ಅಂತಾರಾಷ್ಟ್ರೀಯ

ದಾವೂದ್ ಇಬ್ರಾಹಿಂಗೆ ವಿಷಪ್ರಾಶನವಾಗಿಲ್ಲ: ದಾವೂದ್‌ ಕುಟುಂಬಸ್ಥರು

ಇಸ್ಲಾಮಾಬಾದ್: ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ವಿಷ ಪ್ರಾಸನ ಮಾಡಿಸಲಾಗಿದ್ದು, ಗಂಭೀರ ಆರೋಗ್ಯ ಸಮಸ್ಯೆಗಳಿಂದಾಗಿ ಪಾಕಿಸ್ತಾನದ ಕರಾಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ವರದಿ ಬೆನ್ನಲ್ಲೇ, ಆತನ ಕುಟುಂಬದ ಸದಸ್ಯರು ವಿಷಪ್ರಾಶನ ವಿಚಾರವನ್ನು ಅಲ್ಲಗೆಳೆದಿದ್ದಾರೆ.

ದಾವೂದ್ ಆರೋಗ್ಯದ ಕುರಿತ ವಿಚಾರ ಹೊರಬೀಳುತ್ತಿದ್ದಂತೆಯೇ ಮುಂಬೈ ಪೊಲೀಸರು ನಗರದಲ್ಲಿನ ದಾವೂದ್‌ ಕುಟುಂಬ ಸದಸ್ಯರಿಂದ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ಮನೆಗೆ ತಂಡವನ್ನು ಕಳುಹಿಸಲಾಗಿದೆ. ಅಲ್ಲಿ ದಾವೂದ್ ಸೋದರಳಿಯ, ಆರೋಗ್ಯ ಸಮಸ್ಯೆಗಳಿಂದ ಚೆನ್ನಾಗಿಲ್ಲ, ಆದರೆ ವಿಷಪ್ರಾಸನವಾಗಿಲ್ಲ ಎಂದು ಪೊಲೀಸರಿಗೆ ಖಚಿತಪಡಿಸಿದ್ದಾರೆ.

ಭಾನುವಾರ ರಾತ್ರಿಯಿಂದ ದಾವೂದ್‌ ಆರೋಗ್ಯದ ಬಗ್ಗೆ ವರದಿಗಳು ಹೊರ ಬರುತ್ತಿವೆ. ಆದರೆ ಇದರ ಬಗ್ಗೆ ಭಾರತೀಯ ಅಧಿಕಾರಿಗಳಿಂದ ಯಾವುದೇ ದೃಢೀಕರಣವಿಲ್ಲ. ಜತೆಗೆ ಪಾಕಿಸ್ತಾನದಿಂದಲೂ ಮಾಹಿತಿ ಇಲ್ಲವಾಗಿದೆ. ವಿಷಪ್ರಾಶನದಿಂದಾಗಿ ದಾವೂದ್ ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಹೇಳಲಾಗಿದೆ. ಸದ್ಯ ದಾವೂದ್ ಪಾಕಿಸ್ತಾನದ ಕರಾಚಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಯ ಸುತ್ತಮುತ್ತ ಪಾಕ್‌ ಸೇನೆಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ದಾವೂದ್ ಆಸ್ಪತ್ರೆಗೆ ದಾಖಲಾಗಿರುವುದು ಸುದ್ದಿಯಾಗುತ್ತಿದ್ದಂತೆಯೇ ಕರಾಚಿ, ರಾವಲ್ಪಿಂಡಿ, ಲಾಹೋರ್‌ ಹಾಗೂ ಇಸ್ಲಾಮಾಬಾದ್‍ನಲ್ಲಿ ಇಂಟರ್ ನೆಟ್ ಸ್ಥಗಿತಗೊಳಿಸಲಾಗಿದೆ ಎಂಬುದಾಗಿ ವರದಿಯಾಗಿದೆ.

andolanait

Share
Published by
andolanait

Recent Posts

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

15 mins ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

17 mins ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

18 mins ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

24 mins ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

3 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

3 hours ago