ಅಂತಾರಾಷ್ಟ್ರೀಯ

ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಭೂಕಂಪ : ನಾಲ್ವರ ಸಾವು

ಅಫ್ಘಾನಿಸ್ತಾನ : ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಶನಿವಾರ ಸಂಭವಿಸಿದ ಭೂಕಂಪದಲ್ಲಿ ಇಲ್ಲಿಯವರೆಗೆ 4 ಸಾವಿರ ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 6.2 ತೀವ್ರತೆಯ ಎರಡು ಭೂಕಂಪಗಳಲ್ಲಿ ಸುಮಾರು 2,000 ಮನೆಗಳು ನೆಲಸಮವಾಗಿದೆ ಎಂದು ಅಫ್ಘಾನಿಸ್ತಾನ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಅಂಕಿಅಂಶಗಳ ಪ್ರಕಾರ ಇಲ್ಲಿಯವರೆಗೆ ಸಾವು -ನೋವಿನ ಸಂಖ್ಯೆ 4 ಸಾವಿರಕ್ಕೆ ಏರಿಕೆಯಾಗಿದೆ ಎಂದು ಎಎನ್​​​ಡಿಎಮ್​​​ಎ ಹೇಳಿದೆ.

ಸೋಮವಾರ ನೀಡಿದ ವರದಿಗಳ ಪ್ರಕಾರ 2,400 ಜನ ಸಾವನ್ನಪ್ಪಿದರು ಎಂದು ಹೇಳಲಾಗಿತ್ತು. ಹೆರಾತ್‌ನ ಜಿಂದಾ ಜನ್ ಜಿಲ್ಲೆಯ 13 ಹಳ್ಳಿಗಳಲ್ಲಿ ವಾಸಿಸುತ್ತಿದ್ದವರು ಹೆಚ್ಚಿನ ಮಂದಿ ಭೂಕಂಪಕ್ಕೆ ಬಲಿಯಾಗಿದ್ದಾರೆ. 1,320 ಮನೆಗಳು ನಾಶವಾಗಿವೆ ಎಂದು ವರದಿ ಹೇಳಿತ್ತು. ಇನ್ನು ಎಎನ್-ಡಿಎಂಎ ಹೇಳಿರುವ ಪ್ರಕಾರ ದಿನದಿಂದ ದಿನಕ್ಕೆ ಭೂಕಂಪದಿಂದ ಸಾವನ್ನಪ್ಪಿರುವವ ಸಂಖ್ಯೆ ಹೆಚ್ಚುತ್ತಿದೆ ಎಂದು ಹೇಳಲಾಗಿದೆ.

ಗಾಯಗೊಂಡವರನ್ನು ಆಸ್ಪತ್ರೆಗಳಿಗೆ ಸಾಗಿಸಲಾಗಿದ್ದು. ಇದಕ್ಕೆ 12 ಆಂಬ್ಯುಲೆನ್ಸ್‌ಗಳನ್ನು ಕಳುಹಿಸಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿತ್ತು. ಅಫ್ಘಾನಿಸ್ತಾನದ ಹಂಗಾಮಿ ಪ್ರಧಾನಿ ಮೊಹಮ್ಮದ್ ಹಸನ್ ಅಖುಂಡ್ ಅವರು ಸೋಮವಾರ ಹೆರಾತ್ ಪ್ರಾಂತ್ಯದ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲು ಅಧಿಕಾರಿಗಳಿಗೆ ಹೇಳಿದ್ದರು. ಇನ್ನು ಚೀನಾ ಭಾನುವಾರ ಅಫ್ಘಾನ್ ರೆಡ್ ಕ್ರೆಸೆಂಟ್‌ಗೆ 200,000 ಯುಎಸ್ (1,66,49,480.00) ಡಾಲರ್‌ಗಳನ್ನು ತುರ್ತು ಮಾನವೀಯ ನರೆವು ನೀಡಿದೆ.

 

lokesh

Share
Published by
lokesh

Recent Posts

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

19 mins ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

1 hour ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

1 hour ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

5 hours ago

ಓದುಗರ ಪತ್ರ: ಮಾದಾಪುರ ಪ್ರೌಢಶಾಲೆಗೆ ಇಂಗ್ಲಿಷ್ ಶಿಕ್ಷಕರನ್ನು ನೇಮಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರು ಇಲ್ಲದೆ ವಿದ್ಯಾರ್ಥಿಗಳು ಈ ಪ್ರೌಢಶಾಲೆಗೆ ಸೇರಲು ಹಿಂದೇಟು ಹಾಕುತ್ತಿದ್ದಾರೆ.…

10 hours ago

ಓದುಗರ ಪತ್ರ: ದೇವೇಗೌಡರ ಹಿಂದಿನ ಶಕ್ತಿ ಚನ್ನಮ್ಮ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚನ್ನಮ್ಮ ನವರು ಅವರ ರಾಜಕೀಯ ಜೀವನದಲ್ಲಿ ದೊಡ್ಡ ಶಕ್ತಿಯಾಗಿ ನಿಂತಿದ್ದರು. ಅಂದು ತಮ್ಮ…

10 hours ago