ಅಫ್ಘಾನಿಸ್ತಾನ : ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಶನಿವಾರ ಸಂಭವಿಸಿದ ಭೂಕಂಪದಲ್ಲಿ ಇಲ್ಲಿಯವರೆಗೆ 4 ಸಾವಿರ ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 6.2 ತೀವ್ರತೆಯ ಎರಡು ಭೂಕಂಪಗಳಲ್ಲಿ ಸುಮಾರು 2,000 ಮನೆಗಳು ನೆಲಸಮವಾಗಿದೆ ಎಂದು ಅಫ್ಘಾನಿಸ್ತಾನ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಅಂಕಿಅಂಶಗಳ ಪ್ರಕಾರ ಇಲ್ಲಿಯವರೆಗೆ ಸಾವು -ನೋವಿನ ಸಂಖ್ಯೆ 4 ಸಾವಿರಕ್ಕೆ ಏರಿಕೆಯಾಗಿದೆ ಎಂದು ಎಎನ್ಡಿಎಮ್ಎ ಹೇಳಿದೆ.
ಸೋಮವಾರ ನೀಡಿದ ವರದಿಗಳ ಪ್ರಕಾರ 2,400 ಜನ ಸಾವನ್ನಪ್ಪಿದರು ಎಂದು ಹೇಳಲಾಗಿತ್ತು. ಹೆರಾತ್ನ ಜಿಂದಾ ಜನ್ ಜಿಲ್ಲೆಯ 13 ಹಳ್ಳಿಗಳಲ್ಲಿ ವಾಸಿಸುತ್ತಿದ್ದವರು ಹೆಚ್ಚಿನ ಮಂದಿ ಭೂಕಂಪಕ್ಕೆ ಬಲಿಯಾಗಿದ್ದಾರೆ. 1,320 ಮನೆಗಳು ನಾಶವಾಗಿವೆ ಎಂದು ವರದಿ ಹೇಳಿತ್ತು. ಇನ್ನು ಎಎನ್-ಡಿಎಂಎ ಹೇಳಿರುವ ಪ್ರಕಾರ ದಿನದಿಂದ ದಿನಕ್ಕೆ ಭೂಕಂಪದಿಂದ ಸಾವನ್ನಪ್ಪಿರುವವ ಸಂಖ್ಯೆ ಹೆಚ್ಚುತ್ತಿದೆ ಎಂದು ಹೇಳಲಾಗಿದೆ.
ಗಾಯಗೊಂಡವರನ್ನು ಆಸ್ಪತ್ರೆಗಳಿಗೆ ಸಾಗಿಸಲಾಗಿದ್ದು. ಇದಕ್ಕೆ 12 ಆಂಬ್ಯುಲೆನ್ಸ್ಗಳನ್ನು ಕಳುಹಿಸಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿತ್ತು. ಅಫ್ಘಾನಿಸ್ತಾನದ ಹಂಗಾಮಿ ಪ್ರಧಾನಿ ಮೊಹಮ್ಮದ್ ಹಸನ್ ಅಖುಂಡ್ ಅವರು ಸೋಮವಾರ ಹೆರಾತ್ ಪ್ರಾಂತ್ಯದ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲು ಅಧಿಕಾರಿಗಳಿಗೆ ಹೇಳಿದ್ದರು. ಇನ್ನು ಚೀನಾ ಭಾನುವಾರ ಅಫ್ಘಾನ್ ರೆಡ್ ಕ್ರೆಸೆಂಟ್ಗೆ 200,000 ಯುಎಸ್ (1,66,49,480.00) ಡಾಲರ್ಗಳನ್ನು ತುರ್ತು ಮಾನವೀಯ ನರೆವು ನೀಡಿದೆ.
ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್ಗೆ ಮತ್ತೊಂದು ವಿಮಾನ ಸಂಚಾರ ಅತಿ…
ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…
ಟೆಹ್ರಾರ್ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…
ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…
ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…
ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…