ಅಫ್ಘಾನಿಸ್ತಾನ : ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಶನಿವಾರ ಸಂಭವಿಸಿದ ಭೂಕಂಪದಲ್ಲಿ ಇಲ್ಲಿಯವರೆಗೆ 4 ಸಾವಿರ ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 6.2 ತೀವ್ರತೆಯ ಎರಡು ಭೂಕಂಪಗಳಲ್ಲಿ ಸುಮಾರು 2,000 ಮನೆಗಳು ನೆಲಸಮವಾಗಿದೆ ಎಂದು ಅಫ್ಘಾನಿಸ್ತಾನ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಅಂಕಿಅಂಶಗಳ ಪ್ರಕಾರ ಇಲ್ಲಿಯವರೆಗೆ ಸಾವು -ನೋವಿನ ಸಂಖ್ಯೆ 4 ಸಾವಿರಕ್ಕೆ ಏರಿಕೆಯಾಗಿದೆ ಎಂದು ಎಎನ್ಡಿಎಮ್ಎ ಹೇಳಿದೆ.
ಸೋಮವಾರ ನೀಡಿದ ವರದಿಗಳ ಪ್ರಕಾರ 2,400 ಜನ ಸಾವನ್ನಪ್ಪಿದರು ಎಂದು ಹೇಳಲಾಗಿತ್ತು. ಹೆರಾತ್ನ ಜಿಂದಾ ಜನ್ ಜಿಲ್ಲೆಯ 13 ಹಳ್ಳಿಗಳಲ್ಲಿ ವಾಸಿಸುತ್ತಿದ್ದವರು ಹೆಚ್ಚಿನ ಮಂದಿ ಭೂಕಂಪಕ್ಕೆ ಬಲಿಯಾಗಿದ್ದಾರೆ. 1,320 ಮನೆಗಳು ನಾಶವಾಗಿವೆ ಎಂದು ವರದಿ ಹೇಳಿತ್ತು. ಇನ್ನು ಎಎನ್-ಡಿಎಂಎ ಹೇಳಿರುವ ಪ್ರಕಾರ ದಿನದಿಂದ ದಿನಕ್ಕೆ ಭೂಕಂಪದಿಂದ ಸಾವನ್ನಪ್ಪಿರುವವ ಸಂಖ್ಯೆ ಹೆಚ್ಚುತ್ತಿದೆ ಎಂದು ಹೇಳಲಾಗಿದೆ.
ಗಾಯಗೊಂಡವರನ್ನು ಆಸ್ಪತ್ರೆಗಳಿಗೆ ಸಾಗಿಸಲಾಗಿದ್ದು. ಇದಕ್ಕೆ 12 ಆಂಬ್ಯುಲೆನ್ಸ್ಗಳನ್ನು ಕಳುಹಿಸಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿತ್ತು. ಅಫ್ಘಾನಿಸ್ತಾನದ ಹಂಗಾಮಿ ಪ್ರಧಾನಿ ಮೊಹಮ್ಮದ್ ಹಸನ್ ಅಖುಂಡ್ ಅವರು ಸೋಮವಾರ ಹೆರಾತ್ ಪ್ರಾಂತ್ಯದ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲು ಅಧಿಕಾರಿಗಳಿಗೆ ಹೇಳಿದ್ದರು. ಇನ್ನು ಚೀನಾ ಭಾನುವಾರ ಅಫ್ಘಾನ್ ರೆಡ್ ಕ್ರೆಸೆಂಟ್ಗೆ 200,000 ಯುಎಸ್ (1,66,49,480.00) ಡಾಲರ್ಗಳನ್ನು ತುರ್ತು ಮಾನವೀಯ ನರೆವು ನೀಡಿದೆ.
ಮೈಸೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…
ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…
ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…
ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…
ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…
ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…