ಅಂತಾರಾಷ್ಟ್ರೀಯ

ಗಾಝಾ ಮೇಲೆ ಮುಂದುವರಿದ ಇಸ್ರೇಲ್ ದಾಳಿ; ಮೃತರ ಸಂಖ್ಯೆ 10,000ಕ್ಕೆ ಏರಿಕೆ

ಟೆಲ್‌ ಅವೀವ್ : “ಯುದ್ಧ ಮುಗಿದ ನಂತರ ಗಾಝಾದಲ್ಲಿ ಅನಿರ್ದಿಷ್ಟ ಅವಧಿಗೆ ಭದ್ರತಾ ಜವಾಬ್ದಾರಿಯನ್ನು ಇಸ್ರೇಲ್‌ ಹೊಂದಬಹುದು ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ.

ಗಾಝಾದಲ್ಲಿ ಇಸ್ರೇಲ್‌ ಮಿಲಿಟರಿ ಕಾರ್ಯಾಚರಣೆ ಆರಂಭಗೊಂಡಂದಿನಿಂದ ಇಲ್ಲಿಯ ತನಕ 4,104 ಮಕ್ಕಳೂ ಸೇರಿದಂತೆ 10,000ಕ್ಕೂ ಅಧಿಕ ಮಂದಿ ಬಲಿಯಾಗಿರುವ ನಡುವೆ ನೆತನ್ಯಾಹು ಅವರ ಹೇಳಿಕೆ ಬಂದಿದೆ.

“ನನಗನಿಸುತ್ತೆ, ಅನಿರ್ದಿಷ್ಟ ಅವಧಿಗೆ ಇಸ್ರೇಲ್‌ ಒಟ್ಟಾರೆ ಭದ್ರತಾ ಜವಾಬ್ದಾರಿ ಹೊಂದಲಿದೆ. ಅದಿಲ್ಲದೇ ಇದ್ದಾಗ ಏನಾಗುತ್ತದೆ ಎಂಬುದನ್ನು ನೋಡಿದ್ದೇವೆ. ಅದು ಹಮಾಸ್‌ ನಾವು ಊಹಿಸದಷ್ಟು ಬೆಳೆಯಲು ಕಾರಣವಾಗಿದೆ,” ಎಂದು ಅವರು ಹೇಳಿದರು.

“ನಮ್ಮ ಒತ್ತೆಯಾಳುಗಳ ಬಿಡುಗಡೆಯಾಗದೆ ಕದನವಿರಾಮ ಇರುವುದಿಲ್ಲ. ತಂತ್ರಗಾರಿಕೆಯ ವಿರಾಮಗಳು, ಒಂದು ಗಂಟೆಯಷ್ಟು ಇರಬಹುದು. ಹಿಂದೆಯೂ ಇತ್ತು. ಮಾನವೀಯ ಉದ್ದೇಶದ ಸರಕುಗಳ ಸಾಗಾಟಕ್ಕೆ ಅನುವು ಮಾಡಲು ಹಾಗೂ ನಮ್ಮ ಒತ್ತೆಯಾಳುಗಳ ಬಿಡುಗಡೆ ಕುರಿತಂತೆ ಪರಿಸ್ಥಿತಿ ಪರಿಶೀಲಿಸುವೆ,” ಎಂದು ನೆತನ್ಯಾಹು ಹೇಳಿದರು.

andolanait

Share
Published by
andolanait

Recent Posts

ರೈಲು ನಿಲ್ದಾಣಗಳಿಗೆ ಭೇಟಿ,ಪರಿಶೀಲನೆ ನಡೆಸಿದ ಡಿಆರ್‌ಎಂ ಮುದಿತ್‌ ಮಿತ್ತಲ್‌

ಮೈಸೂರು : ನೈಋತ್ಯರೈಲ್ವೆ ಮೈಸೂರು ವಿಭಾಗದ ಡಿಆರ್‌ಎಂ ಮುದಿತ್ ಮಿತ್ತಲ್ ಅವರು ಅಧಿಕಾರಿಗಳೊಂದಿಗೆ ನಗರದ ವಿವಿಧ ರೈಲು ನಿಲ್ದಾಣಗಳಿಗೆ ಭೇಟಿ…

12 mins ago

ಪೊಲೀಸರು ಯಾರನ್ನು ಓಲೈಕೆ ಮಾಡದಿರಿ : ಡಿಜಿಪಿ ಚಂದ್ರಶೇಖರ್‌ ಸಲಹೆ

ಮೈಸೂರು : ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ.ಚಂದ್ರಶೇಖರ್ ಅವರು ಮಂಗಳವಾರ ಬೆಳಿಗ್ಗೆ ಮೈಸೂರಿಗೆ ಭೇಟಿ ನೀಡಿ…

21 mins ago

ಮೈಸೂರು | ಫ್ಯೂಚರ್‌ ಮಾಡೆಲ್‌ ಆಫ್‌ ಇಂಡಿಯಾ ಶೀರ್ಷಿಕೆಯಡಿ ಡಿ.28ರಂದು ಫ್ಯಾಷನ್‌ ಶೋ

ಮೈಸೂರು : ತಿಬ್ಬಾಸ್ ಗ್ರೂಪ್ ಸಹಯೋಗದೊಂದಿಗೆ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಆವರಣದಲ್ಲಿ ಡಿ.೨೮ರಂದು ‘ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ’ ಶೀರ್ಷಿಕೆಯಡಿ…

42 mins ago

ನಾಳೆ, ನಾಡಿದ್ದು ದಿನಪೂರ್ತಿ ಮೈಸೂರಿನ ಈ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ

ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ೬೬/೧೧ ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ…

1 hour ago

ಸದನದ ಗೌರವವನ್ನು ಎತ್ತಿಹಿಡಿಯಬೇಕು: ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಳಗಾವಿ : ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ…

1 hour ago

ಸರ್ಕಾರದ ವಿರುದ್ಧ ಬಿಜೆಪಿ ಬೃಹತ್‌ ಪ್ರತಿಭಟನೆ : ಸುವರ್ಣಸೌಧ ಮುತ್ತಿಗೆ ಯತ್ನ ; ಹಲವರು ಪೊಲೀಸ್‌ ವಶಕ್ಕೆ

ಬೆಳಗಾವಿ : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ…

2 hours ago