ಇಸ್ಲಾಮಾಬಾದ್ : ಪಾಕಿಸ್ತಾನ ಮೂಲದ ಲಷ್ಕರ್ ತೋಯ್ಬಾ ಸಂಘಟನೆಯ ಹಿರಿಯ ಕಮಾಂಡರ್ ಅಕ್ರಂ ಖಾನ್ ಘಾಜಿ ಕೊಲೆ ಹಿನ್ನಲೆಯಲ್ಲೇ ಮತ್ತೊಬ್ಬ ಉಗ್ರನ ಹತ್ಯೆ ನಡೆದಿದೆ. ಜೈಶ್ ಎ ಮೊಹಮ್ಮದ್ ಸಂಘಟನೆಯ ಉಗ್ರ ಹಾಗೂ ಮೌಲಾನ್ ಮಸೂದ್ ಅಕರ್ನ ಆಪ್ತ ಸ್ನೇಹಿತ ಮೌಲಾನಾ ರಹೀಮ್ ಉಲ್ಲಾ ತಾರೀಖ್ನನ್ನು ಹತ್ತಿಕ್ಕಿ ಕೊಂದಿದ್ದಾರೆ.
ಕರಾಚಿಯಲ್ಲಿ ಭಾರತ ವಿರೋಧಿ ಸಮಾವೇಷದಲ್ಲಿ ಭಾಷಣ ಮಾಡಲು ತೆರಳುತ್ತಿದ್ದಾಗ ಕರಾಚಿಯ ಓರಂಗಿ ಪಟ್ಟಣ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.
ರಹೀಮ್ ಉಲ್ಲಾ ತಾರೀಖ್ ಓರ್ವ ಮೌಲಾನಾಗಿದ್ದು, ತನ್ನ ಭಾಷಣಗಳನ್ನು ಸಾವಿರಾರು ಜನರು ಸೇರುವ ಧಾರ್ಮಿಕ ಸಮಾವೇಶಗಳಲ್ಲಿ ಭಾರತ ವಿರೋಧಿ ಭಾಷಣ ಮಾಡುತ್ತಿದ್ದನು. ಜತೆಗೆ ಲಷ್ಕರ್ ಸಂಘಟನೆಗೆ ಯುವಕರನ್ನು ಪ್ರಚೋದಿಸುವುದು, ನೇಮಕ ಮಾಡುವ ಹೊಣೆಗಾರಿಕೆಯನ್ನು ನೋಡಿಕೊಳ್ಳುತ್ತಿದ್ದನು. ಭಾರತದ ಕಾಶ್ಮೀರಿ ಕಣಿವೆಯಲ್ಲಿ ಉಗ್ರರ ದಾಳಿಯಲ್ಲಿ ಈತನ ಪಾಲು ಇತ್ತು.
ಇಂದು ಅಪರಿವಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿ ಕೊಂದಿದ್ದು, ಈ ಹತ್ಯೆಗಳ ಹಿನ್ನಲೆ ನಿಗೂಢವಾಗಿಯೇ ಉಳಿದಿದೆ. ಮತ್ತು ಈ ದಾಳಿಗಳ ಬಗ್ಗೆ ಇದುವರೆಗೂ ಯಾವುದೇ ಸಂಘಟನೆಗಳು ಹೊಣೆ ಹೊತ್ತುಕೊಂಡಿಲ್ಲದೇ ಇರುವುದು ಹಲವು ಕೌತುಕಗಳಿಗೆ ದಾರಿ ಮಾಡಿಕೊಟ್ಟಿದೆ.
ದಾವಣಗೆರೆ: ಕೊಡಗಿನ ತಡಿಯಾಂಡಮೋಳ್ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…
ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್ಎಸ್ಆರ್ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…
ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…