ನವದೆಹಲಿ : ವಿದೇಶಗಳಲ್ಲಿ ಭಾರತೀಯ ವಿದ್ಯಾರ್ಥಿಗಳು ನೈಸರ್ಗಿಕ ಕಾರಣಗಳು ಮತ್ತು ಅಪಘಾತ ಸೇರಿದಂತೆ ೨೦೧೮ ರಿಂದ ಇದುವರೆಗೆ ೪೦೩ ಜನ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಒಟ್ಟು ೩೪ ರಾಷ್ಟ್ರಗಳಲ್ಲಿ ಭಾರತೀಯ ವಿದಾರ್ಥಿಗಳ ಸಾವಾಗಿದ್ದು, ಅದರಲ್ಲೂ ಕೆನಡಾ ದೇಶದಲ್ಲಿ ಹೆಚ್ಚು ಸಾವುಗಳು ಸಂಭವಿಸಿದೆ.
೨೦೧೮ ರಿಂದ ಇಲ್ಲಿಯವರೆಗೆ ವಿದೇಶದಲ್ಲಿ ಭಾರತೀಯ ವಿದ್ಯಾರ್ಥಿಗಳು ೪೦೩ ಜನರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸಚಿವ ವಿ ಮುರಳೀಧರನ್ ಅವರು ರಾಜ್ಯ ಸಭೆಯಲ್ಲಿ ಡೇಟಾ ಮಂಡಿಸಿದರು. ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಭದ್ರತೆಯು ಭಾರತ ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸಿದ್ದಲ್ಲಿ ಸರಿಯಾದ ತನಿಖೆ ಮತತು ಶಿಕ್ಷೆಯನ್ನು ಖಚಿತಪಡಿಸಿಕೊಳ್ಳಲು ಅತಿಥೇಯ ದೇಶದ ಅಧಿಕಾರಿಗಳೊಂದಿಗೆ ತಕ್ಷಣವೇ ಮಾತನಾಡಲಾಗುವುದು.
ತುರ್ತು ವೈದ್ಯಕೀಯ ಆರೈಕೆ, ಬೋರ್ಡಿಂಗ್ ಮತ್ತು ಅಗತ್ಯ ವಸತಿ ಸೇವೆ ಒದಗಿಸಲು ಸಮಗ್ರ ಕಾನಸ್ಯಲರ್ ನೆರವು ನೀಡಲಾಗುತ್ತದೆ ಎಂದು ಅವರು ಹೇಳಿದರು.
ಈ ಮಾಹಿತಿಯ ಪ್ರಕಾರ ಕೆನಡಾದಲ್ಲಿ ಇದುವರೆಗೆ ಒಟ್ಟು ೯೧ ಭಾರತೀಯ ವಿದ್ಯಾರ್ಥಿಗಳು, ನಂತರದ ಸ್ಥಾನದಲ್ಲಿ ಯುನೈಟೆಡ್ ಕಿಂಗ್ಡಮ್ (ಯುಕೆ) ೪೮, ರಷ್ಯಾ ೪೦, ಯುನೈಟೆಡ್ ಸ್ಟೇಟ್ಸ್ ೩೬, ಆಸ್ಟ್ರೇಲಿಯಾ, ಉಕ್ರೇನ್ ೨೧, ಜರ್ಮನಿ ೨೦, ಸೈಪ್ರಸ್ ೧೪, ಇಟಲಿ ಮತ್ತು ಫಿಲಿಫೈನ್ಸ್ ದೇಶಗಳಲ್ಲಿ ತಲಾ ೧೦ ಮಂದಿ ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಪ್ರಶಾಂತ್ ಎನ್.ಮಲ್ಲಿಕ್ ಸ್ವಚ್ಛತಾ ರಾಯಭಾರಿಗಳ ಆಶಯ ; ‘ಸಾರ್ವಜನಿಕರ ಸಹಕಾರಕ್ಕೆ ಮನವಿ ಮಾಡಿದ ಹರಿಪ್ರಿಯಾ, ವಸಿಷ್ಠ ಸಿಂಹ, ಅನನ್ಯಾ ಭಟ್…
ಗಿರೀಶ್ ಹುಣಸೂರು ರೆಸಾರ್ಟ್ಗಳ ಮಾಲೀಕರ ಹಿತಾಸಕ್ತಿ ಕಾಪಾಡುವ ಹುನ್ನಾರ ಪ್ರವಾಸೋದ್ಯಮ ಅಭಿವೃದ್ಧಿ ಎಂಬುದು ನೆಪ ಇಂದು ಸಫಾರಿ ವಿರೋಧಿಸಿ ಪ್ರತಿಭಟನೆ …
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…