ಸಿರಿಯಾ : ಇಲ್ಲಿನ ಸೇನಾ ಅಕಾಡೆಮಿ ಮೇಲೆ ಗುರುವಾರ ಭೀಕರ ಡ್ರೋಣ್ ದಾಳಿ ನಡೆದಿದ್ದು, ಕನಿಷ್ಠ 100 ಮಂದಿ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಸರ್ಕಾರಿ ಸ್ವಾಮ್ಯದ ಮನೆಗಳ ಮೇಲೆ ನಡೆದ ಈ ಭೀಕರ ದಾಳಿಯ ಹಿಂದೆ ಉಗ್ರ ಸಂಘಟನೆಗಳ ಕೈವಾಡ ಇದೆ ಎಂದು ಸರ್ಕಾರಿ ಮಾಧ್ಯಮಗಳು ಅಭಿಪ್ರಾಯಪಟ್ಟಿವೆ.
ಪ್ರತ್ಯೇಕ ಘಟನೆಯಲ್ಲಿ ಟರ್ಕಿ ಯುದ್ಧಪೀಡಿತ ದೇಶದ ಖುರ್ದಿಶ್ ವಶದಲ್ಲಿರುವ ಈಶಾನ್ಯ ಭಾಗದಲ್ಲಿ ನಡೆಸಿದ ವಾಯು ದಾಳಿಯಲ್ಲಿ ಕನಿಷ್ಠ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಬಾಂಬ್ ದಾಳಿಗೆ ಪ್ರತೀಕಾರವಾಗಿ ದಾಳಿ ನಡೆಸುವುದಾಗಿ ಅಂಕಾರಾ ಈ ಮುನ್ನ ಎಚ್ಚರಿಕೆ ನೀಡಿತ್ತು.
ಸಿರಿಯನ್ ಸಿಟಿ ಆಫ್ ಹೋಮ್ಸ್ನಲ್ಲಿ ಸಶಸ್ತ್ರ ಉಗ್ರಗಾಮಿ ಸಂಘಟನೆಗಳು, ಸೇನಾ ಅಕಾಡೆಮಿಯ ಅಧಿಕಾರಿಗಳ ಘಟಿಕೋತ್ಸವ ಸಮಾರಂಭದ ವೇಳೆ ಈ ದಾಳಿ ನಡೆಸಿದೆ ಎಂದು ಅಧಿಕೃತ ಸುದ್ದಿಸಂಸ್ಥೆ ಸನಾ ವರದಿ ಮಾಡಿದೆ.
ಬ್ರಿಟನ್ ಮೂಲದ ನಿಗಾ ಸಂಸ್ಥೆಯಾದ ಸಿರಿಯನ್ ಅಬ್ಸರ್ವೇಟರಿ ಫಾರ್ ಹ್ಯೂಮನ್ ರೈಟ್ಸ್ ಪ್ರಕಾರ, 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಈ ಪೈಕಿ ಅರ್ಧದಷ್ಟು ಮಂದಿ ಮಿಲಿಟರಿ ಪದವಿ ಪಡೆದವರು. 14 ಮಂದಿ ನಾಗರಿಕರೂ ದಾಳಿಯಲ್ಲಿ ಬಲಿಯಾಗಿದ್ದರೆ. ಈ ಘಟನೆಯಲ್ಲಿ ಕನಿಷ್ಠ 125 ಮಂದಿ ಗಾಯಗೊಂಡಿದ್ದಾರೆ ಎಂದು ಸಂಘಟನೆ ವಿವರ ನೀಡಿದೆ.
ಪ್ರಾಥಮಿಕ ಮಾಹಿತಿಯಂತೆ ಆರು ಮಂದಿ ಮಹಿಳೆಯರು ಮತ್ತು ಆರು ಮಕ್ಕಳು ಸೇರಿದಂತೆ 80 ಮಂದಿ ಮೃತಪಟ್ಟಿದ್ದಾರೆ. 240 ಮಂದಿ ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವ ಹಸನ್ ಅಲ್ ಘೋಬಶ್ ಹೇಳಿದ್ದಾರೆ.
ಯಾವುದೇ ಸಂಘಟನೆ ಈ ಘಟನೆಯ ಹೊಣೆ ಹೊತ್ತಿಲ್ಲ. ಡ್ರೋಣ್ಗಳ ಮೂಲಕ ಸ್ಫೋಟಕಗಳನ್ನು ತಂದು ದಾಳಿ ನಡೆಸಲಾಗಿದೆ. ಇದಕ್ಕೆ ಸಂಪೂರ್ಣ ಬಲದೊಂದಿಗೆ ಪ್ರತಿಕ್ರಿಯಿಸಲಾಗುತ್ತಿದೆ ಎಂದು ಸೇನೆ ಹೇಳಿಕೆ ನೀಡಿದೆ.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…