ಟೆಲ್ ಅವೀವ್ : “ಯುದ್ಧ ಮುಗಿದ ನಂತರ ಗಾಝಾದಲ್ಲಿ ಅನಿರ್ದಿಷ್ಟ ಅವಧಿಗೆ ಭದ್ರತಾ ಜವಾಬ್ದಾರಿಯನ್ನು ಇಸ್ರೇಲ್ ಹೊಂದಬಹುದು ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.
ಗಾಝಾದಲ್ಲಿ ಇಸ್ರೇಲ್ ಮಿಲಿಟರಿ ಕಾರ್ಯಾಚರಣೆ ಆರಂಭಗೊಂಡಂದಿನಿಂದ ಇಲ್ಲಿಯ ತನಕ 4,104 ಮಕ್ಕಳೂ ಸೇರಿದಂತೆ 10,000ಕ್ಕೂ ಅಧಿಕ ಮಂದಿ ಬಲಿಯಾಗಿರುವ ನಡುವೆ ನೆತನ್ಯಾಹು ಅವರ ಹೇಳಿಕೆ ಬಂದಿದೆ.
“ನನಗನಿಸುತ್ತೆ, ಅನಿರ್ದಿಷ್ಟ ಅವಧಿಗೆ ಇಸ್ರೇಲ್ ಒಟ್ಟಾರೆ ಭದ್ರತಾ ಜವಾಬ್ದಾರಿ ಹೊಂದಲಿದೆ. ಅದಿಲ್ಲದೇ ಇದ್ದಾಗ ಏನಾಗುತ್ತದೆ ಎಂಬುದನ್ನು ನೋಡಿದ್ದೇವೆ. ಅದು ಹಮಾಸ್ ನಾವು ಊಹಿಸದಷ್ಟು ಬೆಳೆಯಲು ಕಾರಣವಾಗಿದೆ,” ಎಂದು ಅವರು ಹೇಳಿದರು.
“ನಮ್ಮ ಒತ್ತೆಯಾಳುಗಳ ಬಿಡುಗಡೆಯಾಗದೆ ಕದನವಿರಾಮ ಇರುವುದಿಲ್ಲ. ತಂತ್ರಗಾರಿಕೆಯ ವಿರಾಮಗಳು, ಒಂದು ಗಂಟೆಯಷ್ಟು ಇರಬಹುದು. ಹಿಂದೆಯೂ ಇತ್ತು. ಮಾನವೀಯ ಉದ್ದೇಶದ ಸರಕುಗಳ ಸಾಗಾಟಕ್ಕೆ ಅನುವು ಮಾಡಲು ಹಾಗೂ ನಮ್ಮ ಒತ್ತೆಯಾಳುಗಳ ಬಿಡುಗಡೆ ಕುರಿತಂತೆ ಪರಿಸ್ಥಿತಿ ಪರಿಶೀಲಿಸುವೆ,” ಎಂದು ನೆತನ್ಯಾಹು ಹೇಳಿದರು.
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…