ಅಂತಾರಾಷ್ಟ್ರೀಯ

Corruption Index 2023: ವಿಶ್ವದ ಭ್ರಷ್ಟ ರಾಷ್ಟ್ರಗಳ ಪಟ್ಟಿ ಬಿಡುಗಡೆ; ಭಾರತಕ್ಕೆ ಎಷ್ಟನೇ ಸ್ಥಾನ?

ಟ್ರಾನ್ಪರೆನ್ಸಿ ಇಂಟರ್‌ನ್ಯಾಷನಲ್ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ 2023ರ ಪಟ್ಟಿಯನ್ನು ಪ್ರಕಟಿಸಿದ್ದು, 180 ದೇಶಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ನಿರೀಕ್ಷೆಯಂತೆ ಈ ಬಾರಿಯೂ ಸಹ ಡೆನ್‌ಮಾರ್ಕ್‌ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಭಾರತ 39 ಅಂಕಗಳನ್ನು ಪಡೆದು 93ನೇ ಸ್ಥಾನದಲ್ಲಿದೆ. ಕಳೆದ ಬಾರಿಯ ಪಟ್ಟಿಯಲ್ಲಿ 40 ಅಂಕಗಳನ್ನು ಪಡೆದುಕೊಂಡಿದ್ದ ಭಾರತ 85ನೇ ಸ್ಥಾನದಲ್ಲಿತ್ತು.

ಡೆನ್‌ಮಾರ್ಕ್‌ ಸತತ ಆರನೇ ಬಾರಿಗೆ ಈ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದ್ದು ಕಡಿಮೆ ಭ್ರಷ್ಟಾಚಾರವಿರುವ ದೇಶವೆನಿಸಿಕೊಂಡರೆ, ಸೋಮಾಲಿಯಾ ದೇಶ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ. ಇನ್ನು ಅಂಕಗಳನ್ನು ನೀಡುವ ಮೂಲಕ ಈ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟಾರೆ ದೇಶಗಳ ಪಟ್ಟಿಯಲ್ಲಿ ಮೂರನೇ ಎರಡರಷ್ಟು ದೇಶಗಳು 50ಕ್ಕಿಂತ ಕಡಿಮೆ ಅಂಕಗಳನ್ನು ಪಡೆದುಕೊಂಡಿವೆ. ಫಿನ್‌ಲ್ಯಾಂಡ್‌ ಎರಡನೇ ಸ್ಥಾನ ಹಾಗೂ ನ್ಯೂಜಿಲೆಂಡ್‌ ಮೂರನೇ ಸ್ಥಾನಗಳನ್ನು ಪಡೆದುಕೊಂಡಿವೆ. 

ಏಷ್ಯಾ ದೇಶಗಳ ಸ್ಥಾನಗಳೇನು?

ಭಾರತ 39 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಈ ಪಟ್ಟಿಯಲ್ಲಿ 93ನೇ ಸ್ಥಾನದಲ್ಲಿದ್ದು, 42 ಅಂಕಗಳನ್ನು ಪಡೆದುಕೊಂಡಿರುವ ಚೀನಾ 76ನೇ ಸ್ಥಾನದಲ್ಲಿದೆ. 29 ಅಂಕಗಳನ್ನು ಪಡೆದುಕೊಂಡಿರುವ ಪಾಕಿಸ್ತಾನ 133ನೇ ಸ್ಥಾನವನ್ನು ಪಡೆದುಕೊಂಡಿದೆ. 20 ಅಂಕಗಳನ್ನು ಪಡೆದುಕೊಂಡಿರುವ ಅಪ್ಘಾನಿಸ್ತಾನ 162ನೇ ಸ್ಥಾನದಲ್ಲಿದೆ. ಚೀನಾದ ಅಂಕ ಕಳೆದ ಪಟ್ಟಿಗೆ ಹೋಲಿಸಿದರೆ ಮೂರರಷ್ಟು ಕಡಿಮೆಯಾಗಿದೆ.

andolana

Share
Published by
andolana

Recent Posts

ಡಿಕೆಶಿ ಸರ್ಕಾರಕ್ಕೆ ಶತದಿನಗಳ ಸಂಭ್ರಮ ; ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿದೆ ಮೈಸೂರು ಅರಮನೆ

ಮೈಸೂರು :  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…

8 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ ; ಜಿಲ್ಲಾಧಿಕಾರ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ

ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…

13 hours ago

ಹೊಸ ಪರಿಕಲ್ಪನೆಯೊಂದಿಗೆ ದೀಪಾಲಂಕಾರ ರೂಪಿಸಿ ; ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…

13 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ: ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…

17 hours ago

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ED ಶಾಕ್‌

ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…

18 hours ago

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

23 hours ago