ಇಸ್ಲಾಮಾಬಾದ್: ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ವಿಷ ಪ್ರಾಸನ ಮಾಡಿಸಲಾಗಿದ್ದು, ಗಂಭೀರ ಆರೋಗ್ಯ ಸಮಸ್ಯೆಗಳಿಂದಾಗಿ ಪಾಕಿಸ್ತಾನದ ಕರಾಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ವರದಿ ಬೆನ್ನಲ್ಲೇ, ಆತನ ಕುಟುಂಬದ ಸದಸ್ಯರು ವಿಷಪ್ರಾಶನ ವಿಚಾರವನ್ನು ಅಲ್ಲಗೆಳೆದಿದ್ದಾರೆ.
ದಾವೂದ್ ಆರೋಗ್ಯದ ಕುರಿತ ವಿಚಾರ ಹೊರಬೀಳುತ್ತಿದ್ದಂತೆಯೇ ಮುಂಬೈ ಪೊಲೀಸರು ನಗರದಲ್ಲಿನ ದಾವೂದ್ ಕುಟುಂಬ ಸದಸ್ಯರಿಂದ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ಮನೆಗೆ ತಂಡವನ್ನು ಕಳುಹಿಸಲಾಗಿದೆ. ಅಲ್ಲಿ ದಾವೂದ್ ಸೋದರಳಿಯ, ಆರೋಗ್ಯ ಸಮಸ್ಯೆಗಳಿಂದ ಚೆನ್ನಾಗಿಲ್ಲ, ಆದರೆ ವಿಷಪ್ರಾಸನವಾಗಿಲ್ಲ ಎಂದು ಪೊಲೀಸರಿಗೆ ಖಚಿತಪಡಿಸಿದ್ದಾರೆ.
ಭಾನುವಾರ ರಾತ್ರಿಯಿಂದ ದಾವೂದ್ ಆರೋಗ್ಯದ ಬಗ್ಗೆ ವರದಿಗಳು ಹೊರ ಬರುತ್ತಿವೆ. ಆದರೆ ಇದರ ಬಗ್ಗೆ ಭಾರತೀಯ ಅಧಿಕಾರಿಗಳಿಂದ ಯಾವುದೇ ದೃಢೀಕರಣವಿಲ್ಲ. ಜತೆಗೆ ಪಾಕಿಸ್ತಾನದಿಂದಲೂ ಮಾಹಿತಿ ಇಲ್ಲವಾಗಿದೆ. ವಿಷಪ್ರಾಶನದಿಂದಾಗಿ ದಾವೂದ್ ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಹೇಳಲಾಗಿದೆ. ಸದ್ಯ ದಾವೂದ್ ಪಾಕಿಸ್ತಾನದ ಕರಾಚಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಯ ಸುತ್ತಮುತ್ತ ಪಾಕ್ ಸೇನೆಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ದಾವೂದ್ ಆಸ್ಪತ್ರೆಗೆ ದಾಖಲಾಗಿರುವುದು ಸುದ್ದಿಯಾಗುತ್ತಿದ್ದಂತೆಯೇ ಕರಾಚಿ, ರಾವಲ್ಪಿಂಡಿ, ಲಾಹೋರ್ ಹಾಗೂ ಇಸ್ಲಾಮಾಬಾದ್ನಲ್ಲಿ ಇಂಟರ್ ನೆಟ್ ಸ್ಥಗಿತಗೊಳಿಸಲಾಗಿದೆ ಎಂಬುದಾಗಿ ವರದಿಯಾಗಿದೆ.
ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…
ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…
ಗೋವಾ: ಇಲ್ಲಿನ ನೈಟ್ ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್…
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…