ಅಂತಾರಾಷ್ಟ್ರೀಯ

ಗಾಝಾ ಮೇಲೆ ಮುಂದುವರಿದ ಇಸ್ರೇಲ್ ದಾಳಿ; ಮೃತರ ಸಂಖ್ಯೆ 10,000ಕ್ಕೆ ಏರಿಕೆ

ಟೆಲ್‌ ಅವೀವ್ : “ಯುದ್ಧ ಮುಗಿದ ನಂತರ ಗಾಝಾದಲ್ಲಿ ಅನಿರ್ದಿಷ್ಟ ಅವಧಿಗೆ ಭದ್ರತಾ ಜವಾಬ್ದಾರಿಯನ್ನು ಇಸ್ರೇಲ್‌ ಹೊಂದಬಹುದು ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ.

ಗಾಝಾದಲ್ಲಿ ಇಸ್ರೇಲ್‌ ಮಿಲಿಟರಿ ಕಾರ್ಯಾಚರಣೆ ಆರಂಭಗೊಂಡಂದಿನಿಂದ ಇಲ್ಲಿಯ ತನಕ 4,104 ಮಕ್ಕಳೂ ಸೇರಿದಂತೆ 10,000ಕ್ಕೂ ಅಧಿಕ ಮಂದಿ ಬಲಿಯಾಗಿರುವ ನಡುವೆ ನೆತನ್ಯಾಹು ಅವರ ಹೇಳಿಕೆ ಬಂದಿದೆ.

“ನನಗನಿಸುತ್ತೆ, ಅನಿರ್ದಿಷ್ಟ ಅವಧಿಗೆ ಇಸ್ರೇಲ್‌ ಒಟ್ಟಾರೆ ಭದ್ರತಾ ಜವಾಬ್ದಾರಿ ಹೊಂದಲಿದೆ. ಅದಿಲ್ಲದೇ ಇದ್ದಾಗ ಏನಾಗುತ್ತದೆ ಎಂಬುದನ್ನು ನೋಡಿದ್ದೇವೆ. ಅದು ಹಮಾಸ್‌ ನಾವು ಊಹಿಸದಷ್ಟು ಬೆಳೆಯಲು ಕಾರಣವಾಗಿದೆ,” ಎಂದು ಅವರು ಹೇಳಿದರು.

“ನಮ್ಮ ಒತ್ತೆಯಾಳುಗಳ ಬಿಡುಗಡೆಯಾಗದೆ ಕದನವಿರಾಮ ಇರುವುದಿಲ್ಲ. ತಂತ್ರಗಾರಿಕೆಯ ವಿರಾಮಗಳು, ಒಂದು ಗಂಟೆಯಷ್ಟು ಇರಬಹುದು. ಹಿಂದೆಯೂ ಇತ್ತು. ಮಾನವೀಯ ಉದ್ದೇಶದ ಸರಕುಗಳ ಸಾಗಾಟಕ್ಕೆ ಅನುವು ಮಾಡಲು ಹಾಗೂ ನಮ್ಮ ಒತ್ತೆಯಾಳುಗಳ ಬಿಡುಗಡೆ ಕುರಿತಂತೆ ಪರಿಸ್ಥಿತಿ ಪರಿಶೀಲಿಸುವೆ,” ಎಂದು ನೆತನ್ಯಾಹು ಹೇಳಿದರು.

andolanait

Share
Published by
andolanait

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

6 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

6 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

7 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

7 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

8 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

15 hours ago