ನವದೆಹಲಿ : ವಿದೇಶಗಳಲ್ಲಿ ಭಾರತೀಯ ವಿದ್ಯಾರ್ಥಿಗಳು ನೈಸರ್ಗಿಕ ಕಾರಣಗಳು ಮತ್ತು ಅಪಘಾತ ಸೇರಿದಂತೆ ೨೦೧೮ ರಿಂದ ಇದುವರೆಗೆ ೪೦೩ ಜನ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಒಟ್ಟು ೩೪ ರಾಷ್ಟ್ರಗಳಲ್ಲಿ ಭಾರತೀಯ ವಿದಾರ್ಥಿಗಳ ಸಾವಾಗಿದ್ದು, ಅದರಲ್ಲೂ ಕೆನಡಾ ದೇಶದಲ್ಲಿ ಹೆಚ್ಚು ಸಾವುಗಳು ಸಂಭವಿಸಿದೆ.
೨೦೧೮ ರಿಂದ ಇಲ್ಲಿಯವರೆಗೆ ವಿದೇಶದಲ್ಲಿ ಭಾರತೀಯ ವಿದ್ಯಾರ್ಥಿಗಳು ೪೦೩ ಜನರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸಚಿವ ವಿ ಮುರಳೀಧರನ್ ಅವರು ರಾಜ್ಯ ಸಭೆಯಲ್ಲಿ ಡೇಟಾ ಮಂಡಿಸಿದರು. ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಭದ್ರತೆಯು ಭಾರತ ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸಿದ್ದಲ್ಲಿ ಸರಿಯಾದ ತನಿಖೆ ಮತತು ಶಿಕ್ಷೆಯನ್ನು ಖಚಿತಪಡಿಸಿಕೊಳ್ಳಲು ಅತಿಥೇಯ ದೇಶದ ಅಧಿಕಾರಿಗಳೊಂದಿಗೆ ತಕ್ಷಣವೇ ಮಾತನಾಡಲಾಗುವುದು.
ತುರ್ತು ವೈದ್ಯಕೀಯ ಆರೈಕೆ, ಬೋರ್ಡಿಂಗ್ ಮತ್ತು ಅಗತ್ಯ ವಸತಿ ಸೇವೆ ಒದಗಿಸಲು ಸಮಗ್ರ ಕಾನಸ್ಯಲರ್ ನೆರವು ನೀಡಲಾಗುತ್ತದೆ ಎಂದು ಅವರು ಹೇಳಿದರು.
ಈ ಮಾಹಿತಿಯ ಪ್ರಕಾರ ಕೆನಡಾದಲ್ಲಿ ಇದುವರೆಗೆ ಒಟ್ಟು ೯೧ ಭಾರತೀಯ ವಿದ್ಯಾರ್ಥಿಗಳು, ನಂತರದ ಸ್ಥಾನದಲ್ಲಿ ಯುನೈಟೆಡ್ ಕಿಂಗ್ಡಮ್ (ಯುಕೆ) ೪೮, ರಷ್ಯಾ ೪೦, ಯುನೈಟೆಡ್ ಸ್ಟೇಟ್ಸ್ ೩೬, ಆಸ್ಟ್ರೇಲಿಯಾ, ಉಕ್ರೇನ್ ೨೧, ಜರ್ಮನಿ ೨೦, ಸೈಪ್ರಸ್ ೧೪, ಇಟಲಿ ಮತ್ತು ಫಿಲಿಫೈನ್ಸ್ ದೇಶಗಳಲ್ಲಿ ತಲಾ ೧೦ ಮಂದಿ ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…
ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.…
ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…
ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…
ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…
ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.…