ಇಸ್ಲಾಮಾಬಾದ್: ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ವಿಷ ಪ್ರಾಸನ ಮಾಡಿಸಲಾಗಿದ್ದು, ಗಂಭೀರ ಆರೋಗ್ಯ ಸಮಸ್ಯೆಗಳಿಂದಾಗಿ ಪಾಕಿಸ್ತಾನದ ಕರಾಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ವರದಿ ಬೆನ್ನಲ್ಲೇ, ಆತನ ಕುಟುಂಬದ ಸದಸ್ಯರು ವಿಷಪ್ರಾಶನ ವಿಚಾರವನ್ನು ಅಲ್ಲಗೆಳೆದಿದ್ದಾರೆ.
ದಾವೂದ್ ಆರೋಗ್ಯದ ಕುರಿತ ವಿಚಾರ ಹೊರಬೀಳುತ್ತಿದ್ದಂತೆಯೇ ಮುಂಬೈ ಪೊಲೀಸರು ನಗರದಲ್ಲಿನ ದಾವೂದ್ ಕುಟುಂಬ ಸದಸ್ಯರಿಂದ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ಮನೆಗೆ ತಂಡವನ್ನು ಕಳುಹಿಸಲಾಗಿದೆ. ಅಲ್ಲಿ ದಾವೂದ್ ಸೋದರಳಿಯ, ಆರೋಗ್ಯ ಸಮಸ್ಯೆಗಳಿಂದ ಚೆನ್ನಾಗಿಲ್ಲ, ಆದರೆ ವಿಷಪ್ರಾಸನವಾಗಿಲ್ಲ ಎಂದು ಪೊಲೀಸರಿಗೆ ಖಚಿತಪಡಿಸಿದ್ದಾರೆ.
ಭಾನುವಾರ ರಾತ್ರಿಯಿಂದ ದಾವೂದ್ ಆರೋಗ್ಯದ ಬಗ್ಗೆ ವರದಿಗಳು ಹೊರ ಬರುತ್ತಿವೆ. ಆದರೆ ಇದರ ಬಗ್ಗೆ ಭಾರತೀಯ ಅಧಿಕಾರಿಗಳಿಂದ ಯಾವುದೇ ದೃಢೀಕರಣವಿಲ್ಲ. ಜತೆಗೆ ಪಾಕಿಸ್ತಾನದಿಂದಲೂ ಮಾಹಿತಿ ಇಲ್ಲವಾಗಿದೆ. ವಿಷಪ್ರಾಶನದಿಂದಾಗಿ ದಾವೂದ್ ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಹೇಳಲಾಗಿದೆ. ಸದ್ಯ ದಾವೂದ್ ಪಾಕಿಸ್ತಾನದ ಕರಾಚಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಯ ಸುತ್ತಮುತ್ತ ಪಾಕ್ ಸೇನೆಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ದಾವೂದ್ ಆಸ್ಪತ್ರೆಗೆ ದಾಖಲಾಗಿರುವುದು ಸುದ್ದಿಯಾಗುತ್ತಿದ್ದಂತೆಯೇ ಕರಾಚಿ, ರಾವಲ್ಪಿಂಡಿ, ಲಾಹೋರ್ ಹಾಗೂ ಇಸ್ಲಾಮಾಬಾದ್ನಲ್ಲಿ ಇಂಟರ್ ನೆಟ್ ಸ್ಥಗಿತಗೊಳಿಸಲಾಗಿದೆ ಎಂಬುದಾಗಿ ವರದಿಯಾಗಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…