ವಿಕಿಪೀಡಿಯಾ ಸಹಸಂಸ್ಥಾಪಕರಾದ ಜಿಮ್ಮಿ ವೇಲ್ಸ್ ಅವರು ಚಾಟ್ ಜಿಪಿಟಿ ಬಗ್ಗೆ ಮಾತನಾಡಿದ್ದು, ಚಾಟ್ ಜಿಪಿಟಿ ಬಹಳ ಕೆಟ್ಟದ್ದು, ಇದರಿಂದ ಜ್ಞಾನ ನಾಶವಾಗುತ್ತದೆ ಎಂದು ವಿಕಿಪೀಡಿಯಾ ಸಹಸಂಸ್ಥಾಪಕ ಅಭಿಪ್ರಾಯಪಟ್ಟಿದ್ದಾರೆ.
ಪೋರ್ಚುಗಲ್ನಲ್ಲಿ ಆಯೋಜಿಸಲಾಗಿದ್ದ ವೆಬ್ ಶೃಂಗಸಭೆ 2023ರಲ್ಲಿ ಚಾಟ್ ಜಿಪಿಟಿ ಬಗ್ಗೆ ಮಾತನಾಡಿದ ಅವರು ಇಂತಹ ಕೃತಕ ಬುದ್ಧಮತ್ತೆಯ ಮಿತಿಗಳ ಬಗ್ಗೆ ವಿವರಿಸಿದ್ದಾರೆ, “ಚಾಟ್ ಜಿಪಿಟಿ ಆರಂಬದಲ್ಲಿ ಬಳಸಲು ಉತ್ತಮವೆನಿಸುತ್ತದೆ. ಬಳಸಲು ಆರಂಭಿಸಿದ ನಂತರ ಅದು ಕೆಟ್ಟದ್ದು ಎನಿಸಿಬಿಡುತ್ತದೆ, ಇದರಿಂದ ಸಂಶೋಧನಾ ಮನೊಭಾವ ಕುಂಠಿತಗೊಂಡಿದೆ, ಈ ಸಭೆಯಲ್ಲಿರುವ ಪ್ರತಿಯೊಬ್ಬರಿಗೂ ಇದರ ಬಗ್ಗೆ ಅರಿವಿದೆ” ಎಂದಿದ್ದಾರೆ.
ಜನರೇಟಿವ್ ಎಐ ಕಂಪನಿಗಳು ಸರಿಯಾದ ಕ್ರಮದಲ್ಲಿ ಪರಿಶೀಲನೆ ನಡೆಸಿ, ಅರ್ಹವಾಗಿ ಪರವಾನಗಿ ಪಡೆಯುತ್ತಿದ್ದಾರೆಯೇ ಎಂಬ ಆಕ್ಸಿಯೋನ್ನ ಹಿರಿಯ ಪತ್ರಕರ್ತರ ಪ್ರಶ್ನೆಗೆ, ” ಹೊಸ ತಂತ್ರಜ್ಞಾನಗಳು ಒಮ್ಮೆ ಬಂದು, ಅವುಗಳನ್ನು ನಾವು ಅಳವಡಿಸಿಕೊಂಡರೆ ಅದು ಸೋಮಾರಿತನವನ್ನು ಸೂಚಿಸುವ ಎಚ್ಚರಿಕೆಯನ್ನು ನೀಡುತ್ತದೆ. ಎಐಯ ಪರಿಶೀಲನೆಯು ಮುಂದಿನ ನವೀನ ತಂತ್ರಜ್ಞಾನಗಳ ಎಚ್ಚರಿಕೆಯ ಭಾಗವಾಗಿದೆ ಎಂದು ವೇಲ್ಸ್ ಹೇಳಿದ್ದಾರೆ.
ಚಾಟ್ ಜಿಪಿಟಿಯನ್ನು ಹೆಚ್ಚು ಜವಾಬ್ದಾರಿಯುತವಾಗಿ ಮತ್ತು ವಾಸ್ತವಿಕವಾಗಿ ನಾವು ನೋಡಬೇಕಿದೆ. ಇದರಿಂದ ಡೇಟಾವನ್ನು ಹೆಚ್ಚು ಫಿಲ್ಟರ್ ಮಾಡಿದರೇ ಅದು ಸಾಮಾಜಿಕ ಮಾಧ್ಯಮದಂತಹ ಕಡಿಮೆ ಗುಣಮಟ್ಟದ ಮೂಲಗಳನ್ನು ತಪ್ಪಿಸಿ, ವಿವಿಧ ಕ್ಷೇತ್ರಗಳಿಗೆ ಹಾನಿಯನ್ನುಂಟು ಮಾಡಲಿದೆ ಎಂದು ಅವರು ಭಾವಿಸಿದ್ದಾರೆ.
ಏನಿದು ಚಾಟ್ ಜಿಪಿಟಿ?
ಇದೊಂದು ನವೀನ ತಂತ್ರಜ್ಞಾನವಾಗಿದೆ. ನಮಗೆ ಬೇಕಾದ ಸಮಗ್ರ ಮಾಹಿತಿಯ ಬಗ್ಗೆ ಒಂದು ಸಾಲಿನಲ್ಲಿ ಬರೆದರೆ ಚಾಟ್ ಜಿಪಿಟಿ ನಾವು ಕೇಳಿದಷ್ಟು ಪದಮಿತಿಯಲ್ಲಿ ಮಾಹಿತಿ ನೀಡಲಿದೆ. ಇದು ಅತಿ ನಿಖರವಾಗಿದ್ದು, ಇದನ್ನು ಬಳಸುವ ಮೂಲ ಉದ್ದೇಶವೇ ಕೆಲಸದ ಒತ್ತಡ ಕಡಿಮೆ ಮಾಡಿಕೊಳ್ಳುವುದಾಗಿದೆ. ಆದರೆ ಇದು ಜನರ ಜ್ಞಾನ ಸಂಪಾದನೆಗೆ ನೇರವಾಗಿಯೇ ಪೆಟ್ಟು ನೀಡುತ್ತಿದೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…