ಅಂತಾರಾಷ್ಟ್ರೀಯ

ಗಾಝಾ ಮೇಲೆ ಮುಂದುವರಿದ ಇಸ್ರೇಲ್ ದಾಳಿ; ಮೃತರ ಸಂಖ್ಯೆ 10,000ಕ್ಕೆ ಏರಿಕೆ

ಟೆಲ್‌ ಅವೀವ್ : “ಯುದ್ಧ ಮುಗಿದ ನಂತರ ಗಾಝಾದಲ್ಲಿ ಅನಿರ್ದಿಷ್ಟ ಅವಧಿಗೆ ಭದ್ರತಾ ಜವಾಬ್ದಾರಿಯನ್ನು ಇಸ್ರೇಲ್‌ ಹೊಂದಬಹುದು ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ.

ಗಾಝಾದಲ್ಲಿ ಇಸ್ರೇಲ್‌ ಮಿಲಿಟರಿ ಕಾರ್ಯಾಚರಣೆ ಆರಂಭಗೊಂಡಂದಿನಿಂದ ಇಲ್ಲಿಯ ತನಕ 4,104 ಮಕ್ಕಳೂ ಸೇರಿದಂತೆ 10,000ಕ್ಕೂ ಅಧಿಕ ಮಂದಿ ಬಲಿಯಾಗಿರುವ ನಡುವೆ ನೆತನ್ಯಾಹು ಅವರ ಹೇಳಿಕೆ ಬಂದಿದೆ.

“ನನಗನಿಸುತ್ತೆ, ಅನಿರ್ದಿಷ್ಟ ಅವಧಿಗೆ ಇಸ್ರೇಲ್‌ ಒಟ್ಟಾರೆ ಭದ್ರತಾ ಜವಾಬ್ದಾರಿ ಹೊಂದಲಿದೆ. ಅದಿಲ್ಲದೇ ಇದ್ದಾಗ ಏನಾಗುತ್ತದೆ ಎಂಬುದನ್ನು ನೋಡಿದ್ದೇವೆ. ಅದು ಹಮಾಸ್‌ ನಾವು ಊಹಿಸದಷ್ಟು ಬೆಳೆಯಲು ಕಾರಣವಾಗಿದೆ,” ಎಂದು ಅವರು ಹೇಳಿದರು.

“ನಮ್ಮ ಒತ್ತೆಯಾಳುಗಳ ಬಿಡುಗಡೆಯಾಗದೆ ಕದನವಿರಾಮ ಇರುವುದಿಲ್ಲ. ತಂತ್ರಗಾರಿಕೆಯ ವಿರಾಮಗಳು, ಒಂದು ಗಂಟೆಯಷ್ಟು ಇರಬಹುದು. ಹಿಂದೆಯೂ ಇತ್ತು. ಮಾನವೀಯ ಉದ್ದೇಶದ ಸರಕುಗಳ ಸಾಗಾಟಕ್ಕೆ ಅನುವು ಮಾಡಲು ಹಾಗೂ ನಮ್ಮ ಒತ್ತೆಯಾಳುಗಳ ಬಿಡುಗಡೆ ಕುರಿತಂತೆ ಪರಿಸ್ಥಿತಿ ಪರಿಶೀಲಿಸುವೆ,” ಎಂದು ನೆತನ್ಯಾಹು ಹೇಳಿದರು.

andolanait

Share
Published by
andolanait

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

4 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

5 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

5 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

6 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

6 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

10 hours ago