ಇಸ್ಲಾಮಾಬಾದ್: ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ವಿಷ ಪ್ರಾಸನ ಮಾಡಿಸಲಾಗಿದ್ದು, ಗಂಭೀರ ಆರೋಗ್ಯ ಸಮಸ್ಯೆಗಳಿಂದಾಗಿ ಪಾಕಿಸ್ತಾನದ ಕರಾಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ವರದಿ ಬೆನ್ನಲ್ಲೇ, ಆತನ ಕುಟುಂಬದ ಸದಸ್ಯರು ವಿಷಪ್ರಾಶನ ವಿಚಾರವನ್ನು ಅಲ್ಲಗೆಳೆದಿದ್ದಾರೆ.
ದಾವೂದ್ ಆರೋಗ್ಯದ ಕುರಿತ ವಿಚಾರ ಹೊರಬೀಳುತ್ತಿದ್ದಂತೆಯೇ ಮುಂಬೈ ಪೊಲೀಸರು ನಗರದಲ್ಲಿನ ದಾವೂದ್ ಕುಟುಂಬ ಸದಸ್ಯರಿಂದ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ಮನೆಗೆ ತಂಡವನ್ನು ಕಳುಹಿಸಲಾಗಿದೆ. ಅಲ್ಲಿ ದಾವೂದ್ ಸೋದರಳಿಯ, ಆರೋಗ್ಯ ಸಮಸ್ಯೆಗಳಿಂದ ಚೆನ್ನಾಗಿಲ್ಲ, ಆದರೆ ವಿಷಪ್ರಾಸನವಾಗಿಲ್ಲ ಎಂದು ಪೊಲೀಸರಿಗೆ ಖಚಿತಪಡಿಸಿದ್ದಾರೆ.
ಭಾನುವಾರ ರಾತ್ರಿಯಿಂದ ದಾವೂದ್ ಆರೋಗ್ಯದ ಬಗ್ಗೆ ವರದಿಗಳು ಹೊರ ಬರುತ್ತಿವೆ. ಆದರೆ ಇದರ ಬಗ್ಗೆ ಭಾರತೀಯ ಅಧಿಕಾರಿಗಳಿಂದ ಯಾವುದೇ ದೃಢೀಕರಣವಿಲ್ಲ. ಜತೆಗೆ ಪಾಕಿಸ್ತಾನದಿಂದಲೂ ಮಾಹಿತಿ ಇಲ್ಲವಾಗಿದೆ. ವಿಷಪ್ರಾಶನದಿಂದಾಗಿ ದಾವೂದ್ ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಹೇಳಲಾಗಿದೆ. ಸದ್ಯ ದಾವೂದ್ ಪಾಕಿಸ್ತಾನದ ಕರಾಚಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಯ ಸುತ್ತಮುತ್ತ ಪಾಕ್ ಸೇನೆಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ದಾವೂದ್ ಆಸ್ಪತ್ರೆಗೆ ದಾಖಲಾಗಿರುವುದು ಸುದ್ದಿಯಾಗುತ್ತಿದ್ದಂತೆಯೇ ಕರಾಚಿ, ರಾವಲ್ಪಿಂಡಿ, ಲಾಹೋರ್ ಹಾಗೂ ಇಸ್ಲಾಮಾಬಾದ್ನಲ್ಲಿ ಇಂಟರ್ ನೆಟ್ ಸ್ಥಗಿತಗೊಳಿಸಲಾಗಿದೆ ಎಂಬುದಾಗಿ ವರದಿಯಾಗಿದೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…