ಅಂತಾರಾಷ್ಟ್ರೀಯ

ಸೌದಿಯಿಂದ ಭಾರತಕ್ಕೆ ಬರುತ್ತಿದ ಹಡಗಿನ ಮೇಲೆ ಡ್ರೋನ್‌ ದಾಳಿ!

ನವದೆಹಲಿ: ಸೌದಿಯಿಂದ ಭಾರತಕ್ಕೆ ಬರುತ್ತಿದ್ದ ಹಡಗಿನ ಮೇಲೆ ಡ್ರೋನ್‌ ದಾಳಿ ನಡೆದಿದೆ. ಗುಜರಾತ್‌ ವೆರಾವಲ್‌ ಕರಾವಳಿಯಿಂದ ಸುಮಾರು 217 ನಾಟಿಕಲ್‌ ಮೈಲಿ ದೂರ ಅರಬ್ಬಿ ಸಮುದ್ರದಲ್ಲಿ ಇಸ್ರೆಲ್‌ ಸಂಯೋಜಿತ ವ್ಯಾಪಾರಿ ಹಡಗೊಂದರ ಮೇಲೇ ಅಪರಿಚಿತ ಡ್ರೋನ್‌ ದಾಳಿ ಶನಿವಾರ ನಡೆದಿರುವುದು ವರದಿಯಾಗಿದೆ.

ತೈಲ ಟ್ಯಾಂಕುಗಳನ್ನು ಹೊತ್ತು ಸೌದಿ ಅರೇಬಿಯಾದಿಂದ ಭಾರತಕ್ಕೆ ಬರುತ್ತಿದ್ದ ಲೈಬೀರಿಯನ್‌ ಹಡಗಿನ ಮೇಲೆ ದಾಳಿಯಾಗಿದ್ದು, ಹಡಗಿಗೆ ಭಾಗಶಃ ಹಾನಿಯಾಗಿದೆ. ಕೆಲವೆಡೆ ನೀರು ನುಗ್ಗಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ಈ ಘಟನೆಯ ಬಗ್ಗೆ ಇದುವರೆಗೆ ಭಾರತೀಯ ನೌಕಾದಳ ಯಾವುದೇ ತಕ್ಷಣದ ಪ್ರತಿಕ್ರಿಯೆ ನೀಡಲ್ಲ. ಹಾಗೇಯೇ ಡ್ರೋನ್‌ ದಾಳೀಯ ಹೊಣೆಯನ್ನು ಇವರೆಗೂ ಯಾರೂ ಹೊತ್ತುಕೊಂಡಿಲ್ಲ.

ಇಸ್ರೇಲ್‌, ಪ್ಯಾಲೆಸ್ಟೀನ್‌ ನಡುವೆ ಯುದ್ಧ ನಡೆಯುತ್ತಿರುವಾಗ ಇಸ್ರೇಲ್‌ ಹಡಗುಗಳ ಮೇಲೆ ಇರಾನ್‌ ಬೆಂಬಲಿರ ಹೌತಿ ಉಗ್ರರು ದಾಳಿ ಮಾಡಿದ್ದರು.

andolanait

Share
Published by
andolanait
Tags: drone attack

Recent Posts

ನಾಳೆ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

ತುಮಕೂರು: ನಾಳೆ(ಏಪ್ರಿಲ್.‌1ರಂದು) ತ್ರಿವಿಧ ದಾಸೋಹಿ, ಶತಾಯುಷಿ ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಈ…

24 mins ago

ಹಾಸನ: ಹೆತ್ತ ತಾಯಿ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ ಮಗ: ಕಾರಣ ಇಷ್ಟೇ

ಹಾಸನ: 40 ವರ್ಷವಾದರೂ ತನಗೆ ಮದುವೆ ಮಾಡಿಸಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ…

35 mins ago

ಮಳೆಗಾಲ ಸಮೀಪಿಸುತ್ತಿದ್ದಂತೆ ಎಚ್ಚೆತ್ತ ಅರಮನೆ ಆಡಳಿತ ಮಂಡಳಿ: ಕೋಟೆ ದುರಸ್ತಿ ಕಾರ್ಯ ಪ್ರಗತಿಯಲ್ಲಿ

ಮೈಸೂರು: ಮಳೆಗಾಲ ಸಮೀಪಿಸುತ್ತಿದ್ದಂತೆ ಮೈಸೂರು ಅರಮನೆ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದ್ದು, ಅರಮನೆ ಸುತ್ತ ಇರುವ ಕೋಟೆಯ ದುರಸ್ತಿಯನ್ನು ಕಾರ್ಯ ಕೈಗೊಂಡಿದೆ.…

1 hour ago

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಸಮ್ಮತಿ: ಮಿತ್ರ ರಾಷ್ಟ್ರಗಳಿಗಷ್ಟೇ ಅನ್ವಯ

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯಲ್ಲಿ ಸುಂಕ ಸಂಗ್ರಹಿಸುವ ಹೊಸ ಯೋಜನೆಗೆ ಇರಾನ್‌ ಸಂಸತ್ತಿನ ಭದ್ರತಾ ಸಮಿತಿಯು ಅನುಮೋದನೆ ನೀಡಿದೆ. ಈ ಯೋಜನೆಯು…

2 hours ago

ಸಿಎಂ ಸ್ಥಾನಕ್ಕಾಗಿ ಡಿ.ಕೆ.ಶಿವಕುಮಾರ್‌ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ: ಆರ್.‌ಅಶೋಕ್‌

ಚಿತ್ರದುರ್ಗ: ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

2 hours ago

ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು…

2 hours ago