ಸಿರಿಯಾ : ಇಲ್ಲಿನ ಸೇನಾ ಅಕಾಡೆಮಿ ಮೇಲೆ ಗುರುವಾರ ಭೀಕರ ಡ್ರೋಣ್ ದಾಳಿ ನಡೆದಿದ್ದು, ಕನಿಷ್ಠ 100 ಮಂದಿ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಸರ್ಕಾರಿ ಸ್ವಾಮ್ಯದ ಮನೆಗಳ ಮೇಲೆ ನಡೆದ ಈ ಭೀಕರ ದಾಳಿಯ ಹಿಂದೆ ಉಗ್ರ ಸಂಘಟನೆಗಳ ಕೈವಾಡ ಇದೆ ಎಂದು ಸರ್ಕಾರಿ ಮಾಧ್ಯಮಗಳು ಅಭಿಪ್ರಾಯಪಟ್ಟಿವೆ.
ಪ್ರತ್ಯೇಕ ಘಟನೆಯಲ್ಲಿ ಟರ್ಕಿ ಯುದ್ಧಪೀಡಿತ ದೇಶದ ಖುರ್ದಿಶ್ ವಶದಲ್ಲಿರುವ ಈಶಾನ್ಯ ಭಾಗದಲ್ಲಿ ನಡೆಸಿದ ವಾಯು ದಾಳಿಯಲ್ಲಿ ಕನಿಷ್ಠ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಬಾಂಬ್ ದಾಳಿಗೆ ಪ್ರತೀಕಾರವಾಗಿ ದಾಳಿ ನಡೆಸುವುದಾಗಿ ಅಂಕಾರಾ ಈ ಮುನ್ನ ಎಚ್ಚರಿಕೆ ನೀಡಿತ್ತು.
ಸಿರಿಯನ್ ಸಿಟಿ ಆಫ್ ಹೋಮ್ಸ್ನಲ್ಲಿ ಸಶಸ್ತ್ರ ಉಗ್ರಗಾಮಿ ಸಂಘಟನೆಗಳು, ಸೇನಾ ಅಕಾಡೆಮಿಯ ಅಧಿಕಾರಿಗಳ ಘಟಿಕೋತ್ಸವ ಸಮಾರಂಭದ ವೇಳೆ ಈ ದಾಳಿ ನಡೆಸಿದೆ ಎಂದು ಅಧಿಕೃತ ಸುದ್ದಿಸಂಸ್ಥೆ ಸನಾ ವರದಿ ಮಾಡಿದೆ.
ಬ್ರಿಟನ್ ಮೂಲದ ನಿಗಾ ಸಂಸ್ಥೆಯಾದ ಸಿರಿಯನ್ ಅಬ್ಸರ್ವೇಟರಿ ಫಾರ್ ಹ್ಯೂಮನ್ ರೈಟ್ಸ್ ಪ್ರಕಾರ, 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಈ ಪೈಕಿ ಅರ್ಧದಷ್ಟು ಮಂದಿ ಮಿಲಿಟರಿ ಪದವಿ ಪಡೆದವರು. 14 ಮಂದಿ ನಾಗರಿಕರೂ ದಾಳಿಯಲ್ಲಿ ಬಲಿಯಾಗಿದ್ದರೆ. ಈ ಘಟನೆಯಲ್ಲಿ ಕನಿಷ್ಠ 125 ಮಂದಿ ಗಾಯಗೊಂಡಿದ್ದಾರೆ ಎಂದು ಸಂಘಟನೆ ವಿವರ ನೀಡಿದೆ.
ಪ್ರಾಥಮಿಕ ಮಾಹಿತಿಯಂತೆ ಆರು ಮಂದಿ ಮಹಿಳೆಯರು ಮತ್ತು ಆರು ಮಕ್ಕಳು ಸೇರಿದಂತೆ 80 ಮಂದಿ ಮೃತಪಟ್ಟಿದ್ದಾರೆ. 240 ಮಂದಿ ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವ ಹಸನ್ ಅಲ್ ಘೋಬಶ್ ಹೇಳಿದ್ದಾರೆ.
ಯಾವುದೇ ಸಂಘಟನೆ ಈ ಘಟನೆಯ ಹೊಣೆ ಹೊತ್ತಿಲ್ಲ. ಡ್ರೋಣ್ಗಳ ಮೂಲಕ ಸ್ಫೋಟಕಗಳನ್ನು ತಂದು ದಾಳಿ ನಡೆಸಲಾಗಿದೆ. ಇದಕ್ಕೆ ಸಂಪೂರ್ಣ ಬಲದೊಂದಿಗೆ ಪ್ರತಿಕ್ರಿಯಿಸಲಾಗುತ್ತಿದೆ ಎಂದು ಸೇನೆ ಹೇಳಿಕೆ ನೀಡಿದೆ.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ…