ಕಠ್ಮಂಡು: ನೇಪಾಳದ ಡಾಂಗ್ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭಾರತೀಯರು ಸೇರಿ ೧೨ ಮಂದಿ ಸಾವಿಗೀಡಾಗಿದ್ದಾರೆ.
ಈ ಅಪಘಾತ ಕುರಿತು ಅಧಿಕಾರಿಗಳನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ನೀಡಿವೆ.
ಬಾಂಕೆ ಜಿಲ್ಲೆಯ ನೇಪಾಳದಗಂಜ್ನಿಂದ ಕಠ್ಮಂಡುವಿಗೆ ಪ್ರಯಾಣ ಮಾಡುತ್ತಿದ್ದ ಬಸ್, ಜಿಲ್ಲೆಯ ಭಾಲುಬಾಂಗ್ ಸೇತುವೆಯಿಂದ ಕೆಳಜಾರಿ ರಾಪ್ತಿ ನದಿಗೆ ಉರುಳಿಬಿದ್ದಿದೆ.
ಈ ಅಪಘಾತದಲ್ಲಿ ೧೨ ಮಂದಿ ಮೃತಪಟ್ಟಿದ್ದು, ೨೨ ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಮರಣ ಹೊಂದಿದ ೧೨ ಮಂದಿಯಲ್ಲಿ ಇಬ್ಬರು ಭಾರತೀಯರು ಹಾಗೂ ಇಬ್ಬರು ಸ್ತಳೀಯರೆಂದು ಗುರುತಿಸಲಾಗಿದ್ದು ಉಳಿದ ೮ ಮಂದಿಯ ಬಗ್ಗೆ ಸ್ಪಷ್ಟ ಮಾಹಿತಿ ದೊರೆತಿಲ್ಲ.
ಈ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಪೊಲೀಸ್ ಅಧಕಾರಿ ಉಜ್ವಲ್ ಬಹಾದುರ್ ಸಿಂಗ್ ತಿಳಿಸಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…