ಅಂತಾರಾಷ್ಟ್ರೀಯ

ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಭೂಕಂಪ : ನಾಲ್ವರ ಸಾವು

ಅಫ್ಘಾನಿಸ್ತಾನ : ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಶನಿವಾರ ಸಂಭವಿಸಿದ ಭೂಕಂಪದಲ್ಲಿ ಇಲ್ಲಿಯವರೆಗೆ 4 ಸಾವಿರ ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 6.2 ತೀವ್ರತೆಯ ಎರಡು ಭೂಕಂಪಗಳಲ್ಲಿ ಸುಮಾರು 2,000 ಮನೆಗಳು ನೆಲಸಮವಾಗಿದೆ ಎಂದು ಅಫ್ಘಾನಿಸ್ತಾನ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಅಂಕಿಅಂಶಗಳ ಪ್ರಕಾರ ಇಲ್ಲಿಯವರೆಗೆ ಸಾವು -ನೋವಿನ ಸಂಖ್ಯೆ 4 ಸಾವಿರಕ್ಕೆ ಏರಿಕೆಯಾಗಿದೆ ಎಂದು ಎಎನ್​​​ಡಿಎಮ್​​​ಎ ಹೇಳಿದೆ.

ಸೋಮವಾರ ನೀಡಿದ ವರದಿಗಳ ಪ್ರಕಾರ 2,400 ಜನ ಸಾವನ್ನಪ್ಪಿದರು ಎಂದು ಹೇಳಲಾಗಿತ್ತು. ಹೆರಾತ್‌ನ ಜಿಂದಾ ಜನ್ ಜಿಲ್ಲೆಯ 13 ಹಳ್ಳಿಗಳಲ್ಲಿ ವಾಸಿಸುತ್ತಿದ್ದವರು ಹೆಚ್ಚಿನ ಮಂದಿ ಭೂಕಂಪಕ್ಕೆ ಬಲಿಯಾಗಿದ್ದಾರೆ. 1,320 ಮನೆಗಳು ನಾಶವಾಗಿವೆ ಎಂದು ವರದಿ ಹೇಳಿತ್ತು. ಇನ್ನು ಎಎನ್-ಡಿಎಂಎ ಹೇಳಿರುವ ಪ್ರಕಾರ ದಿನದಿಂದ ದಿನಕ್ಕೆ ಭೂಕಂಪದಿಂದ ಸಾವನ್ನಪ್ಪಿರುವವ ಸಂಖ್ಯೆ ಹೆಚ್ಚುತ್ತಿದೆ ಎಂದು ಹೇಳಲಾಗಿದೆ.

ಗಾಯಗೊಂಡವರನ್ನು ಆಸ್ಪತ್ರೆಗಳಿಗೆ ಸಾಗಿಸಲಾಗಿದ್ದು. ಇದಕ್ಕೆ 12 ಆಂಬ್ಯುಲೆನ್ಸ್‌ಗಳನ್ನು ಕಳುಹಿಸಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿತ್ತು. ಅಫ್ಘಾನಿಸ್ತಾನದ ಹಂಗಾಮಿ ಪ್ರಧಾನಿ ಮೊಹಮ್ಮದ್ ಹಸನ್ ಅಖುಂಡ್ ಅವರು ಸೋಮವಾರ ಹೆರಾತ್ ಪ್ರಾಂತ್ಯದ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲು ಅಧಿಕಾರಿಗಳಿಗೆ ಹೇಳಿದ್ದರು. ಇನ್ನು ಚೀನಾ ಭಾನುವಾರ ಅಫ್ಘಾನ್ ರೆಡ್ ಕ್ರೆಸೆಂಟ್‌ಗೆ 200,000 ಯುಎಸ್ (1,66,49,480.00) ಡಾಲರ್‌ಗಳನ್ನು ತುರ್ತು ಮಾನವೀಯ ನರೆವು ನೀಡಿದೆ.

 

lokesh

Share
Published by
lokesh

Recent Posts

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: ನಿತಿನ್‌ ನಬಿನ್‌ಗೆ ರಾಜೀನಾಮೆ ಸಲ್ಲಿಕೆ

ನವದೆಹಲಿ: ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರನ್ನು ಭೇಟಿಯಾಗಿ ರಾಜೀನಾಮೆ…

1 hour ago

ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಸಹೋದರ ವಾಸುದೇವನ್‌ ನಿಧನ

ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್‌ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…

2 hours ago

ನಾಳೆ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…

3 hours ago

ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶ

ಬೆಂಗಳೂರು: ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ…

3 hours ago

ನಿನಗೆ ಹುಚ್ಚು ಹಿಡಿದಿದ್ಯಾ?: ನೆತನ್ಯಾಹು ವಿರುದ್ಧ ಡೊನಾಲ್ಡ್‌ ಟ್ರಂಪ್‌ ಕೆಂಡಾಮಂಡಲ

ವಾಷಿಂಗ್ಟನ್:‌ ದೂರವಾಣಿ ಸಂಭಾಷಣೆ ವೇಳೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ವಿರುದ್ಧ ಆಕ್ರೋಶ…

4 hours ago

ಎಲ್ಲೆಂದರಲ್ಲಿ ಕಸ ಎಸೆಯಲು ವಿದ್ಯೆ ಕಲಿಯಬೇಕೆ?!

ಟಿ.ಕೆ.ಹರೀಶ್ (ಲೇಖಕರು ಹಿರಿಯ ಸಹಾಯಕ ನಿರ್ದೇಶಕರು)  ಬಾಲ್ಯದಿಂದಲೇ ಶಿಕ್ಷಣದ ಜೊತೆಗೆ ಪರಿಸರ ಜಾಗೃತಿ ಮೂಡಿಸಬೇಕು ಮೈಸೂರು ತನ್ನದೇ ಆದ ಸುಂದರವಾದ…

9 hours ago