ಸಿರಿಯಾ : ಇಲ್ಲಿನ ಸೇನಾ ಅಕಾಡೆಮಿ ಮೇಲೆ ಗುರುವಾರ ಭೀಕರ ಡ್ರೋಣ್ ದಾಳಿ ನಡೆದಿದ್ದು, ಕನಿಷ್ಠ 100 ಮಂದಿ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಸರ್ಕಾರಿ ಸ್ವಾಮ್ಯದ ಮನೆಗಳ ಮೇಲೆ ನಡೆದ ಈ ಭೀಕರ ದಾಳಿಯ ಹಿಂದೆ ಉಗ್ರ ಸಂಘಟನೆಗಳ ಕೈವಾಡ ಇದೆ ಎಂದು ಸರ್ಕಾರಿ ಮಾಧ್ಯಮಗಳು ಅಭಿಪ್ರಾಯಪಟ್ಟಿವೆ.
ಪ್ರತ್ಯೇಕ ಘಟನೆಯಲ್ಲಿ ಟರ್ಕಿ ಯುದ್ಧಪೀಡಿತ ದೇಶದ ಖುರ್ದಿಶ್ ವಶದಲ್ಲಿರುವ ಈಶಾನ್ಯ ಭಾಗದಲ್ಲಿ ನಡೆಸಿದ ವಾಯು ದಾಳಿಯಲ್ಲಿ ಕನಿಷ್ಠ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಬಾಂಬ್ ದಾಳಿಗೆ ಪ್ರತೀಕಾರವಾಗಿ ದಾಳಿ ನಡೆಸುವುದಾಗಿ ಅಂಕಾರಾ ಈ ಮುನ್ನ ಎಚ್ಚರಿಕೆ ನೀಡಿತ್ತು.
ಸಿರಿಯನ್ ಸಿಟಿ ಆಫ್ ಹೋಮ್ಸ್ನಲ್ಲಿ ಸಶಸ್ತ್ರ ಉಗ್ರಗಾಮಿ ಸಂಘಟನೆಗಳು, ಸೇನಾ ಅಕಾಡೆಮಿಯ ಅಧಿಕಾರಿಗಳ ಘಟಿಕೋತ್ಸವ ಸಮಾರಂಭದ ವೇಳೆ ಈ ದಾಳಿ ನಡೆಸಿದೆ ಎಂದು ಅಧಿಕೃತ ಸುದ್ದಿಸಂಸ್ಥೆ ಸನಾ ವರದಿ ಮಾಡಿದೆ.
ಬ್ರಿಟನ್ ಮೂಲದ ನಿಗಾ ಸಂಸ್ಥೆಯಾದ ಸಿರಿಯನ್ ಅಬ್ಸರ್ವೇಟರಿ ಫಾರ್ ಹ್ಯೂಮನ್ ರೈಟ್ಸ್ ಪ್ರಕಾರ, 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಈ ಪೈಕಿ ಅರ್ಧದಷ್ಟು ಮಂದಿ ಮಿಲಿಟರಿ ಪದವಿ ಪಡೆದವರು. 14 ಮಂದಿ ನಾಗರಿಕರೂ ದಾಳಿಯಲ್ಲಿ ಬಲಿಯಾಗಿದ್ದರೆ. ಈ ಘಟನೆಯಲ್ಲಿ ಕನಿಷ್ಠ 125 ಮಂದಿ ಗಾಯಗೊಂಡಿದ್ದಾರೆ ಎಂದು ಸಂಘಟನೆ ವಿವರ ನೀಡಿದೆ.
ಪ್ರಾಥಮಿಕ ಮಾಹಿತಿಯಂತೆ ಆರು ಮಂದಿ ಮಹಿಳೆಯರು ಮತ್ತು ಆರು ಮಕ್ಕಳು ಸೇರಿದಂತೆ 80 ಮಂದಿ ಮೃತಪಟ್ಟಿದ್ದಾರೆ. 240 ಮಂದಿ ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವ ಹಸನ್ ಅಲ್ ಘೋಬಶ್ ಹೇಳಿದ್ದಾರೆ.
ಯಾವುದೇ ಸಂಘಟನೆ ಈ ಘಟನೆಯ ಹೊಣೆ ಹೊತ್ತಿಲ್ಲ. ಡ್ರೋಣ್ಗಳ ಮೂಲಕ ಸ್ಫೋಟಕಗಳನ್ನು ತಂದು ದಾಳಿ ನಡೆಸಲಾಗಿದೆ. ಇದಕ್ಕೆ ಸಂಪೂರ್ಣ ಬಲದೊಂದಿಗೆ ಪ್ರತಿಕ್ರಿಯಿಸಲಾಗುತ್ತಿದೆ ಎಂದು ಸೇನೆ ಹೇಳಿಕೆ ನೀಡಿದೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…