ಅಂತಾರಾಷ್ಟ್ರೀಯ

ಗಾಝಾ ಮೇಲೆ ಮುಂದುವರಿದ ಇಸ್ರೇಲ್ ದಾಳಿ; ಮೃತರ ಸಂಖ್ಯೆ 10,000ಕ್ಕೆ ಏರಿಕೆ

ಟೆಲ್‌ ಅವೀವ್ : “ಯುದ್ಧ ಮುಗಿದ ನಂತರ ಗಾಝಾದಲ್ಲಿ ಅನಿರ್ದಿಷ್ಟ ಅವಧಿಗೆ ಭದ್ರತಾ ಜವಾಬ್ದಾರಿಯನ್ನು ಇಸ್ರೇಲ್‌ ಹೊಂದಬಹುದು ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ.

ಗಾಝಾದಲ್ಲಿ ಇಸ್ರೇಲ್‌ ಮಿಲಿಟರಿ ಕಾರ್ಯಾಚರಣೆ ಆರಂಭಗೊಂಡಂದಿನಿಂದ ಇಲ್ಲಿಯ ತನಕ 4,104 ಮಕ್ಕಳೂ ಸೇರಿದಂತೆ 10,000ಕ್ಕೂ ಅಧಿಕ ಮಂದಿ ಬಲಿಯಾಗಿರುವ ನಡುವೆ ನೆತನ್ಯಾಹು ಅವರ ಹೇಳಿಕೆ ಬಂದಿದೆ.

“ನನಗನಿಸುತ್ತೆ, ಅನಿರ್ದಿಷ್ಟ ಅವಧಿಗೆ ಇಸ್ರೇಲ್‌ ಒಟ್ಟಾರೆ ಭದ್ರತಾ ಜವಾಬ್ದಾರಿ ಹೊಂದಲಿದೆ. ಅದಿಲ್ಲದೇ ಇದ್ದಾಗ ಏನಾಗುತ್ತದೆ ಎಂಬುದನ್ನು ನೋಡಿದ್ದೇವೆ. ಅದು ಹಮಾಸ್‌ ನಾವು ಊಹಿಸದಷ್ಟು ಬೆಳೆಯಲು ಕಾರಣವಾಗಿದೆ,” ಎಂದು ಅವರು ಹೇಳಿದರು.

“ನಮ್ಮ ಒತ್ತೆಯಾಳುಗಳ ಬಿಡುಗಡೆಯಾಗದೆ ಕದನವಿರಾಮ ಇರುವುದಿಲ್ಲ. ತಂತ್ರಗಾರಿಕೆಯ ವಿರಾಮಗಳು, ಒಂದು ಗಂಟೆಯಷ್ಟು ಇರಬಹುದು. ಹಿಂದೆಯೂ ಇತ್ತು. ಮಾನವೀಯ ಉದ್ದೇಶದ ಸರಕುಗಳ ಸಾಗಾಟಕ್ಕೆ ಅನುವು ಮಾಡಲು ಹಾಗೂ ನಮ್ಮ ಒತ್ತೆಯಾಳುಗಳ ಬಿಡುಗಡೆ ಕುರಿತಂತೆ ಪರಿಸ್ಥಿತಿ ಪರಿಶೀಲಿಸುವೆ,” ಎಂದು ನೆತನ್ಯಾಹು ಹೇಳಿದರು.

andolanait

Share
Published by
andolanait

Recent Posts

ಯತೀಂದ್ರ ಸಿದ್ಧರಾಮಯ್ಯ ಅವಹೇಳನ ಪ್ರಕರಣ: ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್ ವಿರುದ್ಧ ದೂರು ದಾಖಲು

ಮೈಸೂರು: ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್‌ ಮಾಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಹಾಗೂ ಬಿಜೆಪಿ ಐಟಿ…

1 hour ago

ಫೆಬ್ರವರಿ.13ರಿಂದ ಹಂಪಿ ಉತ್ಸವ-2026

ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…

1 hour ago

ಹನೂರು ಕ್ಷೇತ್ರದಲ್ಲಿ 15 ವರ್ಷಗಳಿಂದ ಆಗದೇ ಇದ್ದ ಅಭಿವೃದ್ಧಿ ಕಾರ್ಯ ನಾನು ಮಾಡಿ ತೋರಿಸಿದ್ದೇನೆ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ…

1 hour ago

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 3.39 ಕೋಟಿ ಮೌಲ್ಯದ ಗಾಂಜಾ ಸೀಜ್‌

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ…

2 hours ago

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಮ್ಯಾಚ್‌ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಮ್ಯಾಚ್‌ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…

2 hours ago

ಹೋಗೇನಕಲ್‌ ಫಾಲ್ಸ್‌ಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ 50 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…

3 hours ago