ನವದೆಹಲಿ : ವಿದೇಶಗಳಲ್ಲಿ ಭಾರತೀಯ ವಿದ್ಯಾರ್ಥಿಗಳು ನೈಸರ್ಗಿಕ ಕಾರಣಗಳು ಮತ್ತು ಅಪಘಾತ ಸೇರಿದಂತೆ ೨೦೧೮ ರಿಂದ ಇದುವರೆಗೆ ೪೦೩ ಜನ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಒಟ್ಟು ೩೪ ರಾಷ್ಟ್ರಗಳಲ್ಲಿ ಭಾರತೀಯ ವಿದಾರ್ಥಿಗಳ ಸಾವಾಗಿದ್ದು, ಅದರಲ್ಲೂ ಕೆನಡಾ ದೇಶದಲ್ಲಿ ಹೆಚ್ಚು ಸಾವುಗಳು ಸಂಭವಿಸಿದೆ.
೨೦೧೮ ರಿಂದ ಇಲ್ಲಿಯವರೆಗೆ ವಿದೇಶದಲ್ಲಿ ಭಾರತೀಯ ವಿದ್ಯಾರ್ಥಿಗಳು ೪೦೩ ಜನರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸಚಿವ ವಿ ಮುರಳೀಧರನ್ ಅವರು ರಾಜ್ಯ ಸಭೆಯಲ್ಲಿ ಡೇಟಾ ಮಂಡಿಸಿದರು. ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಭದ್ರತೆಯು ಭಾರತ ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸಿದ್ದಲ್ಲಿ ಸರಿಯಾದ ತನಿಖೆ ಮತತು ಶಿಕ್ಷೆಯನ್ನು ಖಚಿತಪಡಿಸಿಕೊಳ್ಳಲು ಅತಿಥೇಯ ದೇಶದ ಅಧಿಕಾರಿಗಳೊಂದಿಗೆ ತಕ್ಷಣವೇ ಮಾತನಾಡಲಾಗುವುದು.
ತುರ್ತು ವೈದ್ಯಕೀಯ ಆರೈಕೆ, ಬೋರ್ಡಿಂಗ್ ಮತ್ತು ಅಗತ್ಯ ವಸತಿ ಸೇವೆ ಒದಗಿಸಲು ಸಮಗ್ರ ಕಾನಸ್ಯಲರ್ ನೆರವು ನೀಡಲಾಗುತ್ತದೆ ಎಂದು ಅವರು ಹೇಳಿದರು.
ಈ ಮಾಹಿತಿಯ ಪ್ರಕಾರ ಕೆನಡಾದಲ್ಲಿ ಇದುವರೆಗೆ ಒಟ್ಟು ೯೧ ಭಾರತೀಯ ವಿದ್ಯಾರ್ಥಿಗಳು, ನಂತರದ ಸ್ಥಾನದಲ್ಲಿ ಯುನೈಟೆಡ್ ಕಿಂಗ್ಡಮ್ (ಯುಕೆ) ೪೮, ರಷ್ಯಾ ೪೦, ಯುನೈಟೆಡ್ ಸ್ಟೇಟ್ಸ್ ೩೬, ಆಸ್ಟ್ರೇಲಿಯಾ, ಉಕ್ರೇನ್ ೨೧, ಜರ್ಮನಿ ೨೦, ಸೈಪ್ರಸ್ ೧೪, ಇಟಲಿ ಮತ್ತು ಫಿಲಿಫೈನ್ಸ್ ದೇಶಗಳಲ್ಲಿ ತಲಾ ೧೦ ಮಂದಿ ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಬೆಂಗಳೂರು : ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ…
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…
ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಇಂದು ಬೆಳಿಗ್ಗೆ ಮಠಕ್ಕೆ…
ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಹಾಸನ: ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆಗೆ ಲಕ್ಷಾಂತರ ರೂ ಮೌಲ್ಯದ ಬಾಳೆ ಬೆಳೆ ನಾಶವಾಗಿದೆ. ಅರಕಲಗೂಡು ತಾಲ್ಲೂಕಿನ…