ಅಂತಾರಾಷ್ಟ್ರೀಯ

Corruption Index 2023: ವಿಶ್ವದ ಭ್ರಷ್ಟ ರಾಷ್ಟ್ರಗಳ ಪಟ್ಟಿ ಬಿಡುಗಡೆ; ಭಾರತಕ್ಕೆ ಎಷ್ಟನೇ ಸ್ಥಾನ?

ಟ್ರಾನ್ಪರೆನ್ಸಿ ಇಂಟರ್‌ನ್ಯಾಷನಲ್ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ 2023ರ ಪಟ್ಟಿಯನ್ನು ಪ್ರಕಟಿಸಿದ್ದು, 180 ದೇಶಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ನಿರೀಕ್ಷೆಯಂತೆ ಈ ಬಾರಿಯೂ ಸಹ ಡೆನ್‌ಮಾರ್ಕ್‌ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಭಾರತ 39 ಅಂಕಗಳನ್ನು ಪಡೆದು 93ನೇ ಸ್ಥಾನದಲ್ಲಿದೆ. ಕಳೆದ ಬಾರಿಯ ಪಟ್ಟಿಯಲ್ಲಿ 40 ಅಂಕಗಳನ್ನು ಪಡೆದುಕೊಂಡಿದ್ದ ಭಾರತ 85ನೇ ಸ್ಥಾನದಲ್ಲಿತ್ತು.

ಡೆನ್‌ಮಾರ್ಕ್‌ ಸತತ ಆರನೇ ಬಾರಿಗೆ ಈ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದ್ದು ಕಡಿಮೆ ಭ್ರಷ್ಟಾಚಾರವಿರುವ ದೇಶವೆನಿಸಿಕೊಂಡರೆ, ಸೋಮಾಲಿಯಾ ದೇಶ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ. ಇನ್ನು ಅಂಕಗಳನ್ನು ನೀಡುವ ಮೂಲಕ ಈ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟಾರೆ ದೇಶಗಳ ಪಟ್ಟಿಯಲ್ಲಿ ಮೂರನೇ ಎರಡರಷ್ಟು ದೇಶಗಳು 50ಕ್ಕಿಂತ ಕಡಿಮೆ ಅಂಕಗಳನ್ನು ಪಡೆದುಕೊಂಡಿವೆ. ಫಿನ್‌ಲ್ಯಾಂಡ್‌ ಎರಡನೇ ಸ್ಥಾನ ಹಾಗೂ ನ್ಯೂಜಿಲೆಂಡ್‌ ಮೂರನೇ ಸ್ಥಾನಗಳನ್ನು ಪಡೆದುಕೊಂಡಿವೆ. 

ಏಷ್ಯಾ ದೇಶಗಳ ಸ್ಥಾನಗಳೇನು?

ಭಾರತ 39 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಈ ಪಟ್ಟಿಯಲ್ಲಿ 93ನೇ ಸ್ಥಾನದಲ್ಲಿದ್ದು, 42 ಅಂಕಗಳನ್ನು ಪಡೆದುಕೊಂಡಿರುವ ಚೀನಾ 76ನೇ ಸ್ಥಾನದಲ್ಲಿದೆ. 29 ಅಂಕಗಳನ್ನು ಪಡೆದುಕೊಂಡಿರುವ ಪಾಕಿಸ್ತಾನ 133ನೇ ಸ್ಥಾನವನ್ನು ಪಡೆದುಕೊಂಡಿದೆ. 20 ಅಂಕಗಳನ್ನು ಪಡೆದುಕೊಂಡಿರುವ ಅಪ್ಘಾನಿಸ್ತಾನ 162ನೇ ಸ್ಥಾನದಲ್ಲಿದೆ. ಚೀನಾದ ಅಂಕ ಕಳೆದ ಪಟ್ಟಿಗೆ ಹೋಲಿಸಿದರೆ ಮೂರರಷ್ಟು ಕಡಿಮೆಯಾಗಿದೆ.

andolana

Share
Published by
andolana

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

2 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

2 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

2 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

2 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

2 hours ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

2 hours ago