ಅಂತಾರಾಷ್ಟ್ರೀಯ

ನೇಪಾಳದಲ್ಲಿ ಬಸ್‌ ಅಪಘಾತ: ಭಾರತೀಯರು ಸೇರಿ ೧೨ ಮಂದಿ ಸಾವು

ಕಠ್ಮಂಡು: ನೇಪಾಳದ ಡಾಂಗ್‌ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭಾರತೀಯರು ಸೇರಿ ೧೨ ಮಂದಿ ಸಾವಿಗೀಡಾಗಿದ್ದಾರೆ.

ಈ ಅಪಘಾತ ಕುರಿತು ಅಧಿಕಾರಿಗಳನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ನೀಡಿವೆ.

ಬಾಂಕೆ ಜಿಲ್ಲೆಯ ನೇಪಾಳದಗಂಜ್ನಿಂದ ಕಠ್ಮಂಡುವಿಗೆ ಪ್ರಯಾಣ ಮಾಡುತ್ತಿದ್ದ ಬಸ್‌, ಜಿಲ್ಲೆಯ ಭಾಲುಬಾಂಗ್‌ ಸೇತುವೆಯಿಂದ ಕೆಳಜಾರಿ ರಾಪ್ತಿ ನದಿಗೆ ಉರುಳಿಬಿದ್ದಿದೆ.

ಈ ಅಪಘಾತದಲ್ಲಿ ೧೨ ಮಂದಿ ಮೃತಪಟ್ಟಿದ್ದು, ೨೨ ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಮರಣ ಹೊಂದಿದ ೧೨ ಮಂದಿಯಲ್ಲಿ ಇಬ್ಬರು ಭಾರತೀಯರು ಹಾಗೂ ಇಬ್ಬರು ಸ್ತಳೀಯರೆಂದು ಗುರುತಿಸಲಾಗಿದ್ದು ಉಳಿದ ೮ ಮಂದಿಯ ಬಗ್ಗೆ ಸ್ಪಷ್ಟ ಮಾಹಿತಿ ದೊರೆತಿಲ್ಲ.

ಈ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಪೊಲೀಸ್‌ ಅಧಕಾರಿ ಉಜ್ವಲ್‌ ಬಹಾದುರ್‌ ಸಿಂಗ್‌ ತಿಳಿಸಿದ್ದಾರೆ.

andolanait

Share
Published by
andolanait

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

2 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

2 hours ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

2 hours ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

2 hours ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

13 hours ago