ಟೆಲ್ ಅವೀವ್ : “ಯುದ್ಧ ಮುಗಿದ ನಂತರ ಗಾಝಾದಲ್ಲಿ ಅನಿರ್ದಿಷ್ಟ ಅವಧಿಗೆ ಭದ್ರತಾ ಜವಾಬ್ದಾರಿಯನ್ನು ಇಸ್ರೇಲ್ ಹೊಂದಬಹುದು ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.
ಗಾಝಾದಲ್ಲಿ ಇಸ್ರೇಲ್ ಮಿಲಿಟರಿ ಕಾರ್ಯಾಚರಣೆ ಆರಂಭಗೊಂಡಂದಿನಿಂದ ಇಲ್ಲಿಯ ತನಕ 4,104 ಮಕ್ಕಳೂ ಸೇರಿದಂತೆ 10,000ಕ್ಕೂ ಅಧಿಕ ಮಂದಿ ಬಲಿಯಾಗಿರುವ ನಡುವೆ ನೆತನ್ಯಾಹು ಅವರ ಹೇಳಿಕೆ ಬಂದಿದೆ.
“ನನಗನಿಸುತ್ತೆ, ಅನಿರ್ದಿಷ್ಟ ಅವಧಿಗೆ ಇಸ್ರೇಲ್ ಒಟ್ಟಾರೆ ಭದ್ರತಾ ಜವಾಬ್ದಾರಿ ಹೊಂದಲಿದೆ. ಅದಿಲ್ಲದೇ ಇದ್ದಾಗ ಏನಾಗುತ್ತದೆ ಎಂಬುದನ್ನು ನೋಡಿದ್ದೇವೆ. ಅದು ಹಮಾಸ್ ನಾವು ಊಹಿಸದಷ್ಟು ಬೆಳೆಯಲು ಕಾರಣವಾಗಿದೆ,” ಎಂದು ಅವರು ಹೇಳಿದರು.
“ನಮ್ಮ ಒತ್ತೆಯಾಳುಗಳ ಬಿಡುಗಡೆಯಾಗದೆ ಕದನವಿರಾಮ ಇರುವುದಿಲ್ಲ. ತಂತ್ರಗಾರಿಕೆಯ ವಿರಾಮಗಳು, ಒಂದು ಗಂಟೆಯಷ್ಟು ಇರಬಹುದು. ಹಿಂದೆಯೂ ಇತ್ತು. ಮಾನವೀಯ ಉದ್ದೇಶದ ಸರಕುಗಳ ಸಾಗಾಟಕ್ಕೆ ಅನುವು ಮಾಡಲು ಹಾಗೂ ನಮ್ಮ ಒತ್ತೆಯಾಳುಗಳ ಬಿಡುಗಡೆ ಕುರಿತಂತೆ ಪರಿಸ್ಥಿತಿ ಪರಿಶೀಲಿಸುವೆ,” ಎಂದು ನೆತನ್ಯಾಹು ಹೇಳಿದರು.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…