ಅಂತಾರಾಷ್ಟ್ರೀಯ

ಇಸ್ರೇಲ್ ನಲ್ಲಿ ಮುಂದುವರಿದ ಹಮಾಸ್ ಉಗ್ರರ ಅಟ್ಟಹಾಸ: ಮೃತರ ಸಂಖ್ಯೆ 300ಕ್ಕೆ ಏರಿಕೆ

ಜೆರುಸೆಲೇಂ : ಇಸ್ರೇಲ್ ದೇಶದ ಮೇಲೆ ಶನಿವಾರ ಪ್ಯಾಲೆಸ್ಟೀನ್‌ನ ಹಮಾಸ್ ಉಗ್ರರು ನಡೆಸಿದ ಭಯೋತ್ಪಾದಕ ದಾಳಿಯಿಂದ ಮೃತಪಟ್ಟವರ ಸಂಖ್ಯೆ 300 ತಲುಪಿದೆ ಎಂದು ಇಸ್ರೇಲ್‌ನ ಹೀಬ್ರೂ ಭಾಷೆಯ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ. ಇಸ್ರೇಲ್​ ಅಧಿಕಾರಿಗಳು, ಟೈಮ್ಸ್ ಆಫ್ ಇಸ್ರೇಲ್‌ ಪತ್ರಿಕೆಗೆ ನೀಡಿದ ಮಾಹಿತಿ ಪ್ರಕಾರ, ದಾಳಿಯಲ್ಲಿ ಅಂದಾಜು 1,590 ಜನರು ತೀವ್ರವಾಗಿ ಗಾಯಗೊಂಡಿದ್ದು, ಹಲವರು ಜೀವನ್ಮರಣದ ಹೋರಾಟ ಮಾಡುತ್ತಿದ್ದಾರೆ. ಐಜಿಎಫ್‌ (ಇಸ್ರೇಲ್ ರಕ್ಷಣಾ ಪಡೆ) ಕೆಲವು ಸೈನಿಕರು, ನಾಗರಿಕರನ್ನು ಅಪಹರಿಸಿ ಗಾಜಾಕ್ಕೆ ಕರೆತಂದು ಒತ್ತೆಯಾಳುಗಳಾನ್ನಾಗಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಶನಿವಾರ ಬೆಳಗ್ಗೆ 6:30ರ ಸುಮಾರಿಗೆ ಗಾಜಾದಿಂದ ಇಸ್ರೇಲ್‌ ಮೇಲೆ 5,000ಕ್ಕೂ ಹೆಚ್ಚು ರಾಕೆಟ್‌ಗಳ ಮೂಲಕ ಗುಂಡಿನ ಸುರಿಮಳೆ ನಡೆದಿದೆ. ಟೆಲ್ ಅವಿವ್, ರೆಹೋವೊಟ್, ಗೆಡೆರಾ ಮತ್ತು ಅಶ್ಕೆಲೋನ್ ಸೇರಿದಂತೆ ಹಲವು ನಗರಗಳ ಮೇಲೆ ದಾಳಿ ನಡೆಸಲಾಗಿದೆ. ಹಮಾಸ್ ಭಯೋತ್ಪಾದಕರು ಗಾಜಾ ಪಟ್ಟಿಯಿಂದ ಇಸ್ರೇಲ್‌ ಪ್ರವೇಶಿಸಿ ವಿವಿಧ ಪಟ್ಟಣಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.ಹಮಾಸ್ ಮಿಲಿಟರಿ ಕಮಾಂಡರ್ ಮುಹಮ್ಮದ್ ಅಲ್-ಡೀಫ್ ಈ ಕಾರ್ಯಾಚರಣೆಯನ್ನು ‘ಅಲ್-ಅಕ್ಸಾ ಸ್ಟಾರ್ಮ್’ ಎಂದು ಕರೆದಿದ್ದಾರೆ. “ಮಹಿಳೆಯರ ಮೇಲಿನ ದಾಳಿಗಳು, ಜೆರುಸಲೆಮ್‌ನ ಅಲ್-ಅಕ್ಸಾ ಮಸೀದಿಯ ಅಪವಿತ್ರಗೊಳಿಸುವಿಕೆ ಹಾಗು ಗಾಜಾದ ಮೇಲೆ ನಡೆಯುವ ಮುತ್ತಿಗೆಗೆ ಪ್ರತಿಯಾದ ಸೇಡು ಇದು” ಎಂಬ ಹೇಳಿಕೆ ನೀಡಿದ್ದು ಸಿಎನ್‌ಎನ್ ವರದಿ ಮಾಡಿದೆ.
ದಿ ವಾಷಿಂಗ್ಟನ್ ಪೋಸ್ಟ್ ಇಸ್ಟೇಲ್ ಕೆಲವು ಗ್ರಾಫಿಕ್ ವೀಡಿಯೊಗಳು ಬಿಡುಗಡೆಗೊಳಿಸಿದ್ದು, ಪ್ಯಾಲೆಸ್ಟೀನಿಯನ್ ಉಗ್ರಗಾಮಿಗಳ ದಾಳಿಯ ನಂತರ ದಕ್ಷಿಣದ ನಗರವಾದ ಸ್ಡೆರೋಟ್‌ನ ಬೀದಿಗಳಲ್ಲಿ ಅಲ್ಲಲ್ಲಿ ಬಿದ್ದ ಮೃತದೇಹಗಳನ್ನು ತೋರಿಸಿವೆ. ಕಾರುಗಳು ಬುಲೆಟ್‌ಗಳಿಂದ ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡು ಉರಿಯುತ್ತಿವೆ.ಈ ನಡುವೆ, ಗಾಜಾದ ಉತ್ತರದ ಜಿಕಿಮ್ ಬೀಚ್ ಮೂಲಕ ಇಸ್ರೇಲ್‌ಗೆ ನುಸುಳುತ್ತಿದ್ದ ಏಳು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ಇಸ್ರೇಲ್‌ನೊಳಗೆ ಹಮಾಸ್ ಭಯೋತ್ಪಾದಕರು ನುಗ್ಗಿ ಒಳಬರದಂತೆ ತಡೆಯಲು ಹೋರಾಟ ಮುಂದುವರಿದಿದೆ ಎಂದು ಐಡಿಎಫ್ ಹೇಳಿದೆ.

ಟೈಮ್ಸ್ ಆಫ್ ಇಸ್ರೇಲ್ ಪ್ರಕಾರ, ಇತ್ತೀಚೆಗಷ್ಟೇ ಗಾಜಾದಲ್ಲಿ ಹಮಾಸ್ ಬಳಸುತ್ತಿದ್ದ ಮೂರು ಕಾರ್ಯಾಚರಣಾ ತಾಣಗಳನ್ನು ಹೊಡೆದುರುಳಿಸಲಾಗಿತ್ತು ಎಂದು ಮಿಲಿಟರಿ ಹೇಳುತ್ತದೆ. ದಕ್ಷಿಣದ ಪಟ್ಟಣ ಒಫಾಕಿಮ್‌ನಲ್ಲಿರುವ ಮನೆಯಲ್ಲಿ ಒತ್ತೆಯಾಳುಗಳಾಗಿ ಇಟ್ಟುಕೊಂಡಿದ್ದ ಜನರನ್ನು ಭಯೋತ್ಪಾದಕರು ಕೊಂದು ಹಾಕಿದ್ದಾರೆ. ಸದ್ಯ ಭಯೋತ್ಪಾದಕರಿಂದ ಇಸ್ರೇಲ್ ದೇಶದ ಕೆಲವು ಭಾಗಗಳನ್ನು ಮರಳಿ ಪಡೆದಿಲ್ಲ ಎಂದು IDFನ ವಕ್ತಾರರು ಮಾಹಿತಿ ನೀಡಿದ್ದಾರೆ.ಶನಿವಾರ ಉಗ್ರಗಾಮಿ ಗುಂಪು ಹಮಾಸ್‌ ನಡೆಸಿದ ದಾಳಿಯ ಹಿನ್ನೆಲೆಯಲ್ಲಿ ಗಾಜಾದೊಳಗೆ ಇಸ್ರೇಲ್​ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವಿನ ಯುದ್ಧ ಮುಂದುವರಿದಿದೆ. ಸದ್ಯಕ್ಕೆ ಸಂಪೂರ್ಣವಾಗಿ ನಮ್ಮ ಎಲ್ಲ ನೆಲೆಗಳನ್ನು ವಶಪಡಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಇಸ್ರೇಲ್‌ನ ಲೆಫ್ಟಿನೆಂಟ್ ಕರ್ನಲ್ ಜೊನಾಥನ್ ಕಾನ್ರಿಕಸ್ ತಿಳಿಸಿದ್ದಾರೆ.

ಹಮಾಸ್ ಭಯೋತ್ಪಾದಕರ ದಾಳಿಯನ್ನು ಸಂಪೂರ್ಣವಾಗಿ ಇಸ್ರೇಲ್ ರಕ್ಷಣಾ ಪಡೆಗಳು ಹಿಮ್ಮಟ್ಟಿಸಲಿವೆ. ದಾಳಿಗೆ ತಕ್ಕ ಪ್ರತ್ಯುತ್ತುರ ನೀಡಲಿದ್ದೇವೆ ಎಂದು ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಮುಗ್ಧ ನಾಗರಿಕರು, ಮಕ್ಕಳು ಮತ್ತು ಹಿರಿಯರನ್ನು ಕೊಂದು ಹಾಕಿದ್ದಾರೆ. ಇದಕ್ಕೆ ತಕ್ಕ ಬೆಲೆ ತರಬೇಕಾಗುತ್ತದೆ ಎಂದು ಇಸ್ರೇಲಿ ಪ್ರಧಾನಿ ಭಾನುವಾರ ‘X’ ನಲ್ಲಿ ಬರೆದಿದ್ದಾರೆ.

andolanait

Share
Published by
andolanait

Recent Posts

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

35 mins ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

6 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

6 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

7 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

7 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

12 hours ago