ನವದೆಹಲಿ : ವಿದೇಶಗಳಲ್ಲಿ ಭಾರತೀಯ ವಿದ್ಯಾರ್ಥಿಗಳು ನೈಸರ್ಗಿಕ ಕಾರಣಗಳು ಮತ್ತು ಅಪಘಾತ ಸೇರಿದಂತೆ ೨೦೧೮ ರಿಂದ ಇದುವರೆಗೆ ೪೦೩ ಜನ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಒಟ್ಟು ೩೪ ರಾಷ್ಟ್ರಗಳಲ್ಲಿ ಭಾರತೀಯ ವಿದಾರ್ಥಿಗಳ ಸಾವಾಗಿದ್ದು, ಅದರಲ್ಲೂ ಕೆನಡಾ ದೇಶದಲ್ಲಿ ಹೆಚ್ಚು ಸಾವುಗಳು ಸಂಭವಿಸಿದೆ.
೨೦೧೮ ರಿಂದ ಇಲ್ಲಿಯವರೆಗೆ ವಿದೇಶದಲ್ಲಿ ಭಾರತೀಯ ವಿದ್ಯಾರ್ಥಿಗಳು ೪೦೩ ಜನರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸಚಿವ ವಿ ಮುರಳೀಧರನ್ ಅವರು ರಾಜ್ಯ ಸಭೆಯಲ್ಲಿ ಡೇಟಾ ಮಂಡಿಸಿದರು. ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಭದ್ರತೆಯು ಭಾರತ ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸಿದ್ದಲ್ಲಿ ಸರಿಯಾದ ತನಿಖೆ ಮತತು ಶಿಕ್ಷೆಯನ್ನು ಖಚಿತಪಡಿಸಿಕೊಳ್ಳಲು ಅತಿಥೇಯ ದೇಶದ ಅಧಿಕಾರಿಗಳೊಂದಿಗೆ ತಕ್ಷಣವೇ ಮಾತನಾಡಲಾಗುವುದು.
ತುರ್ತು ವೈದ್ಯಕೀಯ ಆರೈಕೆ, ಬೋರ್ಡಿಂಗ್ ಮತ್ತು ಅಗತ್ಯ ವಸತಿ ಸೇವೆ ಒದಗಿಸಲು ಸಮಗ್ರ ಕಾನಸ್ಯಲರ್ ನೆರವು ನೀಡಲಾಗುತ್ತದೆ ಎಂದು ಅವರು ಹೇಳಿದರು.
ಈ ಮಾಹಿತಿಯ ಪ್ರಕಾರ ಕೆನಡಾದಲ್ಲಿ ಇದುವರೆಗೆ ಒಟ್ಟು ೯೧ ಭಾರತೀಯ ವಿದ್ಯಾರ್ಥಿಗಳು, ನಂತರದ ಸ್ಥಾನದಲ್ಲಿ ಯುನೈಟೆಡ್ ಕಿಂಗ್ಡಮ್ (ಯುಕೆ) ೪೮, ರಷ್ಯಾ ೪೦, ಯುನೈಟೆಡ್ ಸ್ಟೇಟ್ಸ್ ೩೬, ಆಸ್ಟ್ರೇಲಿಯಾ, ಉಕ್ರೇನ್ ೨೧, ಜರ್ಮನಿ ೨೦, ಸೈಪ್ರಸ್ ೧೪, ಇಟಲಿ ಮತ್ತು ಫಿಲಿಫೈನ್ಸ್ ದೇಶಗಳಲ್ಲಿ ತಲಾ ೧೦ ಮಂದಿ ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…