ್ತ ವಸ್ತುಗಳ ಗೋದಾಮು!

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…

55 mins ago