ಅಂತಾರಾಷ್ಟ್ರೀಯ

ಚಾಟ್‌ ಜಿಪಿಟಿ ಬಹಳ ಕೆಟ್ಟದ್ದು : ವಿಕಿಪೀಡಿಯಾ ಸಹಸಂಸ್ಥಾಪಕ ಜಿಮ್ಮಿ ವೇಲ್ಸ್‌

ವಿಕಿಪೀಡಿಯಾ ಸಹಸಂಸ್ಥಾಪಕರಾದ ಜಿಮ್ಮಿ ವೇಲ್ಸ್‌ ಅವರು ಚಾಟ್‌ ಜಿಪಿಟಿ ಬಗ್ಗೆ ಮಾತನಾಡಿದ್ದು, ಚಾಟ್‌ ಜಿಪಿಟಿ ಬಹಳ ಕೆಟ್ಟದ್ದು, ಇದರಿಂದ ಜ್ಞಾನ ನಾಶವಾಗುತ್ತದೆ ಎಂದು ವಿಕಿಪೀಡಿಯಾ ಸಹಸಂಸ್ಥಾಪಕ ಅಭಿಪ್ರಾಯಪಟ್ಟಿದ್ದಾರೆ.

ಪೋರ್ಚುಗಲ್‌ನಲ್ಲಿ ಆಯೋಜಿಸಲಾಗಿದ್ದ ವೆಬ್‌ ಶೃಂಗಸಭೆ 2023ರಲ್ಲಿ ಚಾಟ್‌ ಜಿಪಿಟಿ ಬಗ್ಗೆ ಮಾತನಾಡಿದ ಅವರು ಇಂತಹ ಕೃತಕ ಬುದ್ಧಮತ್ತೆಯ ಮಿತಿಗಳ ಬಗ್ಗೆ ವಿವರಿಸಿದ್ದಾರೆ, “ಚಾಟ್‌ ಜಿಪಿಟಿ ಆರಂಬದಲ್ಲಿ ಬಳಸಲು ಉತ್ತಮವೆನಿಸುತ್ತದೆ. ಬಳಸಲು ಆರಂಭಿಸಿದ ನಂತರ ಅದು ಕೆಟ್ಟದ್ದು ಎನಿಸಿಬಿಡುತ್ತದೆ, ಇದರಿಂದ ಸಂಶೋಧನಾ ಮನೊಭಾವ ಕುಂಠಿತಗೊಂಡಿದೆ, ಈ ಸಭೆಯಲ್ಲಿರುವ ಪ್ರತಿಯೊಬ್ಬರಿಗೂ ಇದರ ಬಗ್ಗೆ ಅರಿವಿದೆ” ಎಂದಿದ್ದಾರೆ.

ಜನರೇಟಿವ್‌ ಎಐ ಕಂಪನಿಗಳು ಸರಿಯಾದ ಕ್ರಮದಲ್ಲಿ ಪರಿಶೀಲನೆ ನಡೆಸಿ, ಅರ್ಹವಾಗಿ ಪರವಾನಗಿ ಪಡೆಯುತ್ತಿದ್ದಾರೆಯೇ ಎಂಬ ಆಕ್ಸಿಯೋನ್‌ನ ಹಿರಿಯ ಪತ್ರಕರ್ತರ ಪ್ರಶ್ನೆಗೆ, ” ಹೊಸ ತಂತ್ರಜ್ಞಾನಗಳು ಒಮ್ಮೆ ಬಂದು, ಅವುಗಳನ್ನು ನಾವು ಅಳವಡಿಸಿಕೊಂಡರೆ ಅದು ಸೋಮಾರಿತನವನ್ನು ಸೂಚಿಸುವ ಎಚ್ಚರಿಕೆಯನ್ನು ನೀಡುತ್ತದೆ. ಎಐಯ ಪರಿಶೀಲನೆಯು ಮುಂದಿನ ನವೀನ ತಂತ್ರಜ್ಞಾನಗಳ ಎಚ್ಚರಿಕೆಯ ಭಾಗವಾಗಿದೆ ಎಂದು ವೇಲ್ಸ್‌ ಹೇಳಿದ್ದಾರೆ.

ಚಾಟ್‌ ಜಿಪಿಟಿಯನ್ನು ಹೆಚ್ಚು ಜವಾಬ್ದಾರಿಯುತವಾಗಿ ಮತ್ತು ವಾಸ್ತವಿಕವಾಗಿ ನಾವು ನೋಡಬೇಕಿದೆ. ಇದರಿಂದ ಡೇಟಾವನ್ನು ಹೆಚ್ಚು ಫಿಲ್ಟರ್‌ ಮಾಡಿದರೇ ಅದು ಸಾಮಾಜಿಕ ಮಾಧ್ಯಮದಂತಹ ಕಡಿಮೆ ಗುಣಮಟ್ಟದ ಮೂಲಗಳನ್ನು ತಪ್ಪಿಸಿ, ವಿವಿಧ ಕ್ಷೇತ್ರಗಳಿಗೆ ಹಾನಿಯನ್ನುಂಟು ಮಾಡಲಿದೆ ಎಂದು ಅವರು ಭಾವಿಸಿದ್ದಾರೆ.

ಏನಿದು ಚಾಟ್‌ ಜಿಪಿಟಿ?
ಇದೊಂದು ನವೀನ ತಂತ್ರಜ್ಞಾನವಾಗಿದೆ. ನಮಗೆ ಬೇಕಾದ ಸಮಗ್ರ ಮಾಹಿತಿಯ ಬಗ್ಗೆ ಒಂದು ಸಾಲಿನಲ್ಲಿ ಬರೆದರೆ ಚಾಟ್‌ ಜಿಪಿಟಿ ನಾವು ಕೇಳಿದಷ್ಟು ಪದಮಿತಿಯಲ್ಲಿ ಮಾಹಿತಿ ನೀಡಲಿದೆ. ಇದು ಅತಿ ನಿಖರವಾಗಿದ್ದು, ಇದನ್ನು ಬಳಸುವ ಮೂಲ ಉದ್ದೇಶವೇ ಕೆಲಸದ ಒತ್ತಡ ಕಡಿಮೆ ಮಾಡಿಕೊಳ್ಳುವುದಾಗಿದೆ. ಆದರೆ ಇದು ಜನರ ಜ್ಞಾನ ಸಂಪಾದನೆಗೆ ನೇರವಾಗಿಯೇ ಪೆಟ್ಟು ನೀಡುತ್ತಿದೆ.

andolanait

Share
Published by
andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

13 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

13 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

14 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

15 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

19 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

19 hours ago