ಅಂತಾರಾಷ್ಟ್ರೀಯ

ಸಿರಿಯಾ ಸೇನಾ ಅಕಾಡೆಮಿ ಮೇಲೆ ಡ್ರೋನ್ ದಾಳಿ: ಕನಿಷ್ಠ 100 ಮಂದಿ ಮೃತ್ಯು

ಸಿರಿಯಾ : ಇಲ್ಲಿನ ಸೇನಾ ಅಕಾಡೆಮಿ ಮೇಲೆ ಗುರುವಾರ ಭೀಕರ ಡ್ರೋಣ್ ದಾಳಿ ನಡೆದಿದ್ದು, ಕನಿಷ್ಠ 100 ಮಂದಿ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಸರ್ಕಾರಿ ಸ್ವಾಮ್ಯದ ಮನೆಗಳ ಮೇಲೆ ನಡೆದ ಈ ಭೀಕರ ದಾಳಿಯ ಹಿಂದೆ ಉಗ್ರ ಸಂಘಟನೆಗಳ ಕೈವಾಡ ಇದೆ ಎಂದು ಸರ್ಕಾರಿ ಮಾಧ್ಯಮಗಳು ಅಭಿಪ್ರಾಯಪಟ್ಟಿವೆ.

ಪ್ರತ್ಯೇಕ ಘಟನೆಯಲ್ಲಿ ಟರ್ಕಿ ಯುದ್ಧಪೀಡಿತ ದೇಶದ ಖುರ್ದಿಶ್ ವಶದಲ್ಲಿರುವ ಈಶಾನ್ಯ ಭಾಗದಲ್ಲಿ ನಡೆಸಿದ ವಾಯು ದಾಳಿಯಲ್ಲಿ ಕನಿಷ್ಠ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಬಾಂಬ್ ದಾಳಿಗೆ ಪ್ರತೀಕಾರವಾಗಿ ದಾಳಿ ನಡೆಸುವುದಾಗಿ ಅಂಕಾರಾ ಈ ಮುನ್ನ ಎಚ್ಚರಿಕೆ ನೀಡಿತ್ತು.

ಸಿರಿಯನ್ ಸಿಟಿ ಆಫ್ ಹೋಮ್ಸ್‌ನಲ್ಲಿ ಸಶಸ್ತ್ರ ಉಗ್ರಗಾಮಿ ಸಂಘಟನೆಗಳು, ಸೇನಾ ಅಕಾಡೆಮಿಯ ಅಧಿಕಾರಿಗಳ ಘಟಿಕೋತ್ಸವ ಸಮಾರಂಭದ ವೇಳೆ ಈ ದಾಳಿ ನಡೆಸಿದೆ ಎಂದು ಅಧಿಕೃತ ಸುದ್ದಿಸಂಸ್ಥೆ ಸನಾ ವರದಿ ಮಾಡಿದೆ.

ಬ್ರಿಟನ್ ಮೂಲದ ನಿಗಾ ಸಂಸ್ಥೆಯಾದ ಸಿರಿಯನ್ ಅಬ್ಸರ್ವೇಟರಿ ಫಾರ್ ಹ್ಯೂಮನ್ ರೈಟ್ಸ್ ಪ್ರಕಾರ, 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಈ ಪೈಕಿ ಅರ್ಧದಷ್ಟು ಮಂದಿ ಮಿಲಿಟರಿ ಪದವಿ ಪಡೆದವರು. 14 ಮಂದಿ ನಾಗರಿಕರೂ ದಾಳಿಯಲ್ಲಿ ಬಲಿಯಾಗಿದ್ದರೆ. ಈ ಘಟನೆಯಲ್ಲಿ ಕನಿಷ್ಠ 125 ಮಂದಿ ಗಾಯಗೊಂಡಿದ್ದಾರೆ ಎಂದು ಸಂಘಟನೆ ವಿವರ ನೀಡಿದೆ.

ಪ್ರಾಥಮಿಕ ಮಾಹಿತಿಯಂತೆ ಆರು ಮಂದಿ ಮಹಿಳೆಯರು ಮತ್ತು ಆರು ಮಕ್ಕಳು ಸೇರಿದಂತೆ 80 ಮಂದಿ ಮೃತಪಟ್ಟಿದ್ದಾರೆ. 240 ಮಂದಿ ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವ ಹಸನ್ ಅಲ್ ಘೋಬಶ್ ಹೇಳಿದ್ದಾರೆ.

ಯಾವುದೇ ಸಂಘಟನೆ ಈ ಘಟನೆಯ ಹೊಣೆ ಹೊತ್ತಿಲ್ಲ. ಡ್ರೋಣ್‌ಗಳ ಮೂಲಕ ಸ್ಫೋಟಕಗಳನ್ನು ತಂದು ದಾಳಿ ನಡೆಸಲಾಗಿದೆ. ಇದಕ್ಕೆ ಸಂಪೂರ್ಣ ಬಲದೊಂದಿಗೆ ಪ್ರತಿಕ್ರಿಯಿಸಲಾಗುತ್ತಿದೆ ಎಂದು ಸೇನೆ ಹೇಳಿಕೆ ನೀಡಿದೆ.

andolanait

Share
Published by
andolanait

Recent Posts

ಡಿಕೆಶಿ ಸರ್ಕಾರಕ್ಕೆ ಶತದಿನಗಳ ಸಂಭ್ರಮ ; ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿದೆ ಮೈಸೂರು ಅರಮನೆ

ಮೈಸೂರು :  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…

9 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ ; ಜಿಲ್ಲಾಧಿಕಾರ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ

ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…

14 hours ago

ಹೊಸ ಪರಿಕಲ್ಪನೆಯೊಂದಿಗೆ ದೀಪಾಲಂಕಾರ ರೂಪಿಸಿ ; ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…

14 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ: ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…

18 hours ago

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ED ಶಾಕ್‌

ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…

19 hours ago

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

23 hours ago